AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ವೈಟ್‌ಫೀಲ್ಡ್‌ನಲ್ಲಿ ನೀರಿನ ಸಮಸ್ಯೆ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಕೊಂಡ ಲೋಕಾಯುಕ್ತ

ಬೆಂಗಳೂರು ಮಹಾನಗರದ ವೈಟ್‌ಫೀಲ್ಡ್ ಪ್ರದೇಶದ ನಿವಾಸಿಗಳು ಕಳೆದ ಐದು ತಿಂಗಳಿನಿಂದ ತಮ್ಮ ಕಾಲೋನಿಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದು, ಈ ಹಿನ್ನೆಲೆ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

Bengaluru News: ವೈಟ್‌ಫೀಲ್ಡ್‌ನಲ್ಲಿ ನೀರಿನ ಸಮಸ್ಯೆ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಕೊಂಡ ಲೋಕಾಯುಕ್ತ
ಲೋಕಾಯುಕ್ತ
ವಿವೇಕ ಬಿರಾದಾರ
|

Updated on:Jun 10, 2023 | 7:55 AM

Share

ಬೆಂಗಳೂರು: ಮಹಾನಗರದ (Bengaluru) ವೈಟ್‌ಫೀಲ್ಡ್ (Whitefield) ಪ್ರದೇಶದ ನಿವಾಸಿಗಳು ದಿನನಿತ್ಯದ ಬಳಕೆಗೆ ಸಾಕಾಗುವಷ್ಟು ನೀರು ದೊರೆಯದೆ ಪರದಾಡುತ್ತಿದ್ದಾರೆ. ಕಳೆದ ಐದು ತಿಂಗಳಿನಿಂದ ತಮ್ಮ ಕಾಲೋನಿಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಈ ಹಿನ್ನೆಲೆ ಲೋಕಾಯುಕ್ತ (Lokayukta) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ವೈಟ್‌ಫೀಲ್ಡ್ ನೀವಾಸಿಗಳು ತಿಂಗಳಿಗೆ ನೀರು ಪೂರೈಸುವ ಟ್ಯಾಂಕರ್‌ಗಳನ್ನು ಕಾಯ್ದಿರಿಸಲು ತಿಂಗಳಿಗೆ 10,000 ರೂ. ನೀಡುತ್ತಿದ್ದಾರೆ. ವೈಟ್‌ಫೀಲ್ಡ್ ಹತ್ತಿರವಿರುವ ರಾಮಗೊಂಡನಹಳ್ಳಿ, ಸಿದ್ದಾಪುರ ಮತ್ತು ತೂಬರಹಳ್ಳಿ ಗ್ರಾಮಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಂಪರ್ಕವನ್ನು ಹೊಂದಿಲ್ಲ.

ಇದರಿಂದಾಗಿ ಅಲ್ಲಿನ ನಿವಾಸಿಗಳು ನೀರಿನ ಟ್ಯಾಂಕರ್‌ಗಳನ್ನು ಅವಲಂಬಿಸಿದ್ದಾರೆ. ಕಳೆದ ಐದು ತಿಂಗಳಿಂದ ಅನೇಕ ಗ್ರಾಮಸ್ಥರು ತಿಂಗಳಿಗೆ 10 ಸಾವಿರದಂತೆ ಸುಮಾರು 50 ಸಾವಿರ ರೂ. ಖರ್ಚು ಮಾಡಿ ಟ್ಯಾಂಕರ್​ ಮೂಲಕ ನೀರನ್ನು ಪಡೆಯುತ್ತಿದ್ದಾರೆ.

ಈ ಮೊದಲು ಅವರು ತಿಂಗಳಿಗೆ 500 ರಿಂದ 600 ರೂ. ನೀಡಲಾಗುತ್ತಿದ್ದು, ಆದರೆ ಈಗ ಟ್ಯಾಂಕರ್​ ನೀರಿನ ಅವಶ್ಯಕತೆ ಹೆಚ್ಚಾದ ಹಿನ್ನೆಲೆ ಪ್ರತಿ ಟ್ಯಾಂಕರ್​ ನೀರಿನ ಬೆಲೆಯೂ ಕೂಡ ಏರಿಕೆಯಾಗಿದೆ. ಜೀವಿಸುವ ಹಕ್ಕು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ವೈಟ್​ಫಿಲ್ಡ್ ನಿವಾಸಿಗಳಿಗೆ ಜಲ ಕಂಟಕ: ಟ್ಯಾಂಕರ್​ ನೀರಿಗಾಗಿ ಪ್ರತಿ ತಿಂಗಳು 10 ಸಾವಿರ ರೂ. ಖರ್ಚು

ಉತ್ತಮ ಕುಡಿಯುವ ನೀರು ಪಡೆಯುವ ಅರ್ಹತೆಯು ಭಾರತದ ಸಂವಿಧಾನದ 21 ನೇ ವಿಧಿಯಡಿಯಲ್ಲಿ ಜೀವಿಸುವ ಹಕ್ಕಿನ ಭಾಗವಾಗಿದೆ. ಶುದ್ಧ ಕುಡಿಯುವ ನೀರನ್ನು ಪಡೆಯುವ ಹಕ್ಕು ಮೂಲಭೂತ ಹಕ್ಕಾಗಿದೆ ಮತ್ತು 21 ನೇ ವಿಧಿಯ ಅಡಿಯಲ್ಲಿ ನಾಗರಿಕರಿಗೆ ಶುದ್ಧ ನೀರನ್ನು ಒದಗಿಸುವುದು ರಾಜ್ಯದ ಕರ್ತವ್ಯವಾಗಿದೆ.

ಉಪ ಲೋಕಾಯುಕ್ತರು, ಮಾಧ್ಯಮ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಲೋಕಾಯುಕ್ತ ಕಾಯಿದೆ 1984 ರ ಸೆಕ್ಷನ್ 7(1) R/w 9(3)(a) ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ತಮ್ಮ ಕಚೇರಿಗೆ ನಿರ್ದೇಶನ ನೀಡಿದರು. ರಾಮಗೊಂಡನಹಳ್ಳಿಗೆ ತಕ್ಷಣ ನೀರು ಸರಬರಾಜು ಮಾಡಬೇಕು, ಈ ಪ್ರದೇಶದ ನಿವಾಸಿಗಳಿಗೆ ರಸ್ತೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಸಕ್ತಿ ವಹಿಸಬೇಕು ಎಂದು ಬಿಬಿಎಂಪಿಯ ಇಬ್ಬರು ಕಂದಾಯ ಅಧಿಕಾರಿಗಳಿಗೆ ಉಪ ಲೋಕಾಯುಕ್ತರು ಸೂಚಿಸಿದ್ದಾರೆ. ಈ ಗ್ರಾಮಕ್ಕೆ ನಿತ್ಯ ಕುಡಿಯುವ ನೀರು ಏಕೆ ಪೂರೈಕೆಯಾಗುತ್ತಿಲ್ಲ ಎಂಬ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಲೋಕಾಯುಕ್ತ ಸೂಚನೆ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:55 am, Sat, 10 June 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!