AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕೆಆರ್ ಸರ್ಕಲ್ ಅಂಡರ್‌ಪಾಸ್‌ ಪರಿಶೀಲನೆ ನಡೆಸಿದ ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್

ಯುವತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದಾಗ ಅಂಡರ್‌ಪಾಸ್‌ನಲ್ಲಿ ಏನು ಸಮಸ್ಯೆಯಾಗಿತ್ತು ಎಂಬುದನ್ನು ನಾವು ತಿಳಿದುಕೊಳ್ಳಲಿದ್ದೇವೆ. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಲೋಪ ಆಗಿದೆಯೇ ಮತ್ತು ಘಟನೆಗೆ ಕಾರಣವೇನು ಎಂಬುದರ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಎಂದು ರಾವ್ ಹೇಳಿದರು.

Bengaluru News: ಕೆಆರ್ ಸರ್ಕಲ್ ಅಂಡರ್‌ಪಾಸ್‌ ಪರಿಶೀಲನೆ ನಡೆಸಿದ ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್
ಕೆಆರ್ ಸರ್ಕಲ್ ಅಂಡರ್‌ಪಾಸ್​​ನಲ್ಲಿ ಮುಳುಗಿದ್ದ ಕಾರು (ಸಮಗ್ರಹ ಚಿತ್ರ)
Ganapathi Sharma
|

Updated on: Jun 07, 2023 | 6:30 PM

Share

ಬೆಂಗಳೂರು: ಮೇ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಕಾರು ಮುಳುಗಿ ಯುವತಿಯೊಬ್ಬರು ಸಾವನ್ನಪ್ಪಿದ್ದ ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್‌ಪಾಸ್‌ಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಮಹಾನಿರೀಕ್ಷಕ (Lokayukta IGP) ಡಾ ಸುಬ್ರಹ್ಮಣ್ಯೇಶ್ವರ ರಾವ್ ಬುಧವಾರ ಭೇಟಿ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳನ್ನು ಭೇಟಿ ಮಾಡಿದ ಸುಬ್ರಹ್ಮಣ್ಯೇಶ್ವರ ರಾವ್, ಅಂಡರ್​ಪಾಸ್​ ಪರಿಶೀಲನೆ ನಡೆಸಿದರು.

ಯುವತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದಾಗ ಅಂಡರ್‌ಪಾಸ್‌ನಲ್ಲಿ ಏನು ಸಮಸ್ಯೆಯಾಗಿತ್ತು ಎಂಬುದನ್ನು ನಾವು ತಿಳಿದುಕೊಳ್ಳಲಿದ್ದೇವೆ ಎಂದು ಎಂದು ರಾವ್ ಹೇಳಿದರು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಲೋಪ ಆಗಿದೆಯೇ ಮತ್ತು ಘಟನೆಗೆ ಕಾರಣವೇನು ಎಂಬುದರ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ. ಈ ಕುರಿತ ವರದಿ ಲೋಕಾಯುಕ್ತಕ್ಕೂ ಸಲ್ಲಿಕೆಯಾಗಲಿದೆ. ಬಿಬಿಎಂಪಿ ಅಧಿಕಾರಿಗಳೊಂದಿಗೂ ಚರ್ಚೆ ನಡೆಸುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಮೇ 21 ರಂದು ಜಲಾವೃತಗೊಂಡ ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕಾರು ಸಿಲುಕಿ ಯುವತಿ ಭಾನುರೇಖಾ (22) ಮೃತಪಟ್ಟಿದ್ದರು. ನಗರದಲ್ಲಿ ಭಾರೀ ಮಳೆಯ ನಂತರ ಈ ಘಟನೆ ಸಂಭವಿಸಿತ್ತು. ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದ ಭಾನುರೇಖಾ ಅವರ ಕುಟುಂಬದ ಕೆಲವು ಸದಸ್ಯರು ಮತ್ತು ಕಾರು ಚಾಲಕನನ್ನು ರಕ್ಷಿಸಲಾಗಿತ್ತು.

ಇದನ್ನೂ ಓದಿ: ಕೆಆರ್​ ಸರ್ಕಲ್​ ಅಂಡರ್​ಪಾಸ್​ ನಲ್ಲಿ ಯುವತಿ ಸಾವು: ಸುಮೋಟೋ ಕೇಸ್ ತನಿಖೆ ಚುರುಕುಗೊಳಿಸಿದ ಲೋಕಾಯುಕ್ತ

ನಂತರ ಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಎಂಟು ಮಂದಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದರು. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.

ಈ ಮಧ್ಯೆ, ಆರ್​ ಸರ್ಕಲ್​ ಅಂಡರ್​ಪಾಸ್​ ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು