AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕೆಆರ್ ಸರ್ಕಲ್ ಅಂಡರ್‌ಪಾಸ್‌ ಪರಿಶೀಲನೆ ನಡೆಸಿದ ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್

ಯುವತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದಾಗ ಅಂಡರ್‌ಪಾಸ್‌ನಲ್ಲಿ ಏನು ಸಮಸ್ಯೆಯಾಗಿತ್ತು ಎಂಬುದನ್ನು ನಾವು ತಿಳಿದುಕೊಳ್ಳಲಿದ್ದೇವೆ. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಲೋಪ ಆಗಿದೆಯೇ ಮತ್ತು ಘಟನೆಗೆ ಕಾರಣವೇನು ಎಂಬುದರ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಎಂದು ರಾವ್ ಹೇಳಿದರು.

Bengaluru News: ಕೆಆರ್ ಸರ್ಕಲ್ ಅಂಡರ್‌ಪಾಸ್‌ ಪರಿಶೀಲನೆ ನಡೆಸಿದ ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್
ಕೆಆರ್ ಸರ್ಕಲ್ ಅಂಡರ್‌ಪಾಸ್​​ನಲ್ಲಿ ಮುಳುಗಿದ್ದ ಕಾರು (ಸಮಗ್ರಹ ಚಿತ್ರ)
Follow us
Ganapathi Sharma
|

Updated on: Jun 07, 2023 | 6:30 PM

ಬೆಂಗಳೂರು: ಮೇ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಕಾರು ಮುಳುಗಿ ಯುವತಿಯೊಬ್ಬರು ಸಾವನ್ನಪ್ಪಿದ್ದ ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್‌ಪಾಸ್‌ಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಮಹಾನಿರೀಕ್ಷಕ (Lokayukta IGP) ಡಾ ಸುಬ್ರಹ್ಮಣ್ಯೇಶ್ವರ ರಾವ್ ಬುಧವಾರ ಭೇಟಿ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳನ್ನು ಭೇಟಿ ಮಾಡಿದ ಸುಬ್ರಹ್ಮಣ್ಯೇಶ್ವರ ರಾವ್, ಅಂಡರ್​ಪಾಸ್​ ಪರಿಶೀಲನೆ ನಡೆಸಿದರು.

ಯುವತಿಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದಾಗ ಅಂಡರ್‌ಪಾಸ್‌ನಲ್ಲಿ ಏನು ಸಮಸ್ಯೆಯಾಗಿತ್ತು ಎಂಬುದನ್ನು ನಾವು ತಿಳಿದುಕೊಳ್ಳಲಿದ್ದೇವೆ ಎಂದು ಎಂದು ರಾವ್ ಹೇಳಿದರು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಲೋಪ ಆಗಿದೆಯೇ ಮತ್ತು ಘಟನೆಗೆ ಕಾರಣವೇನು ಎಂಬುದರ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ. ಈ ಕುರಿತ ವರದಿ ಲೋಕಾಯುಕ್ತಕ್ಕೂ ಸಲ್ಲಿಕೆಯಾಗಲಿದೆ. ಬಿಬಿಎಂಪಿ ಅಧಿಕಾರಿಗಳೊಂದಿಗೂ ಚರ್ಚೆ ನಡೆಸುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ಮೇ 21 ರಂದು ಜಲಾವೃತಗೊಂಡ ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ ಕಾರು ಸಿಲುಕಿ ಯುವತಿ ಭಾನುರೇಖಾ (22) ಮೃತಪಟ್ಟಿದ್ದರು. ನಗರದಲ್ಲಿ ಭಾರೀ ಮಳೆಯ ನಂತರ ಈ ಘಟನೆ ಸಂಭವಿಸಿತ್ತು. ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದ ಭಾನುರೇಖಾ ಅವರ ಕುಟುಂಬದ ಕೆಲವು ಸದಸ್ಯರು ಮತ್ತು ಕಾರು ಚಾಲಕನನ್ನು ರಕ್ಷಿಸಲಾಗಿತ್ತು.

ಇದನ್ನೂ ಓದಿ: ಕೆಆರ್​ ಸರ್ಕಲ್​ ಅಂಡರ್​ಪಾಸ್​ ನಲ್ಲಿ ಯುವತಿ ಸಾವು: ಸುಮೋಟೋ ಕೇಸ್ ತನಿಖೆ ಚುರುಕುಗೊಳಿಸಿದ ಲೋಕಾಯುಕ್ತ

ನಂತರ ಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಎಂಟು ಮಂದಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದರು. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.

ಈ ಮಧ್ಯೆ, ಆರ್​ ಸರ್ಕಲ್​ ಅಂಡರ್​ಪಾಸ್​ ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ