AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ದಾಳಿ: ಕೆಆರ್​ ಪುರ ತಹಶೀಲ್ದಾರ್ ಆಯ್ತು ಈಗ ಸರ್ವೆ ಸೂಪರ್​​ವೈಸರ್ ಅರೆಸ್ಟ್

ಅದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಕೆಆರ್​ ಪುರ ಸರ್ವೆ ಸೂಪರ್​ವೈಸರ್​ ಕೆ.ಟಿ ಶ್ರೀನಿವಾಸ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಶ್ರೀನಿವಾಸ್ ಮನೆತಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಸಿಕ್ಕಿವೆ. ಹೀಗಾಗಿ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ನಡೆಸಿದ್ದಾರೆ.

ಲೋಕಾಯುಕ್ತ ದಾಳಿ: ಕೆಆರ್​ ಪುರ ತಹಶೀಲ್ದಾರ್ ಆಯ್ತು ಈಗ ಸರ್ವೆ ಸೂಪರ್​​ವೈಸರ್ ಅರೆಸ್ಟ್
ಲೋಕಾಯುಕ್ತ(ಸಂಗ್ರಹ ಚಿತ್ರ)
Jagadisha B
| Edited By: |

Updated on: Aug 23, 2023 | 10:42 AM

Share

ಬೆಂಗಳೂರು, (ಆಗಸ್ಟ್ 23): ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್​​ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ(lokayukta) ಬಂಧಿಸಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿನ್ನೆ (ಆಗಸ್ಟ್ 23) ಶ್ರೀನಿವಾಸಮೂರ್ತಿ ಅವರ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಲೋಕಾತಯುಕ್ತ ಬಂಧಿಸಿ ವಿಚಾರಣೆಗೊಳಪಡಿಸಿದೆ.

ಬೆಂಗಳೂರಿನ ಕಲ್ಕೆರೆ ನಿವಾಸದ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಶ್ರಿನಿವಾಸ್ ಸೋದರಿ ಹಾಗೂ ಸೋದರನ ಮನೆ ಸೇರಿದಂತೆ 14 ಕಡೆ ದಾಳಿ ಮಾಡಿದ್ದರು. ರಿಯಲ್ ಎಸ್ಟೇಟ್​ನಲ್ಲೂ ಹೂಡಿಕೆ ಮಾಡಿರುವ ಬಗ್ಗೆ ದಾಖಲೆ ಲಭ್ಯವಾಗಿವೆ. ಹೀಗಾಗಿ ಶ್ರೀನಿವಾಸ್ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇನ್ನು ಶ್ರೀನಿವಾಸ್ ಅವರನ್ನು ಇಂದು (ಆಗಸ್ಟ್ 23) ಸಂಜೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಆ ವೇಳೆ ತಮ್ಮ ವಶಕ್ಕೆ ಕೇಳಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ

ಕಳೆದ ಜೂನ್​ ತಿಮಗಳಲ್ಲಿ ಇದೇ ಕೆಆರ್ ಪುರಂ ತಹಶೀಲ್ದಾರ್ ಆಗಿದ್ದ ಅಜಿತ್​ ರೈ ಅವರ ಮೇಲೂ ಸಹ ಲೋಕಾಯುಕ್ತ ದಾಳಿಯಾಗಿತ್ತು. ಆ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಜಿತ್ ರೈ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅಜಿತ್ ರೈ ಜಾಮೀನಿನ ಮೇಲೆ ಆಚೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ