AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ದಾಳಿ: ಕೆಆರ್​ ಪುರ ತಹಶೀಲ್ದಾರ್ ಆಯ್ತು ಈಗ ಸರ್ವೆ ಸೂಪರ್​​ವೈಸರ್ ಅರೆಸ್ಟ್

ಅದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಕೆಆರ್​ ಪುರ ಸರ್ವೆ ಸೂಪರ್​ವೈಸರ್​ ಕೆ.ಟಿ ಶ್ರೀನಿವಾಸ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಶ್ರೀನಿವಾಸ್ ಮನೆತಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಸಿಕ್ಕಿವೆ. ಹೀಗಾಗಿ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ನಡೆಸಿದ್ದಾರೆ.

ಲೋಕಾಯುಕ್ತ ದಾಳಿ: ಕೆಆರ್​ ಪುರ ತಹಶೀಲ್ದಾರ್ ಆಯ್ತು ಈಗ ಸರ್ವೆ ಸೂಪರ್​​ವೈಸರ್ ಅರೆಸ್ಟ್
ಲೋಕಾಯುಕ್ತ(ಸಂಗ್ರಹ ಚಿತ್ರ)
Jagadisha B
| Edited By: |

Updated on: Aug 23, 2023 | 10:42 AM

Share

ಬೆಂಗಳೂರು, (ಆಗಸ್ಟ್ 23): ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್​​ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ(lokayukta) ಬಂಧಿಸಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿನ್ನೆ (ಆಗಸ್ಟ್ 23) ಶ್ರೀನಿವಾಸಮೂರ್ತಿ ಅವರ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಲೋಕಾತಯುಕ್ತ ಬಂಧಿಸಿ ವಿಚಾರಣೆಗೊಳಪಡಿಸಿದೆ.

ಬೆಂಗಳೂರಿನ ಕಲ್ಕೆರೆ ನಿವಾಸದ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಶ್ರಿನಿವಾಸ್ ಸೋದರಿ ಹಾಗೂ ಸೋದರನ ಮನೆ ಸೇರಿದಂತೆ 14 ಕಡೆ ದಾಳಿ ಮಾಡಿದ್ದರು. ರಿಯಲ್ ಎಸ್ಟೇಟ್​ನಲ್ಲೂ ಹೂಡಿಕೆ ಮಾಡಿರುವ ಬಗ್ಗೆ ದಾಖಲೆ ಲಭ್ಯವಾಗಿವೆ. ಹೀಗಾಗಿ ಶ್ರೀನಿವಾಸ್ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇನ್ನು ಶ್ರೀನಿವಾಸ್ ಅವರನ್ನು ಇಂದು (ಆಗಸ್ಟ್ 23) ಸಂಜೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಆ ವೇಳೆ ತಮ್ಮ ವಶಕ್ಕೆ ಕೇಳಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ

ಕಳೆದ ಜೂನ್​ ತಿಮಗಳಲ್ಲಿ ಇದೇ ಕೆಆರ್ ಪುರಂ ತಹಶೀಲ್ದಾರ್ ಆಗಿದ್ದ ಅಜಿತ್​ ರೈ ಅವರ ಮೇಲೂ ಸಹ ಲೋಕಾಯುಕ್ತ ದಾಳಿಯಾಗಿತ್ತು. ಆ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಜಿತ್ ರೈ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅಜಿತ್ ರೈ ಜಾಮೀನಿನ ಮೇಲೆ ಆಚೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ