Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ದಾಳಿ: ಕೆಆರ್​ ಪುರ ತಹಶೀಲ್ದಾರ್ ಆಯ್ತು ಈಗ ಸರ್ವೆ ಸೂಪರ್​​ವೈಸರ್ ಅರೆಸ್ಟ್

ಅದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಕೆಆರ್​ ಪುರ ಸರ್ವೆ ಸೂಪರ್​ವೈಸರ್​ ಕೆ.ಟಿ ಶ್ರೀನಿವಾಸ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಶ್ರೀನಿವಾಸ್ ಮನೆತಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಸಿಕ್ಕಿವೆ. ಹೀಗಾಗಿ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ನಡೆಸಿದ್ದಾರೆ.

ಲೋಕಾಯುಕ್ತ ದಾಳಿ: ಕೆಆರ್​ ಪುರ ತಹಶೀಲ್ದಾರ್ ಆಯ್ತು ಈಗ ಸರ್ವೆ ಸೂಪರ್​​ವೈಸರ್ ಅರೆಸ್ಟ್
ಲೋಕಾಯುಕ್ತ(ಸಂಗ್ರಹ ಚಿತ್ರ)
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on: Aug 23, 2023 | 10:42 AM

ಬೆಂಗಳೂರು, (ಆಗಸ್ಟ್ 23): ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್​​ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ(lokayukta) ಬಂಧಿಸಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿನ್ನೆ (ಆಗಸ್ಟ್ 23) ಶ್ರೀನಿವಾಸಮೂರ್ತಿ ಅವರ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಲೋಕಾತಯುಕ್ತ ಬಂಧಿಸಿ ವಿಚಾರಣೆಗೊಳಪಡಿಸಿದೆ.

ಬೆಂಗಳೂರಿನ ಕಲ್ಕೆರೆ ನಿವಾಸದ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಶ್ರಿನಿವಾಸ್ ಸೋದರಿ ಹಾಗೂ ಸೋದರನ ಮನೆ ಸೇರಿದಂತೆ 14 ಕಡೆ ದಾಳಿ ಮಾಡಿದ್ದರು. ರಿಯಲ್ ಎಸ್ಟೇಟ್​ನಲ್ಲೂ ಹೂಡಿಕೆ ಮಾಡಿರುವ ಬಗ್ಗೆ ದಾಖಲೆ ಲಭ್ಯವಾಗಿವೆ. ಹೀಗಾಗಿ ಶ್ರೀನಿವಾಸ್ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇನ್ನು ಶ್ರೀನಿವಾಸ್ ಅವರನ್ನು ಇಂದು (ಆಗಸ್ಟ್ 23) ಸಂಜೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಆ ವೇಳೆ ತಮ್ಮ ವಶಕ್ಕೆ ಕೇಳಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ

ಕಳೆದ ಜೂನ್​ ತಿಮಗಳಲ್ಲಿ ಇದೇ ಕೆಆರ್ ಪುರಂ ತಹಶೀಲ್ದಾರ್ ಆಗಿದ್ದ ಅಜಿತ್​ ರೈ ಅವರ ಮೇಲೂ ಸಹ ಲೋಕಾಯುಕ್ತ ದಾಳಿಯಾಗಿತ್ತು. ಆ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಅಜಿತ್ ರೈ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಅಜಿತ್ ರೈ ಜಾಮೀನಿನ ಮೇಲೆ ಆಚೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್