AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದುವರಿದ ಭ್ರಷ್ಟರ ಬೇಟೆ; ಬೆಂಗಳೂರಿನಲ್ಲಿ ಹೆಲ್ತ್ ಇನ್ಸ್​ಪೆಕ್ಟರ್​ ಲೋಕಾಯುಕ್ತ ಬಲೆಗೆ

ದಿನಗಳ ಹಿಂದೆಯಷ್ಟೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರನ ಮನೆಮೇಲೆ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದ ಲೋಕಾಯುಕ್ತ ಪೊಲೀಸರು, ಇದೀಗ ಬೆಂಗಳೂರಿನಲ್ಲಿ ಹೆಲ್ತ್ ಇನ್ಸ್​ಪೆಕ್ಟರ್​ ರಾಮಯ್ಯರನ್ನು ಖೆಡ್ಡಾಕ್ಕೆ ಬೀಳಿಸಿದ್ದಾರೆ.

ಮುಂದುವರಿದ ಭ್ರಷ್ಟರ ಬೇಟೆ; ಬೆಂಗಳೂರಿನಲ್ಲಿ ಹೆಲ್ತ್ ಇನ್ಸ್​ಪೆಕ್ಟರ್​ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ಬಲೆಗೆ ಬಿದ್ದ ಹೆಲ್ತ್ ಇನ್ಸ್​ಪೆಕ್ಟರ್ ರಾಮಯ್ಯ
Rakesh Nayak Manchi
|

Updated on:Mar 04, 2023 | 5:18 PM

Share

ಬೆಂಗಳೂರು: ಕರ್ನಾಟಕದಲ್ಲಿ ಎಸಿಬಿ ರದ್ದುಗೊಂಡು ಲೋಕಾಯುಕ್ತ (Lokayukta) ಮರುಸ್ಥಾಪನೆಯಾದ ನಂತರ ಭ್ರಷ್ಟರ ಮೈಯಲ್ಲಿ ನಡುಕ ಉಂಟಾಗಿದೆ. ಅಲ್ಲೊಂದು ಇಲ್ಲೊಂದು ಎನ್ನುತ್ತಾ ಲೋಕಾಯುಕ್ತ ಪೊಲೀಸರು ದಾಳಿ (Lokayukta Raid At Bengaluru) ನಡೆಸಿ ಭ್ರಷ್ಟರ ಚಳಿ ಬಿಡಿಸುತ್ತಿದ್ದಾರೆ. ದಿನಗಳ ಹಿಂದೆಯಷ್ಟೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಮತ್ತು ಪುತ್ರನ ಮನೆಮೇಲೆ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದ ಲೋಕಾಯುಕ್ತ ಪೊಲೀಸರು, ಇದೀಗ ಬೆಂಗಳೂರಿನಲ್ಲಿ ಓರ್ವ ಹೆಲ್ತ್ ಇನ್ಸ್​ಪೆಕ್ಟರ್ (Helth Inspector)​ ಅವರನ್ನು ಖೆಡ್ಡಾಕ್ಕೆ ಬೀಳಿಸಿದ್ದಾರೆ.

ಸ್ಪಾ ಲೈಸೆನ್ಸ್​ ನವೀಕರಣಕ್ಕಾಗಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಸಿ.ವಿ.ರಾಮನ್​ನಗರದ ಬಿಬಿಎಂಪಿ ಕಚೇರಿಯಲ್ಲಿನ ಹೆಲ್ತ್ ಇನ್ಸ್​​ಪೆಕ್ಟರ್ ರಾಮಯ್ಯ 20,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಸ್ಪಾ ಮಾಲೀಕರು ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಿಸಿದ್ದಾರೆ. ಅದರಂತೆ 20 ಸಾವಿರದ ಹಣದ ಪೈಕಿ 18 ಸಾವಿರ ರೂಪಾಯಿ ನೀಡುತ್ತಿದ್ದ ವೇಳೆ ಸಿ.ವಿ.ರಾಮನ್​ನಗರದ ಬಿಬಿಎಂಪಿ ಕಚೇರಿಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ರಾಮಯ್ಯರನ್ನು ಬಂಧಿಸಿದ್ದಾರೆ. ಸದ್ಯ ಹೆಲ್ತ್ ಇನ್ಸ್ ಪೆಕ್ಟರ್ ರಾಮಯ್ಯರನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ವಿಚಾರಣೆ ಆರಂಭಿಸಿದ್ದು, ಭ್ರಷ್ಟಾಚಾರ ತಡೆಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: KSDL: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ 800 ಕೋಟಿ ಅವ್ಯವಹಾರ ಆರೋಪ

ಪೊಲೀಸ್​ ನೇಮಕಾತಿ ಅಕ್ರಮ: ಕಾನ್ಸ್​ಟೇಬಲ್​ಗಾಗಿ ಸಿಐಡಿ ಹುಡುಕಾಟ

ಬಾಗಲಕೋಟೆ: 2021ನೇ ಸಾಲಿನ ಪೊಲೀಸ್​ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ ಆರೋಪ ಸಂಬಂಧ ತಲೆಮರೆಸಿಕೊಂಡಿರುವ ಬೆಳಗಾವಿ ಜಿಲ್ಲೆಯ ಠಾಣೆಯೊಂದರ ಕಾನ್ಸ್​ಟೇಬಲ್​​ ರಫೀಕ್ ಚಿಮ್ಮಡ್​ ಬಂಧನಕ್ಕೆ ಸಿಐಡಿ ತಂಡ ತೀವ್ರ ಶೋಧ ನಡೆಸುತ್ತಿದೆ. ಸುಳಿವು ಮೇರೆಗೆ ರಫೀಕ್ ಚಿಮ್ಮಡ್​​ ಬಂಧಿಸಲು ತನಿಖಾ ತಂಡ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಕುಲಹಳ್ಳಿಗೆ ಆಗಮಿಸಿ ತಲಾಷ್ ನಡೆಸಿದೆ. ಆದರೆ ಕುಲಹಳ್ಳಿ ನಿವಾಸಿಯಾಗಿರುವ ರಫೀಕ್, ಊರಿನಲ್ಲಿ ಇಲ್ಲದ ಪತ್ತೆಯಾಗದ ಹಿನ್ನಲೆ ಸಿಐಡಿ ತಂಡ ಬೆಳಗಾವಿ ಕಡೆ ತೆರಳಿದೆ. ಸಿಐಡಿ ಡಿವೈಎಸ್​​ಪಿ, ಎಂ.ಆರ್​​.ಮುದವಿ, ಸಿಪಿಐ ರವಿ ಪಾಟೀಲ್, ಮಹೇಶ್ ಕನಕಗಿರಿ ಸೇರಿ ಐವರು ಅಧಿಕಾರಿಗಳನ್ನೊಳಗೊಂಡ ತಂಡದಿಂದ ರಫೀಕ್ ಹುಡುಕಾಟ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:15 pm, Sat, 4 March 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ