Lokayukta Raid: BBMP ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ಕೋಟಿ ಕೋಟಿ ಹಣ, ಚಿನ್ನಾಭರಣ ಪತ್ತೆ!

ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಈ ಪೈಕಿ ಬಿಬಿಎಂಪಿ ADTP ಗಂಗಾಧರಯ್ಯ ಮನೆಯೂ ಒಂದು. ಇವರ ಮನೆಯಲ್ಲಿ ಅಪಾರ ಪ್ರಮಾಣದಲ್ಲಿ ನಗದು, ಚಿನ್ನಾಭರಣಗಳು ಪತ್ತೆಯಾಗಿವೆ.

Lokayukta Raid: BBMP ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ಕೋಟಿ ಕೋಟಿ ಹಣ, ಚಿನ್ನಾಭರಣ ಪತ್ತೆ!
BBMP ಎಡಿಟಿಪಿ ಗಂಗಾಧರಯ್ಯ ಮನೆಯಲ್ಲಿ ಪತ್ತೆಯಾದ ಹಣ, ಚಿನ್ನಾಭರಣ ಇತ್ಯಾದಿ ಸ್ವತ್ತುಗಳು
Follow us
|

Updated on:Apr 24, 2023 | 10:16 PM

ಬೆಂಗಳೂರು: ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ (IT Raid) ಅಧಿಕಾರಿಗಳು, ಲೋಕಾಯುಕ್ತ (Lokayukta Raid) ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಈ ಪೈಕಿ ಬಿಬಿಎಂಪಿ (BBMP) ಎಡಿಟಿಪಿ ಗಂಗಾಧರಯ್ಯ ಮನೆಯೂ ಒಂದು. ಇವರ ಮನೆಯಲ್ಲಿ ತಲಾಷ್ ನಡೆಸಿದಾಗ ಕೋಟ್ಯಾಂತರ ರೂಪಾಯಿ ನಗದು, ಚಿನ್ನಾಭರಣ, ಆಸ್ತಿಗಳು ಪತ್ತೆಯಾಗಿವೆ. ಇಂದು ಬೆಳಗ್ಗೆ ಗಂಗಧಾರಯ್ಯಗೆ ಸಂಬಂಧಿಸಿದ ಒಟ್ಟು 7 ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಏನೆಲ್ಲಾ ಪತ್ತೆಯಾಯ್ತು? ಚಿನ್ನಾಭರಣ ಎಷ್ಟು ಸಿಕ್ಕಿತು? ಎಷ್ಟು ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ? ಇತ್ಯಾದಿ ಮಾಹಿತಿ ಇಲ್ಲಿದೆ.

ದಾಳಿ ವೇಳೆ ಗಂಗಾಧರಯ್ಯ ಅವರು ಯಲಹಂಕ, ಜೆಸಿ ನಗರ, ನಾಗವಾರ ಮತ್ತು ಹೆಬ್ಬಾಳದಲ್ಲಿ 14 ಫ್ಲಾಟ್‌ಗಳು, ಮನೆಗಳನ್ನು ಹೊಂದಿರುವುದು ಪತ್ತೆಯಾಗಿದೆ. ಇದಲ್ಲದೆ, ನೆಲಮಂಗಲದಲ್ಲಿ 1.5 ಕೋಟಿ ಮೌಲ್ಯದ 5 ಎಕರೆ ಕೃಷಿ ಭೂಮಿ, ಮಲ್ಲೇಶ್ವರದಲ್ಲಿ 3.65 ಕೋಟಿ ಮೌಲ್ಯದ ನಿವೇಶನ ಇರುವುದು ತಿಳಿದುಬಂದಿದೆ. ಇದರಲ್ಲದೆ, ಎರಡು ಬ್ಯಾಂಗ್​ಗಳಲ್ಲಿ 2 ಲಾಕರ್​ಗಳನ್ನು ಹೊಂದಿದ್ದಾರೆ.

ದಾಳಿ ವೇಳೆ ಗಂಗಾಧರಯ್ಯ ನಿವಾಸದಲ್ಲಿ 1.431 ಕೆಜಿ ಚಿನ್ನ, 8.7 ಕೆಜಿ ಬೆಳ್ಳಿ, ಮತ್ತು 73 ಲಕ್ಷ ಮೌಲ್ಯದ ಡೈಮಂಡ್ ಪತ್ತೆಯಾಗಿದೆ. ಅಲ್ಲದೆ, 1,47,16,000 ರೂ. (ಒಂದು ಕೋಟಿ ನಲವತ್ತೇಳು ಲಕ್ಷ ಹದಿನಾರು ಸಾವಿರ) ಪತ್ತೆಯಾಗಿದೆ. ಮಾತ್ರವಲ್ಲದೆ, ವಿದೇಶಿ ಕರೆನ್ಸಿಗಳು ಕೂಡ ಪತ್ತೆಯಾಗಿವೆ. USD 10,298, ಧೀರಮ್ ದುಬೈ 1180, ಈಜಿಪ್ಟ್ ಪೌಂಡ್ 35 ಪತ್ತೆಯಾಗಿವೆ. ಗಂಗಾಧರಯ್ಯ ಕಚೇರಿ, ಕುಟುಂಬಸ್ಥರು, ಅಳಿಯದಿಂರ ನಿವಾಸಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶಾಕ್ ಕೊಟ್ಟಿದ್ದಾರೆ. ಕುಟುಂಬಸ್ಥರ ಮನೆಗಳಲ್ಲಿ ಮಹತ್ವದ ದಾಖಲೆಗಳು ಪತ್ತೆಯಾಗಿದ್ದು, ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರೌಡಿಶೀಟರ್​ಗಳ ಮನೆಗಳ ಮೇಲೆ ಪೊಲೀಸರ ದಾಳಿ; 105 KG ಗಾಂಜಾ, ಮಾರಕಾಸ್ತ್ರ ವಶ

ಅಂಕಿತಾ ಬಿಲ್ಡರ್ಸ್​ ಕಚೇರಿ ಮೇಲೆ ಐಟಿ ದಾಳಿ

ಹುಬ್ಬಳ್ಳಿ: ಅಂಕಿತಾ ಬಿಲ್ಡರ್ಸ್​ ಕಚೇರಿ ಹಾಗೂ ಮನೆ ಮೇಲೆ ಮೇಲೆ ಐಟಿ ದಾಳಿ ನಡೆದಿದೆ. ನಿಲೀಜನ ರಸ್ತೆಯ ಕಚೇರಿ, ಮಂಜುನಾಥನಗರದಲ್ಲಿರುವ ಅಂಕಿತಾ ಡೆವಲಪರ್ಸ್​ ಮಾಲೀಕ ನಾರಾಯಣ ಬಿ.ಆಚಾರ್ಯ ಮನೆ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಪತ್ತೆಯಾದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ರಾಜ್ಯದಲ್ಲಿಂದು ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಹಲವರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ದಾವಣಗೆರೆ, ಕೋಲಾರ, ಬೀದರ್, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ದಾಳಿ ನಡೆದಿದ್ದು ಹಲವು ಅಧಿಕಾರಿಗಳ ಮನೆಯಲ್ಲಿ ಚಿನ್ನ, ನಗದು, ಕಡತ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂರು ಕಡೆ ಐಟಿ ದಾಳಿ ನಡೆದಿದ್ದು ಬೆಳ್ತಂಗಡಿಯ ಮಾಜಿ ಸಚಿವ, ಕಾಂಗ್ರೆಸ್ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರಗೌಡ ಮನೆಯಲ್ಲಿ 30 ಲಕ್ಷ ಹಣ ಪತ್ತೆಯಾಗಿದೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆ ಬಳಿಯಿರುವ ಗಂಗಾಧರ ಗೌಡ ಮನೆ, ಪ್ರಸನ್ನ ಇನ್ಸ್ಟಿಟ್ಯೂಷನ್​​, ಇಂದುಬೆಟ್ಟುವಿನ ಮನೆಯಲ್ಲಿ 20ಕ್ಕೂ ಅಧಿಕ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Mon, 24 April 23

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್