AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಹಲವೆಡೆ ಏಕಕಾಲಕ್ಕೆ ಸಬ್​​​​ ರಿಜಿಸ್ಟ್ರಾರ್​ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಸಬ್​​​​ ರಿಜಿಸ್ಟ್ರಾರ್​ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ಸಾರ್ವಜನಿಕರಿಂದ ದೂರು ನೀಡಲಾಗಿದೆ. ಈ ಹಿನ್ನೆಲೆ ಬೆಂಗಳೂರು ನಗರದ 14, ಗ್ರಾಮಾಂತರ ಜಿಲ್ಲೆ 4 ಕಚೇರಿಗಳ ಮೇಲೆ ರೇಡ್​ ಮಾಡಿ ಪರಿಶೀಲನೆ ಮಾಡಲಾಗಿದೆ.

ರಾಜ್ಯದ ಹಲವೆಡೆ ಏಕಕಾಲಕ್ಕೆ ಸಬ್​​​​ ರಿಜಿಸ್ಟ್ರಾರ್​ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತ ದಾಳಿ
TV9 Web
| Edited By: |

Updated on:Nov 03, 2022 | 7:12 PM

Share

ಬೆಂಗಳೂರು: ವಿವಿಧೆಡೆ ಸಬ್​​​​ ರಿಜಿಸ್ಟ್ರಾರ್​ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta raid) ಮಾಡಿದೆ. ಸಬ್​​​​ ರಿಜಿಸ್ಟ್ರಾರ್​ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ಸಾರ್ವಜನಿಕರಿಂದ ದೂರು ನೀಡಲಾಗಿದೆ. ಈ ಹಿನ್ನೆಲೆ ಬೆಂಗಳೂರು ನಗರದ 14, ಗ್ರಾಮಾಂತರ ಜಿಲ್ಲೆ 4 ಕಚೇರಿಗಳ ಮೇಲೆ ರೇಡ್​ ಮಾಡಿ ಪರಿಶೀಲನೆ ಮಾಡಲಾಗಿದೆ. ವರ್ತೂರು, ಬೇಗೂರು, ದೊಡ್ಡಬಳ್ಳಾಪುರ ಸಬ್​ ರಿಜಿಸ್ಟ್ರಾರ್​ ಕಚೇರಿ ಮೇಲೂ ದಾಳಿ ಮಾಡಿದ್ದು, ಲೋಕಾಯುಕ್ತ ಪೊಲೀಸರಿಂದ ಮಹತ್ವದ ದಾಖಲೆಗಳ ಸಂಗ್ರಹ ಮಾಡಲಾಗಿದೆ. ಇನ್ನು ನೆಲಮಂಗಲದಲ್ಲೂ ಸಬ್ ರಿಜಿಸ್ಟರ್ ಕಛೇರಿ ಮೇಲೂ ಡಿವೈ ಎಸ್ಪಿ ಟಿ. ಸಿ. ವೆಂಕಟೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಕಛೇರಿಯಲ್ಲಿ ಪರಿಶೀಲನೆ ಮಾಡಲಾಗಿದೆ. ಒಟ್ಟು 8 ಜನ ಸಿಬ್ಬಂದಿಯಿಂದ ಕಛೇರಿಯಲ್ಲಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ದೇವನಹಳ್ಳಿ ತಾಲೂಕು ಸಬ್ ರಿಜಿಸ್ಟ್ರಾರ್ ಕಛೇರಿ ಮೇಲೆ ಇನ್ಸ್​ಪೇಕ್ಟರ್ ಮಹಾದೇವಯ್ಯ ನೇತೃತ್ವದಲ್ಲಿ ಎಂಟು ಜನರ ತಂಡ ದಾಳಿ ಮಾಡಿದೆ. ಸಬ್ ರಿಜಿಸ್ಟಾರ್​ಗಳಾದ ಸುರೇಶ್ ಹಂದಿಗುಂದ, ರವಿಂದ್ರೇಗೌಡ ಕರ್ತವ್ಯದಲ್ಲಿದಾಗ ದಾಳಿ ಮಾಡಲಾಗಿದೆ. ಕಛೇರಿ ಒಳ ಭಾಗದಲ್ಲಿ ಅಧಿಕಾರಿಗಳಿಂದ ದಾಖಲೆಗಳ‌ ಪರಿಶೀಲನೆ ಮಾಡಲಾಗಿದೆ. ಇನ್ನು ಏಕಕಾಲದಲ್ಲಿ ರಾಮನಗರ ಮತ್ತು ಕನಕಪುರ ಸಬ್ ರಿಜಿಸ್ಟರ್ ಕಛೇರಿ ಮೇಲೂ ದಾಳಿ ಮಾಡಲಾಗಿದೆ. ಕಛೇರಿಯಲ್ಲಿ ಸಾಕಷ್ಟು ಭ್ರಷ್ಟಾಚಾರ, ಅವ್ಯವಹಾರ ಆರೋಪ ಕೇಳಿ ಬಂದ ಹಿನ್ನಲೆ ಲೋಕಾಯುಕ್ತ ಎಸ್ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಕಳೆದ ಒಂದು ಘಂಟೆಯಿಂದ ಕಛೇರಿಯಲ್ಲಿನ ಕಡತಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:11 pm, Thu, 3 November 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್