AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ದಾಳಿ: ಬೆಸ್ಕಾಂ ಮುಖ್ಯ ಇಂಜಿನಿಯರ್​ ಮನೆಯಲ್ಲಿ 5 ಕೋಟಿ ಮೌಲ್ಯದ ಆಸ್ತಿ ಪತ್ರ ಪತ್ತೆ

ಬುಧವಾರ ಇಂದು ಹತ್ತು ಕಡೆಯಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು  ಪರಿಶೀಲನೆ ಮಾಡಿದ್ದು, ದಾಳಿ ವೇಳೆ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ.

ಲೋಕಾಯುಕ್ತ ದಾಳಿ: ಬೆಸ್ಕಾಂ ಮುಖ್ಯ ಇಂಜಿನಿಯರ್​ ಮನೆಯಲ್ಲಿ 5 ಕೋಟಿ ಮೌಲ್ಯದ ಆಸ್ತಿ ಪತ್ರ ಪತ್ತೆ
ದಾಳಿ ವೇಳೆ ಪತ್ತೆಯಾದ ವಸ್ತುಗಳು
ಗಂಗಾಧರ​ ಬ. ಸಾಬೋಜಿ
|

Updated on: May 31, 2023 | 6:15 PM

Share

ಬೆಂಗಳೂರು: ಬುಧವಾರ ಇಂದು ಹತ್ತು ಕಡೆಯಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ (Lokayukta raid) ಅಧಿಕಾರಿಗಳು  ಪರಿಶೀಲನೆ ಮಾಡಿದ್ದು, ದಾಳಿ ವೇಳೆ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. ಹಾವೇರಿಯಲ್ಲಿ ವಾಗೀಶ್ ಶೆಟ್ಟರ್ ಮನೆ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತ ಅಧಿಕಾರಿಗಳು 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. 500 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ, 18.30 ಲಕ್ಷ ನಗದು, 3 ಕಾರು, 2 ಟ್ರ್ಯಾಕ್ಟರ್, 2 ಬೈಕ್, ಹಣ ಎಣಿಕೆ ಮಾಡುವ ಮಶೀನ್​ ಮತ್ತು 8 ಮನೆ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು 16 ಸೈಟ್​​ಗಳು, 65 ಎಕರೆ ಭೂಮಿ ಹೊಂದಿರುವ ದಾಖಲೆ ಪತ್ರಗಳು ಸೇರಿದಂತೆ 10 ಇಂಚಿನ ಜಿಂಕೆ ಕೊಂಬು ಕೂಡ ಪತ್ತೆಯಾಗಿದೆ.

ಇಂಡಸ್ಟ್ರೀಸ್ ಆ್ಯಂಡ್​​​​ ಬಾಯ್ಲರ್ಸ್ ಇಲಾಖೆಯ ಉಪ ನಿರ್ದೇಶಕ ಟಿ.ವಿ.ನಾರಾಯಣಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಈ ವೇಳೆ 2,58,76,000 ಮೌಲ್ಯದ ಆಸ್ತಿ, 22.55 ಲಕ್ಷ ಮೌಲ್ಯದ 2 ಬೈಕ್​​, ಚಿನ್ನಾಭರಣ, ಬೆಳ್ಳಿ ವಸ್ತುಗಳು ಪತ್ತೆಯಾಗಿವೆ.

ಇದನ್ನೂ ಓದಿ: ರೋಹಿತ್ ಚಕ್ರತೀರ್ಥಗೆ ಸಂಕಷ್ಟ, ದೂರು ದಾಖಲಿಸುವಂತೆ ಸಿಎಂಗೆ ಸಮಾನ ಮನಸ್ಕರ ಒಕ್ಕೂಟ ಮನವಿ

10 ಎಕರೆ ಕೃಷಿ ಭೂಮಿ, 3 ಮನೆಗಳು, ಗೃಹೋಪಯೋಗಿ ವಸ್ತು, 2 ಕೋಟಿ 36 ಲಕ್ಷದ 26 ಸಾವಿರ ಮೌಲ್ಯದ ಒಂದು ಸೈಟ್, ಬೆಂಗಳೂರಿನ ವಿಜಯನಗರ, ಕೆ.ಆರ್.ಪುರಂನಲ್ಲಿರುವ ಮನೆ, ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಕೃಷಿ ಜಮೀನು ಹೊಂದಿದ್ದಾರೆ.

25 ಲಕ್ಷ ಮೌಲ್ಯದ 3.5 ಕೆಜಿ ಚಿನ್ನ, 24 ಕೆಜಿ ಬೆಳ್ಳಿ ಪತ್ತೆ

ಶಿವಮೊಗ್ಗ ಜಿಲ್ಲೆಯ ಹಲವೆಡೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಾರ ಮೌಲ್ಯದ ಚಿನ್ನಾಭರಣ, ಆಸ್ತಿ ಪತ್ರಗಳನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತುಂಗಾ ಮೇಲ್ದಂಡೆ ಇಇ ಪ್ರಶಾಂತ್ ಮನೆಯಲ್ಲಿ 25 ಲಕ್ಷ ಮೌಲ್ಯದ 3.5 ಕೆಜಿ ಚಿನ್ನ, 24 ಕೆಜಿ ಬೆಳ್ಳಿ, 50 ವಿದೇಶಿ ಮದ್ಯದ ಬಾಟಲ್, ಬೆಂಗಳೂರಿನಲ್ಲಿ ಎರಡು ಸೈಟು, 6 ಎಕರೆ ಕೃಷಿ ಜಮೀನಿಗೆ ಸಂಬಂಧಿಸಿದ ಆಸ್ತಿ ಪತ್ರಗಳು ಪತ್ತೆ ಹಚ್ಚಲಾಗಿದೆ. ಶಿಕಾರಿಪುರದ ಪಂಚಾಯತ್ ರಾಜ್​​​​ ಇಂಜಿನಿಯರ್​ ಶಂಕರ್ ನಾಯ್ಕ್​ ಮನೆಯಲ್ಲಿ 350 ಗ್ರಾಂ ಚಿನ್ನಾಭರಣ, 10 ಎಕರೆ ಕೃಷಿ ಜಮೀನಿನ ದಾಖಲೆ ಪತ್ರ ಪತ್ತೆಯಾಗಿವೆ.

ಇದನ್ನೂ ಓದಿ: Lalbagh Mango Mela: ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ಮಾವು ಮೇಳ

ಬೆಂಗಳೂರಿನಲ್ಲಿ ಬೆಸ್ಕಾಂ ಮುಖ್ಯ ಇಂಜಿನಿಯರ್ ಆಗಿರುವ ಹೆಚ್.ಜೆ.ರಮೇಶ್ ಮನೆಯಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆಯಾಗಿದೆ. ರಮೇಶ್​ಗೆ ಸಂಬಂಧಿಸಿದ 4 ಕಡೆ ದಾಳಿ ನಡೆಸಿದ್ದ ಲೋಕಾಯುಕ್ತ, 1 ಕೋಟಿ 40 ಲಕ್ಷ ಮೌಲ್ಯದ 1 ದ್ವಿಚಕ್ರ ವಾಹನ, ಒಂದು ಕಾರು, ಗೃಹೋಪಯೋಗಿ ವಸ್ತುಗಳು, ವಿದೇಶಿ ಮದ್ಯದ ಬಾಟಲಿಗಳು ಪತ್ತೆ ಆಗಿವೆ.

ಏರೋಸ್ಪೇಸ್ ಪಾರ್ಕ್ ಇಂಡಸ್ಟ್ರಿಯಲ್ ಏರಿಯಾದಲ್ಲಿ 1 ಫ್ಲ್ಯಾಟ್, ಡಾಬಸ್​ಪೇಟೆಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಭೂಮಿ, ಬಸವೇಶ್ವರನಗರದ BEML ಲೇಔಟ್​ನಲ್ಲಿ ನಿರ್ಮಾಣ ಹಂತದ ಕಟ್ಟಡ ಸೇರಿದಂತೆ  ಒಟ್ಟು 5 ಕೋಟಿ 60 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ