AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬ್​ ರಿಜಿಸ್ಟ್ರಾರ್​ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ: ಮಧ್ಯವರ್ತಿಗಳ ವಿರುದ್ಧವೂ ಎಫ್​​ಐಆರ್ ದಾಖಲು, ವಿವರ ಇಲ್ಲಿದೆ

ಸಬ್‌ ರಿಜಿಸ್ಟ್ರಾರ್ ಕಚೇರಿಗಳು ಆಸ್ತಿ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನೋಂದಾಯಿಸುತ್ತವೆ ಮತ್ತು ಮುದ್ರಾಂಕ ಶುಲ್ಕ ಮತ್ತು ಇತರ ಶುಲ್ಕಗಳನ್ನು ಸಂಗ್ರಹಿಸುತ್ತವೆ. ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸೇವೆ ಒದಗಿಸಲು ಮಧ್ಯವರ್ತಿಗಳು ಲಂಚಕ್ಕೆ ಬೇಡಿಕೆ ಇಡುತ್ತಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಸಬ್​ ರಿಜಿಸ್ಟ್ರಾರ್​ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ: ಮಧ್ಯವರ್ತಿಗಳ ವಿರುದ್ಧವೂ ಎಫ್​​ಐಆರ್ ದಾಖಲು, ವಿವರ ಇಲ್ಲಿದೆ
ಮಧ್ಯವರ್ತಿಗಳ ವಿರುದ್ಧವೂ ಎಫ್​​ಐಆರ್ ದಾಖಲು, ವಿವರ ಇಲ್ಲಿದೆ
TV9 Web
| Edited By: |

Updated on: Nov 07, 2022 | 12:53 PM

Share

ಬೆಂಗಳೂರು: ಸಬ್​ ರಿಜಿಸ್ಟ್ರಾರ್​ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಮಧ್ಯವರ್ತಿಗಳ ವಿರುದ್ಧವೂ ಮೂರು ಪ್ರತ್ಯೇಕ ಎಫ್​​ಐಆರ್ ಗಳು ದಾಖಲುಗೊಂಡಿವೆ. ಮಧ್ಯವರ್ತಿಗಳು ಮತ್ತು ಏಜೆಂಟ್​ಗಳ ಬಳಿಯಿದ್ದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಪತ್ತೆಯಾದ ದಾಖಲೆಗಳನ್ನು ಲೋಕಾ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ದಾಖಲೆಗಳು ಮಧ್ಯವರ್ತಿಗಳ ಕೈಸೇರಿದ್ದು ಹೇಗೆ ಎಂದೂ ತನಿಖೆ ಮುಂದುವರಿದಿದೆ.

ಇದರಿಂದ ಸಬ್​ ರಿಜಿಸ್ಟ್ರಾರ್​ ಕಚೇರಿಯ ಕೆಲ ಅಧಿಕಾರಿಗಳಿಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ನಿವೇಶನ, ರಿಯಲ್ ಎಸ್ಟೇಟ್ ವ್ಯವಹಾರ ಸಂಬಂಧ ಕಡತ ಪತ್ತೆಯಾಗಿದೆ. ಸೇಲ್ ಡೀಡ್ ಪ್ರತಿಗಳು, ಜಿಪಿಎ ಪತ್ರ, ಟ್ಯಾಕ್ಸ್ ರಸೀದಿ ಜಪ್ತಿ ಮಾಡಲಾಗಿದೆ. ಲೋಕಾಯುಕ್ತ ತನಿಖಾಧಿಕಾರಿಗಳು ಸಬ್​ ರಿಜಿಸ್ಟ್ರಾರ್​ ಕಚೇರಿ ಅಧಿಕಾರಿಗಳ ಜೊತೆಗಿನ ನಂಟು ಪತ್ತೆ ಹಚ್ಚಲಿದ್ದಾರೆ. ಸದ್ಯ ಕಡತಗಳ ಪರಿಶೀಲನೆ ನಡೆಸಿ, ಇಂಚಿಂಚೂ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಕಳೆದ ವಾರ ಬೆಂಗಳೂರು ಮತ್ತು ಸುತ್ತಮುತ್ತ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾ ದಾಳಿ ನಡೆದಿತ್ತು:

ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಭ್ರಷ್ಟಾಚಾರದ ಆರೋಪದ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಕಳೆದವಾರ ಬೆಂಗಳೂರು ಮತ್ತು ಸುತ್ತಮುತ್ತಲಿನ 20 ಕ್ಕೂ ಹೆಚ್ಚು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದದರು. ಸುಮಾರು 150 ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 15, ಬೆಂಗಳೂರು ಗ್ರಾಮಾಂತರದಲ್ಲಿ 4 ಮತ್ತು ರಾಮನಗರದ 2 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರು.

ಅಂದಹಾಗೆ, ಸಬ್‌ ರಿಜಿಸ್ಟ್ರಾರ್ ಕಚೇರಿಗಳು ಆಸ್ತಿ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನೋಂದಾಯಿಸುತ್ತವೆ ಮತ್ತು ಮುದ್ರಾಂಕ ಶುಲ್ಕ ಮತ್ತು ಇತರ ಶುಲ್ಕಗಳನ್ನು ಸಂಗ್ರಹಿಸುತ್ತವೆ. ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸೇವೆ ಒದಗಿಸಲು ಮಧ್ಯವರ್ತಿಗಳು ಲಂಚಕ್ಕೆ ಬೇಡಿಕೆ ಇಡುತ್ತಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಈ ದಾಳಿಯನ್ನು ಪೊಲೀಸ್ ವರಿಷ್ಠಾಧಿಕಾರಿ (ಲೋಕಾಯುಕ್ತ) ಅಶೋಕ್ ಕೆ ವಿ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಎಲ್ಲಿ ದಾಳಿಗಳು ನಡೆದಿದ್ದವು?

ಬೆಂಗಳೂರು ನಗರ: ಬನ್ನೇರುಘಟ್ಟ, ಯಲಹಂಕ, ಕಾಚರಕನಹಳ್ಳಿ, ಬಸವನಗುಡಿ, ಮಹದೇವಪುರ, ವರ್ತೂರು, ದೊಮ್ಮಲೂರು, ಬೊಮ್ಮನಹಳ್ಳಿ, ಬೇಗೂರು, ಜೆಪಿ ನಗರ, ಬನಶಂಕರಿ, ಬಾಣಸವಾಡಿ, ನಾಗರಭಾವಿ, ಕೆಂಗೇರಿ ಮತ್ತು ದೇವನಹಳ್ಳಿ.

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ, ನೆಲಮಂಗಲ, ಆನೇಕಲ್ ಮತ್ತು ಹೊಸಕೋಟೆ.

ರಾಮನಗರ: ರಾಮನಗರ ಮತ್ತು ಕನಕಪುರ.

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ