AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬ್​ ರಿಜಿಸ್ಟ್ರಾರ್​ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ: ಮಧ್ಯವರ್ತಿಗಳ ವಿರುದ್ಧವೂ ಎಫ್​​ಐಆರ್ ದಾಖಲು, ವಿವರ ಇಲ್ಲಿದೆ

ಸಬ್‌ ರಿಜಿಸ್ಟ್ರಾರ್ ಕಚೇರಿಗಳು ಆಸ್ತಿ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನೋಂದಾಯಿಸುತ್ತವೆ ಮತ್ತು ಮುದ್ರಾಂಕ ಶುಲ್ಕ ಮತ್ತು ಇತರ ಶುಲ್ಕಗಳನ್ನು ಸಂಗ್ರಹಿಸುತ್ತವೆ. ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸೇವೆ ಒದಗಿಸಲು ಮಧ್ಯವರ್ತಿಗಳು ಲಂಚಕ್ಕೆ ಬೇಡಿಕೆ ಇಡುತ್ತಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಸಬ್​ ರಿಜಿಸ್ಟ್ರಾರ್​ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ: ಮಧ್ಯವರ್ತಿಗಳ ವಿರುದ್ಧವೂ ಎಫ್​​ಐಆರ್ ದಾಖಲು, ವಿವರ ಇಲ್ಲಿದೆ
ಮಧ್ಯವರ್ತಿಗಳ ವಿರುದ್ಧವೂ ಎಫ್​​ಐಆರ್ ದಾಖಲು, ವಿವರ ಇಲ್ಲಿದೆ
TV9 Web
| Edited By: ಸಾಧು ಶ್ರೀನಾಥ್​|

Updated on: Nov 07, 2022 | 12:53 PM

Share

ಬೆಂಗಳೂರು: ಸಬ್​ ರಿಜಿಸ್ಟ್ರಾರ್​ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಮಧ್ಯವರ್ತಿಗಳ ವಿರುದ್ಧವೂ ಮೂರು ಪ್ರತ್ಯೇಕ ಎಫ್​​ಐಆರ್ ಗಳು ದಾಖಲುಗೊಂಡಿವೆ. ಮಧ್ಯವರ್ತಿಗಳು ಮತ್ತು ಏಜೆಂಟ್​ಗಳ ಬಳಿಯಿದ್ದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಪತ್ತೆಯಾದ ದಾಖಲೆಗಳನ್ನು ಲೋಕಾ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ದಾಖಲೆಗಳು ಮಧ್ಯವರ್ತಿಗಳ ಕೈಸೇರಿದ್ದು ಹೇಗೆ ಎಂದೂ ತನಿಖೆ ಮುಂದುವರಿದಿದೆ.

ಇದರಿಂದ ಸಬ್​ ರಿಜಿಸ್ಟ್ರಾರ್​ ಕಚೇರಿಯ ಕೆಲ ಅಧಿಕಾರಿಗಳಿಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ನಿವೇಶನ, ರಿಯಲ್ ಎಸ್ಟೇಟ್ ವ್ಯವಹಾರ ಸಂಬಂಧ ಕಡತ ಪತ್ತೆಯಾಗಿದೆ. ಸೇಲ್ ಡೀಡ್ ಪ್ರತಿಗಳು, ಜಿಪಿಎ ಪತ್ರ, ಟ್ಯಾಕ್ಸ್ ರಸೀದಿ ಜಪ್ತಿ ಮಾಡಲಾಗಿದೆ. ಲೋಕಾಯುಕ್ತ ತನಿಖಾಧಿಕಾರಿಗಳು ಸಬ್​ ರಿಜಿಸ್ಟ್ರಾರ್​ ಕಚೇರಿ ಅಧಿಕಾರಿಗಳ ಜೊತೆಗಿನ ನಂಟು ಪತ್ತೆ ಹಚ್ಚಲಿದ್ದಾರೆ. ಸದ್ಯ ಕಡತಗಳ ಪರಿಶೀಲನೆ ನಡೆಸಿ, ಇಂಚಿಂಚೂ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಕಳೆದ ವಾರ ಬೆಂಗಳೂರು ಮತ್ತು ಸುತ್ತಮುತ್ತ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾ ದಾಳಿ ನಡೆದಿತ್ತು:

ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಭ್ರಷ್ಟಾಚಾರದ ಆರೋಪದ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಕಳೆದವಾರ ಬೆಂಗಳೂರು ಮತ್ತು ಸುತ್ತಮುತ್ತಲಿನ 20 ಕ್ಕೂ ಹೆಚ್ಚು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದದರು. ಸುಮಾರು 150 ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 15, ಬೆಂಗಳೂರು ಗ್ರಾಮಾಂತರದಲ್ಲಿ 4 ಮತ್ತು ರಾಮನಗರದ 2 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದರು.

ಅಂದಹಾಗೆ, ಸಬ್‌ ರಿಜಿಸ್ಟ್ರಾರ್ ಕಚೇರಿಗಳು ಆಸ್ತಿ ವಹಿವಾಟುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನೋಂದಾಯಿಸುತ್ತವೆ ಮತ್ತು ಮುದ್ರಾಂಕ ಶುಲ್ಕ ಮತ್ತು ಇತರ ಶುಲ್ಕಗಳನ್ನು ಸಂಗ್ರಹಿಸುತ್ತವೆ. ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸೇವೆ ಒದಗಿಸಲು ಮಧ್ಯವರ್ತಿಗಳು ಲಂಚಕ್ಕೆ ಬೇಡಿಕೆ ಇಡುತ್ತಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಈ ದಾಳಿಯನ್ನು ಪೊಲೀಸ್ ವರಿಷ್ಠಾಧಿಕಾರಿ (ಲೋಕಾಯುಕ್ತ) ಅಶೋಕ್ ಕೆ ವಿ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಎಲ್ಲಿ ದಾಳಿಗಳು ನಡೆದಿದ್ದವು?

ಬೆಂಗಳೂರು ನಗರ: ಬನ್ನೇರುಘಟ್ಟ, ಯಲಹಂಕ, ಕಾಚರಕನಹಳ್ಳಿ, ಬಸವನಗುಡಿ, ಮಹದೇವಪುರ, ವರ್ತೂರು, ದೊಮ್ಮಲೂರು, ಬೊಮ್ಮನಹಳ್ಳಿ, ಬೇಗೂರು, ಜೆಪಿ ನಗರ, ಬನಶಂಕರಿ, ಬಾಣಸವಾಡಿ, ನಾಗರಭಾವಿ, ಕೆಂಗೇರಿ ಮತ್ತು ದೇವನಹಳ್ಳಿ.

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ, ನೆಲಮಂಗಲ, ಆನೇಕಲ್ ಮತ್ತು ಹೊಸಕೋಟೆ.

ರಾಮನಗರ: ರಾಮನಗರ ಮತ್ತು ಕನಕಪುರ.

Follow Us
TV9 Web
TV9 Web

TV9 Kannada

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು