ಮಾಡಾಳ್ ವಿರೂಪಾಕ್ಷಪ್ಪ ಮನೆ ಜಾಲಾಡಿದ ಲೋಕಾಯುಕ್ತ: ಮಹತ್ವದ ದಾಖಲೆಗಳು ವಶಕ್ಕೆ

ಮಾಡಾಳ್​ ವಿರೂಪಾಕ್ಷಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಲೋಕಾಯುಕ್ತ ಪೊಲೀಸರಿಂದ ಕೆಎಸ್‌ಡಿಎಲ್ ಕಚೇರಿ ಮತ್ತು ಮನೆ ಮೇಲೆ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಮನೆ ಜಾಲಾಡಿದ ಲೋಕಾಯುಕ್ತ: ಮಹತ್ವದ ದಾಖಲೆಗಳು ವಶಕ್ಕೆ
ಮಾಡಾಳ್ ವಿರೂಪಾಕ್ಷಪ್ಪImage Credit source: vijaykarnataka.com
Follow us
|

Updated on: Mar 09, 2023 | 2:58 PM

ಬೆಂಗಳೂರು: ಭ್ರಷ್ಟಾಚಾರದ ಆರೋಪಕ್ಕೆ ಸಿಕ್ಕಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ( BJP MLA Madal Virupakshappa) ಪ್ರಕರಣಕ್ಕೆ ಹೊಸ ಟ್ವಿಸ್ಟ್​​​​ ಸಿಕ್ಕಿದೆ. ನಿನ್ನೆ (ಮಾ. 08) ಲೋಕಾಯುಕ್ತ ಪೊಲೀಸರಿಂದ ಕೆಎಸ್‌ಡಿಎಲ್ ಕಚೇರಿ ಮತ್ತು ಮನೆ ಮೇಲೆ ದಾಳಿ ಮಾಡಿದ್ದು, ಇಡಿ ಪ್ರಕರಣದಲ್ಲಿ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಟೆಂಡರ್​ ವಿಚಾರಕ್ಕೆ ಸಂಬಂಧಿಸಿದಂತೆ ಗೋಲ್​ಮಾಲ್​​ ನಡೆದಿರುವುದಕ್ಕೆ ಮಹತ್ವದ ದಾಖಲೆಗಳು ಸಿಕ್ಕಿದ್ದು, ಅಧಿಕಾರಿಗಳಿಗೆ ಸಿಕ್ಕಿರುವ ದಾಖಲೆಯಲ್ಲಿ ಹಣದ ವ್ಯವಹಾರದ ಬಗ್ಗೆ ಮಾಹಿತಿ ಇದೆ ಎನ್ನಲಾಗುತ್ತಿದೆ. ಕೆಳದ 4 ದಿನಗಳಿಂದ ಅಧಿಕಾರಿಗಳು ಹುಡಕಾಟ ನಡೆಸಿದ್ದರು. ನಿನ್ನೆ ತಜ್ಞರ ಜೊತೆ ದಾಳಿ ಮಾಡಿದ್ದು, ಡಿವಿಆರ್‌ಗಳನ್ನ ಮತ್ತು ಸರ್ವರ್‌ ವಶಕ್ಕೆ ಪಡೆದಿದ್ದಾರೆ. ಇದೇ ದಾಖಲೆಗಳನ್ನ ಇಟ್ಟು ಎಂಡಿ ಮತ್ತು ಕೆಲ ಅಧಿಕಾರಿಗಳ ವಿಚಾರಣೆ ನಡೆಯಲಿದೆ.

ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಸಿಕ್ಕಿದ್ದೇಕೆ?

ಇನ್ನು ಮಾಡಾಳ್​ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೂಡ ಕೋಟಿ ಕೋಟಿ ಹಣ ಸಿಕ್ಕಿದೆ. ಈ ಸಂಬಂಧಿಸಿದಂತೆ ಆರೋಪಿಯಾಗಿ ಕಳೆದ ಕೆಲ ದಿನಗಳಿಂದ ಮಾಡಾಳ್ ವಿರೂಪಾಕ್ಷಪ್ಪ ತಲೆಮರಿಸಿಕೊಂಡಿದ್ದಾರೆ. ಆದರೆ ಕರ್ನಾಟಕ ಹೈಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ಕೆ. ನಟರಾಜನ್​ ಏಕಸದಸ್ಯತ್ವದ ಪೀಠ, 5 ಲಕ್ಷ ರೂ. ಮೌಲ್ಯದ ಬಾಂಡ್​, ಇಬ್ಬರು ಶ್ಯೂರಿಟಿ ನೀಡುವಂತೆ ಆದೇಶಿಸಿದೆ.

ಇದನ್ನೂ ಓದಿ: ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಪ್ರಕರಣದ ಇಬ್ಬರು ತನಿಖಾಧಿಕಾರಿಗಳ ಬದಲಾವಣೆ, ಅನುಮಾನ ಹುಟ್ಟುಹಾಕಿದ ಬದಲಾವಣೆ

ಅಲ್ಲದೇ ಆದೇಶ ತಲುಪಿದ 48 ಗಂಟೆಯಲ್ಲಿ ತನಿಖೆಗೆ ಹಾಜರಾಗಬೇಕು ಎಂದು ಖಡಕ್ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ. ಹಾಗಾದರೆ, ಗಂಭೀರ ಆರೋಪ ಇರುವ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿರುವುದು ಅಚ್ಚರಿಗೆ ಕಾರಣವಾಗಿದೆ. ಬಂಧನದ ಭೀತಿಯಲ್ಲಿದ್ದ ಮಾಡಾಳ್​ಗೆ ಮಧ್ಯಂತರ ಜಾಮೀನು ಸಿಗಲು ಕಾರಣಗಳು ಏನು? ಎನ್ನುವುದು ಈ ಕೆಳಗಿನಂತಿವೆ ನೋಡಿ.

  • ದೂರಿನಲ್ಲಿ ಮಾಡಾಳ್ ಲಂಚಕ್ಕೆ ಡಿಮಾಂಡ್, ಲಂಚ ಪಡೆದ ಉಲ್ಲೇಖವಿಲ್ಲ.
  • ಮಾಡಾಳ್ ವಿರುದ್ಧದ ಎಫ್ಐಆರ್​​ನಲ್ಲಿ ಅಪರಾಧವೆನ್ನಿಸುವಂತಹ ಯಾವುದೇ ಆರೋಪಗಳಿಲ್ಲ.
  • ಟೆಂಡರ್ ನೀಡುವ ಮೊದಲು ಲಂಚ ಕೇಳಿರುವ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ.
  • ಕಾನೂನು ಪ್ರಕಾರವೇ ಟೆಂಡರ್ ಕರೆದು ಖರೀದಿ ಆದೇಶ ನೀಡಲಾಗಿದೆ.
  • ಟೆಂಡರ್ ಅಂತಿಮಗೊಳಿಸುವ ಅಧಿಕಾರ ವಿರೂಪಾಕ್ಷಪ್ಪನವರದ್ದಲ್ಲ.
  • ಟೆಂಡರ್ ಅಂತಿಮಗೊಳಿಸುವುದಕ್ಕೆ ಅಧಿಕಾರಿಗಳ ಪ್ರತ್ಯೇಕ ಸಮಿತಿ ಇದೆ.
  • ಶಾಸಕ ಮಾಡಾಳ್ ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ದೂರಿನಲ್ಲಿ ಉಲ್ಲೇಖವಿಲ್ಲ.
  • ಕೇವಲ ಮಗನೊಂದಿಗೆ ಮಾತನಾಡುವಂತೆ ತಿಳಿಸಿರುವುದಾಗಿ ಉಲ್ಲೇಖ.
  • ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ.
  • ಬಂಧಿಸಿದ ಆರೋಪಿಗಳ ಕಸ್ಟಡಿ ಕೋರಿಯೂ ಲೋಕಾಯುಕ್ತ ಪೊಲೀಸರು ಯಾವುದೇ ಅರ್ಜಿ ಸಲ್ಲಿಸಿಲ್ಲ.
  • ರಿಮಾಂಡ್ ಅರ್ಜಿಯಲ್ಲಿ ಶಾಸಕರ ವಿರುದ್ಧ ದಾಖಲೆಗಳನ್ನು ನೀಡಿಲ್ಲ.
  • ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದ್ದು, ಕೆಎಸ್‌ಡಿಎಲ್​​ನ ಅಧ್ಯಕ್ಷರಿಗೆ ಟೆಂಡರ್ ನೀಡುವ ಅಧಿಕಾರವಿಲ್ಲ.

ಇದನ್ನೂ ಓದಿ: ಉದ್ಯಮಿಯ ಸ್ಮಾರ್ಟ್​​ವಾಚ್​ನಲ್ಲಿ ಸರೆಯಾಯ್ತು ಮಾಡಾಳ್ ಪ್ರಶಾಂತ್​​ ಲಂಚ ಪ್ರಕರಣ; ಬಿಜೆಪಿ ಶಾಸಕನ ಮಗ ಬಲೆಗೆ ಬಿದ್ದದ್ದು ಹೀಗೆ

ಮಾಡಾಳ್ ವಿರೂಪಾಕ್ಷಪ್ಪ ಹೇಳುವುದೇನು?

ಲೋಕಾಯುಕ್ತ ದಾಳಿಯ ವೇಳೆ ಸಿಕ್ಕ ಹಣ ಅಕ್ರಮವಲ್ಲ, ತಾನೊಬ್ಬ ಅಡಕೆ ಬೆಳೆಗಾರ ಮತ್ತು ಉದ್ಯಮಿ. ಯಾವುದೇ ಅಡಕೆ ಬೆಳೆಗಾರನ ಮನೆಗೆ ಹೋದರೂ ಮನೆಯಲ್ಲಿ ಕನಿಷ್ಟವೆಂದರೂ 2-3 ಕೋಟಿ ರೂಪಾಯಿ ಸಿಗುತ್ತದೆ ಎಂದು ಜಾಮೀನು ಸಿಕ್ಕ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ. ಪತ್ರಕರ್ತರೊಂದಿಗೆ ದಾವಣಗೆರೆಯಲ್ಲಿ ಮಾತಾಡಿದ ಅವರು, ತಾನು ಎಲ್ಲೂ ಹೋಗಿರಲಿಲ್ಲ, ಆರೋಪ ಮೈಮೇಲೆ ಬಂದಿದ್ದರಿಂದ ಜನರೆದುರು ಬರಲಿಲ್ಲ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್