AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಪುತ್ರನ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ಅಂತ್ಯ, ಐವರ ಬಂಧನ, ಕಾರ್ಯಚರಣೆ ವೇಳೆ ಏನೇನು ಸಿಕ್ತು? ಇಲ್ಲಿದೆ ಮಾಹಿತಿ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. ಒಟ್ಟು 9 ಗಂಟೆ 30 ನಿಮಿಷಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಇನ್ನು ಕಾರ್ಯಚರಣೆ ವೇಳೆ ಏನೆಲ್ಲ ಸಿಕ್ತು ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಬಿಜೆಪಿ ಶಾಸಕ ಪುತ್ರನ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ಅಂತ್ಯ, ಐವರ ಬಂಧನ, ಕಾರ್ಯಚರಣೆ ವೇಳೆ ಏನೇನು ಸಿಕ್ತು? ಇಲ್ಲಿದೆ ಮಾಹಿತಿ
ರಮೇಶ್ ಬಿ. ಜವಳಗೇರಾ
|

Updated on:Mar 03, 2023 | 9:34 AM

Share

ಬೆಂಗಳೂರು: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ, BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್‌ ಕಚೇರಿಯಲ್ಲಿ ಮೇಲೆ ನಡೆದಿದ್ದ ಲೋಕಾಯುಕ್ತ ದಾಳಿ ಅಂತ್ಯವಾಗಿದೆ. ಬೆಂಗಳೂರಿನ ಕ್ರೆಸೆಂಟ್​ ರಸ್ತೆಯಲ್ಲಿರುವ ಕಚೇರಿಯಲ್ಲಿ ನಿನ್ನೆ(ಮಾ.02) ಸಂಜೆ 6.30ಕ್ಕೆ ಪ್ರಶಾಂತ್ 40 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ದಾಳಿ ಮಾಡಿತ್ತು. ಬಳಿಕ ಕಚೇರಿಯಲ್ಲಿ ಶೋಧ ಕಾರ್ಯ ಆರಂಭಿಸಿತ್ತು. ಅದು ಇಂದು (ಮಾ.03) ಬೆಳಗ್ಗೆ 4 ಗಂಟೆಗೆ ಅಂತ್ಯವಾಗಿದೆ. ಒಟ್ಟು 9 ಗಂಟೆ 30 ನಿಮಿಷಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ಈ ವೇಳೆ ಕಚೇರಿಯಲ್ಲಿದ್ದ ಹಲವು ದಾಖಲೆ ಹಾಗೂ ಕೋಟಿ ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಪ್ರಶಾಂತ್ ಮಾಡಾಳ್​​​ ಸೇರಿ ಐವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ನಿನ್ನೆ ಸಂಜೆ ನಡೆದ ದಾಳಿ ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಅಂತ್ಯವಾಗಿದ್ದು, ಪರಿಶೀಲನೆ ವೇಳೆ ಕಚೇರಿಯಲ್ಲಿ 1.62 ಕೋಟಿ ರೂ. ಹಾಗೂ ಸಂಜಯ್​ ನಗರದಲ್ಲಿರುವ ಪ್ರಶಾಂತ್ ನಿವಾಸದಲ್ಲಿ 6 ಕೋಟಿ ರೂ. ನಗದು ಸೇರಿದಂತೆ ಒಟ್ಟು 7.62 ಕೋಟಿ ರೂ ನಗದು ಹಣ ಪತ್ತೆಯಾಗಿದೆ.

ಪ್ರಶಾಂತ್ ಮಾಡಾಳ್, ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೋಲಸ್, ಗಂಗಾಧರ್ ಎನ್ನುವವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದು, ಇಂದು(ಶುಕ್ರವಾರ) ಲೋಕಾಯುಕ್ತ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ. ಇನ್ನಷ್ಟು ವಿಚಾರಣೆಗಾಗಿ ಐವರನ್ನು ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ನ್ಯಾಯಾಲಕ್ಕೆ ಮನವಿ ಮಾಡುವ ಸಾಧ್ಯತೆಗಳಿವೆ.

ಶಾಸಕರ ಮನೆಯಲ್ಲಿ ಮುಂದುವರಿದ ಪರಿಶೀಲನೆ

ಇನ್ನು ಪ್ರಶಾಂತ್ ಅವರ ತಂದೆ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮುಂದುವರೆದಿದೆ. ಬೆಂಗಳೂರಿನ ಸಂಜಯನಗರ ಬಳಿ ಇರುವ ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ ಒಡೆತನದ ಕೆ.ಎಂ.ವಿ ಮಾನ್ಷಿಯನ್ ನಿವಾಸದಲ್ಲಿ ಡಿವೈ ಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ ನಡೆಸಿತ್ತು. ಶಾಸಕರ ಪುತ್ರ ಪ್ರಶಾಂತ್‌ BWSSB ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. KSDL ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎನ್ನಲಾಗುತ್ತಿದೆ. ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ. ಮಾಡಾಳ್ ಪ್ರಶಾಂತ್ ಕಚೇರಿ ಕಲೆಕ್ಷನ್​ ಸೆಂಟರ್​ ಆಗಿರುವ ಶಂಕೆ ವ್ಯಕ್ತವಾಗಿದೆ.

ಹಣದ ಬ್ಯಾಗ್​ಗಳು ಪತ್ತೆ

2008ರಲ್ಲಿ ತಂದೆ ಆದಾಯ ಕೇವಲ 1.2 ಲಕ್ಷ ರೂಪಾಯಿ ತೋರಿಸಿ 3ಬಿ ಮೀಸಲಾತಿ ಗಿಟ್ಟಿಸಿ ಕೆಎಎಸ್‌ನಲ್ಲಿ ತೇರ್ಗಡೆ ಆಗಿದ್ದ  ಮಾಡಾಳ್ ಪ್ರಶಾಂತ್​​ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ. ಮಾಡಾಳ್ ವಿರೂಪಾಕ್ಷಪ್ಪಗೆ ಮೂವರು ಗಂಡು ಮಕ್ಕಳಿದ್ದು, ಮೂವರು ಗಂಡು ಮಕ್ಕಳ ಪೈಕಿ ಪ್ರಶಾಂತ್​ ಎರಡನೇ ಪುತ್ರ. ಈ ಹಿಂದೆ ನಡೆದಿರುವ KSDLನ ಟೆಂಡರನಲ್ಲೂ ಅವ್ಯವಹಾರ ಶಂಕೆ ವ್ಯಕ್ತವಾಗಿದೆ. ಕಚೇರಿಯಲ್ಲಿರುವ ಎಲ್ಲ ಹಣವನ್ನು  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Published On - 7:20 am, Fri, 3 March 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?