AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್​​ಪೆಕ್ಟರ್​ಗೆ ಲೋಕಾ ಶಾಕ್: ಬಂಧನದ ಭೀತಿಯಲ್ಲಿ ಪಿಐ ಎಸ್ಕೇಪ್​​

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಲೋಕಾಯುಕ್ತ ದಾಳಿಯಿಂದ ಪರಾರಿಯಾಗಿದ್ದಾರೆ. 4 ಕೋಟಿ ರೂ. ಮೌಲ್ಯದ ಮನೆ ಮಾರಾಟದಲ್ಲಿ ಭ್ರಷ್ಟಾಚಾರ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಿದಾಗ ಇನ್ಸ್ಪೆಕ್ಟರ್ ಪರಾರಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಾನ್ಸ್ಟೇಬಲ್‌ಗಳು ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್​​ಪೆಕ್ಟರ್​ಗೆ ಲೋಕಾ ಶಾಕ್: ಬಂಧನದ ಭೀತಿಯಲ್ಲಿ ಪಿಐ ಎಸ್ಕೇಪ್​​
ಇನ್ಸ್​ಪೆಕ್ಟರ್​ ಕುಮಾರ್
Shivaprasad B
| Edited By: |

Updated on: Apr 02, 2025 | 11:00 AM

Share

ಬೆಂಗಳೂರು, ಏಪ್ರಿಲ್ 02: ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್​​ಪೆಕ್ಟರ್​ಗೆ ಲೋಕಾಯುಕ್ತ (Lokayukta) ಶಾಕ್​ ನೀಡಿದ್ದು ಬಂಧನ ಭೀತಿ ಹಿನ್ನೆಲೆ ಪರಾರಿಯಾಗಿರುವಂತಹ ಘಟನೆ ನಡೆದಿದೆ. ಸುಳ್ಳು ಕೇಸ್ ದಾಖಲಿಸಿ 4 ಕೋಟಿ ರೂ. ಮೌಲ್ಯದ ಮನೆ ಮಾರಾಟಕ್ಕೆ ನಾಗರಬಾವಿಯ (Naagarabhaavi) ಖಾಸಗಿ ಹೋಟೆಲ್​ನಲ್ಲಿ ಡೀಲ್ ನಡೆದಿತ್ತು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿಚಾರ ತಿಳಿದು ಮನೆಯಲ್ಲೇ ಪೊಲೀಸ್ ಜೀಪ್ ಬಿಟ್ಟು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸ್ ಇನ್ಸ್​ಪೆಕ್ಟರ್​ ಕುಮಾರ್ ಪರಾರಿ ಆಗಿದ್ದಾರೆ. ನಿನ್ನೆ ಸಂಜೆ 5 ಗಂಟೆಯಿಂದ ಮುಂಜಾನೆ 3 ಗಂಟೆವರೆಗೆ ಕಾರ್ಯಾಚರಣೆ ಮಾಡಲಾಗಿದೆ.

4 ಕೋಟಿ ರೂ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಆರೋಪ

ಸಿವಿಲ್ ಕಂಟ್ರ್ಯಾಕ್ಟರ್ ಚನ್ನೇಗೌಡ ಪತ್ನಿ ಅನುಷಾ ಎಂಬುವವರಿಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪಿಐ​ ಕುಮಾರ್​ನಿಂದ ಕಿರುಕುಳ ಆರೋಪ ಕೇಳಿಬಂದಿದೆ. ಸುಳ್ಳು ಕೇಸ್ ದಾಖಲಿಸಿ ಚನ್ನೇಗೌಡಗೆ ಸೇರಿದ 4 ಕೋಟಿ ರೂ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದು, ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಪಿಐ ಕಿರುಕುಳ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಮಂಗಳೂರು: ಮುಡಾದಲ್ಲಿ ಭ್ರಷ್ಟಾಚಾರ ಅಬ್ಬರ, ಕಮಿಷನರ್ ವಿರುದ್ಧವೇ ವಾಮಾಚಾರ ಬೆದರಿಕೆ

ಇದನ್ನೂ ಓದಿ
Image
ಕರ್ನಾಟಕ ಸರ್ಕಾರದಿಂದ ಜನರಿಗೆ ಮತ್ತೊಂದು ಬರೆ: ಡೀಸೆಲ್​​ ದರ ಏರಿಕೆ
Image
ಗಮನಿಸಿ: ಏಪ್ರಿಲ್ 1 ರಿಂದ ಈ ವಾಹನಗಳಿಗೆ ಪೆಟ್ರೋಲ್- ಡೀಸೆಲ್ ಸಿಗುವುದಿಲ್ಲ
Image
ಕರ್ನಾಟಕದಲ್ಲಿ ಪೆಟ್ರೋಲ್​​ಗೆ ಕೇಂದ್ರ, ರಾಜ್ಯದ ತೆರಿಗೆಗಳೆಷ್ಟು?
Image
74 ಡಾಲರ್​ಗಿಂತಲೂ ಕಡಿಮೆಯಾದ ಕಚ್ಚಾತೈಲ ದರ

ಈ ಹಿಂದೆ ದಾಖಲಾಗಿದ್ದ ಪ್ರಕರಣಕ್ಕೆ ಬಿ ರಿಪೋರ್ಟ್ ಹಾಕುತ್ತೇನೆ. ಮನೆ ಬರೆದುಕೊಡಿ ಎಂದು ಇನ್ಸ್​ಪೆಕ್ಟರ್​ ಕುಮಾರ್​ ಕಿರುಕುಳ ನೀಡಿದ್ದು, ಈ ಹಿಂದೆ ಚನ್ನೇಗೌಡ ಮನೆಗೆ ಕೆಲ ಪುಂಡರನ್ನು ನುಗ್ಗಿಸಿ ದಾಂದಲೆ ಮಾಡಿದ್ದಾರೆ. ಈ ವೇಳೆ ಸಿವಿಲ್ ಕಂಟ್ರ್ಯಾಕ್ಟರ್ ಚನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು.  ಚನ್ನೇಗೌಡನನ್ನು ಠಾಣೆಗೆ ಕರೆಸಿ ಒತ್ತಾಯಪೂರ್ವಕವಾಗಿ ಅಗ್ರಿಮೆಂಟ್​​ಗೆ ಸಹಿ ಮಾಡಿಸಿ, ಆನ್​ಲೈನ್​ ಮೂಲಕ 4 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.​

ಸೋದರ ಸಂಬಂಧಿ ಗವಿಗೌಡ, ದಿವ್ಯಾ ಹೆಸರಿಗೆ ಮನೆ ನೋಂದಣಿಗೆ ಒತ್ತಡ ಹೇರಿದ್ದು, ನಿನ್ನೆ ಸಂಜೆ ಅಗ್ರಿಮೆಂಟ್​ಗೆ ಸಹಿ ಹಾಕಿಸಲು ನಾಗರಬಾವಿಯ ಖಾಸಗಿ ಹೋಟೆಲ್​ಗೆ ಚನ್ನೇಗೌಡ ಪತ್ನಿ ಅನುಷಾರನ್ನು ಕರೆಸಿದ್ದರು. ಈ ವೇಳೆ ಲೋಕಾ ದಾಳಿ ವಿಚಾರ ತಿಳಿಯುತ್ತಿದ್ದಂತೆ ಕುಮಾರ್ ಪರಾರಿ ಆಗಿದ್ದಾರೆ. ಆದರೆ, ಇಬ್ಬರು ಕಾನ್ಸ್​ಟೇಬಲ್​ಗಳು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಕಾನ್​ಸ್ಟೇಬಲ್​ಗಳಾದ ಉಮೇಶ್, ಅನಂತ್ ಸೋಮಶೇಖರ್ ಆರಾಧ್ಯ, ಖರೀದಿದಾರ ಗವಿಗೌಡ, ದಿನೇಶ್ ಸೇರಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಲಂಚ ಮುಟ್ಟಲ್ಲವೆಂದು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬೆಸ್ಕಾಂ ಸಹಾಯಕ ಇಂಜಿನಿಯರ್

ಕೆಟ್ಟು ಹೋದ ಟಿಸಿ ದುರಸ್ತಿ ಮಾಡಿಕೊಡಲು ರೈತನಿಂತ ಹತ್ತು ಸಾವಿರ ರೂ. ಲಂಚ ಸ್ವೀಕರಿಸುವಾಗ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ವಿಭಾಗದ ಬೆಸ್ಕಾಂ ಸಹಾಯಕ ಇಂಜಿನಿಯರ್ ಮೋಹನ್ ಕುಮಾರ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ಆದಾಯದಲ್ಲಿ ಮೈಲಿಗಲ್ಲು ಸಾಧಿಸಿದ ನೈಋತ್ಯ ರೈಲ್ವೆ: ಹುಬ್ಬಳ್ಳಿ, ಮೈಸೂರು ವಿಭಾಗದಿಂದ ಭಾರೀ ಕೊಡುಗೆ

ಮಲ್ಲಾಪುರ ಗ್ರಾಮದ ಬಿಎಂ ಮಂಜುನಾಥ ಎಂಬ ರೈತನಿಂದ ತಮ್ಮ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ ಡಿವೈಎಸ್ಪಿ ಕಲಾವತಿ ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಇದೇ ಅಧಿಕಾರಿ ರೈತರಿಂದ ಲಂಚ ಮುಟ್ಟಲ್ಲ ಎಂದು ಸಂತೆಬೆನ್ನೂರು ಪ್ರಸನ್ ಗಣಪತಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್