Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸಂಚಾರ ಮಾರ್ಗ ಬದಲಾವಣೆ ವಿವರ ಇಲ್ಲಿದೆ

ಲೋಕಸಭಾ ಚುನಾವಣೆಯ(Lok sabha election) ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಅದರಂತೆ ನಾಳೆ(ಏ.20) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ಕೆಲವು ಕಡೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಈ ಹಿನ್ನಲೆ ಪರ್ಯಾಯ ಮಾರ್ಗವಾಗಿ ಬೇರೆ ರಸ್ತೆಗಳನ್ನು ಬಳಸಲು ಸಂಚಾರ ಪೊಲೀಸರು ಸೂಚಿಸಿದ್ದಾರೆ.

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸಂಚಾರ ಮಾರ್ಗ ಬದಲಾವಣೆ ವಿವರ ಇಲ್ಲಿದೆ
ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ
Follow us
Shivaprasad
| Updated By: ವಿವೇಕ ಬಿರಾದಾರ

Updated on:Apr 20, 2024 | 8:04 AM

ಬೆಂಗಳೂರು, ಏ.19: ಲೋಕಸಭಾ ಚುನಾವಣೆಯ(Lok sabha election) ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಹೇಗಾದರೂ ಶತಾಯ ಗತಾಯ ಗೆಲುವು ಸಾಧಿಸಲು ಹರಸಾಹಸ ಪಡುತ್ತಿವೆ. ಅದರಂತೆ ಇಂದು (ಏ.20) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್​ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆ ಬಿಗಿ ಪೊಲೀಸ್​ ಬಂದೂಬಸ್ತ್ ಮಾಡಲಾಗಿದೆ.

ಭದ್ರತೆಗಾಗಿ ಎರಡು ಸಾವಿರ ಪೊಲೀಸರ ನಿಯೋಜನೆ

ಇನ್ನು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶ ಹಿನ್ನಲೆ ಅರಮನೆ ಸುತ್ತಲೂ ಹದ್ದಿನ ಕಣ್ಣು ಇಡಲಾಗಿದ್ದು, ಭದ್ರತೆಗಾಗಿ ಬರೊಬ್ಬರಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಜೊತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿದ್ದು, ಬಂದೋಬಸ್ತ್​​ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್​ ಕಾನ್ಸ್​ಟೇಬಲ್​, ಪೊಲೀಸ್​ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.  ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ:ಏ.20 ರಂದು ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ: ಇಲ್ಲಿದೆ ಕಾರ್ಯಕ್ರಮದ ವಿವರ

ಹೌದು, ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಮೇಕ್ರಿ ಸರ್ಕಲ್‌ನಲ್ಲಿ ಚಂಬು ಪ್ರದರ್ಶಿಸಿ ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ಈ ಹಿನ್ನಲೆ‌ ಮೇಕ್ರಿ ಸರ್ಕಲ್‌ನಲ್ಲಿ ಹೆಚ್ಚುವರಿಯಾಗಿ ಬಿಗಿ ಭದ್ರತೆ ಆಯೋಜಿಸಲಾಗಿದೆ. ಇಂದು  (ಏ.20) ಮೇಕ್ರಿ ಸರ್ಕಲ್‌ನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಲು ಮುಂದಾದರೆ ಕೂಡಲೇ ಪೊಲೀಸರು ವಶಕ್ಕೆ ಪಡೆದು ಕ್ರಮಕೈಗೊಳ್ಳಲಿದ್ದಾರೆ. ಇನ್ನು ಸಮಾವೇಶದ ನಂತರ ರಸ್ತೆ ಮಾರ್ಗವಾಗಿ ಹೆಚ್.ಎ.ಎಲ್ ಗೆ ಮೋದಿ ತಲುಪಲಿದ್ದು, ಹೆಜ್ಜೆ ಹಜ್ಜೆಗೂ ಪೊಲೀಸರನ್ನು ಇರಿಸಲಾಗಿದೆ.

ಅರಮನೆ ಮೈದಾನ, ಹೆಚ್​ಕ್ಯೂಟಿಸಿ ಸುತ್ತಮುತ್ತ ನೋ ಫ್ಲೈ ಜೋನ್

ಇದರ ಜೊತೆಗೆ ಅರಮನೆ ಮೈದಾನ ಹಾಗೂ ಹೆಚ್​ಕ್ಯೂಟಿಸಿ ಸುತ್ತಮುತ್ತ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 10ರಿಂದ ರಾತ್ರಿ 8 ಗಂಟೆಯವರೆಗೆ ನೋ ಫ್ಲೈ ಜೋನ್ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ.

ಸಂಚಾರ ಮಾರ್ಗ ಬದಲಾವಣೆ

ನಾಳೆ ಮಧ್ಯಾಹ್ನ ಒಂದು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ಈ ಹಿನ್ನಲೆ ವಾಹನ ಸವಾರರಿಗೆ ಅಡಚಣೆಯಾಗದಂತೆ ಸಂಚಾರಿ ಪೊಲೀಸರು ನಗರದ ಹನ್ನೊಂದು ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಿದ್ದಾರೆ.

ಈ ರಸ್ತೆಯಲ್ಲಿ ಸಂಚಾರ ವ್ಯತ್ಯಯ

ಪ್ಯಾಲೇಸ್ ರಸ್ತೆ, ಜಯಮಹಲ್, ರಮಣಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ರಸ್ತೆ, ಜಯರಾಮ್ ರಸ್ತೆ, ಸಿ ವಿ ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಖ್ರಿ ಸರ್ಕಲ್, ವಸಂತನಗರ, ಬಳ್ಳಾರಿ ರಸ್ತೆ ಮತ್ತು ತರಳಬಾಳು ರಸ್ತೆಯಲ್ಲಿ ಸಂಚಾರ ವ್ಯತ್ಯಯವಾಗಲಿದೆ.

ಪರ್ಯಾಯ ಮಾರ್ಗ

ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 pm, Fri, 19 April 24

Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ