AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 16ರ ಮಧ್ಯರಾತ್ರಿಯಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ; ಏನಿರುತ್ತೆ, ಏನಿರಲ್ಲ?

ಕೇಂದ್ರ ಸರ್ಕಾರ ಹಿಟ್ ಆ್ಯಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತರಲು ಉದ್ದೇಶಿಸಿರುವ ಕಾಯ್ದೆ ರದ್ದಿಗೆ ಆಗ್ರಹಿಸಿ ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘ ಜನವರಿ 16ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಬಂದ್ ಗೆ ಕರೆ ಕೊಟ್ಟಿದೆ.

ಜನವರಿ 16ರ ಮಧ್ಯರಾತ್ರಿಯಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ; ಏನಿರುತ್ತೆ, ಏನಿರಲ್ಲ?
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: |

Updated on: Jan 11, 2024 | 2:52 PM

Share

ಬೆಂಗಳೂರು, ಜ.11: ಕೇಂದ್ರ ಸರ್ಕಾರದ ಹಿಟ್ ಐಂಡ್ ರನ್ ಕಾನೂನು(Hit and Run Case), ನಯಾ ರೂಲ್ಸ್ ಜಾರಿಗೆ ಮುಂದಾದ ಕೇಂದ್ರ ಸರ್ಕಾರ ವಿರುದ್ಧ ಸಿಡಿದೆದ್ದಿರೋ ಲಾರಿ ಓನರ್ಸ್ ಅಸೋಸಿಯೇಷನ್(Lorry owners association)  ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಜ.16ರ ಮಧ್ಯರಾತ್ರಿಯಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ತಿಳಿಸಿದ್ದಾರೆ.

ಕೇಂದ್ರದ ಹಿಟ್​​​ ಆ್ಯಂಡ್​​​ ರನ್​​​ ಕಾಯ್ದೆಯನ್ನ ನಾವು ಖಂಡಿಸ್ತಿದ್ದೇವೆ. ಈ ಕಾಯ್ದೆಯಿಂದ ಲಾರಿ ಮಾಲೀಕ, ಚಾಲಕರಿಗೆ ತೊಂದರೆ ಆಗುತ್ತೆ. ಕಾಯ್ದೆಯಡಿ ಲಕ್ಷ ಲಕ್ಷ ದಂಡ ಕಟ್ಟಲು ಚಾಲಕರಿಂದ ಅಸಾಧ್ಯ. ಮುಷ್ಕರದಿಂದ 6 ರಿಂದ 8 ಲಕ್ಷ ಲಾರಿ ಸಂಚಾರ ನಿಲ್ಲಲಿದೆ. ಅಗತ್ಯ ವಸ್ತು ಸಾಗಣೆ ಬಿಟ್ಟು ಎಲ್ಲಾ ಲಾರಿ ಸಂಚಾರ ಬಂದಾಗುತ್ತೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ಹೇಳಿದರು.

ಕೇಂದ್ರ ಸರ್ಕಾರ ಹಿಟ್ ಆ್ಯಂಡ್ ರನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತರಲು ಉದ್ದೇಶಿಸಿರುವ ಕಾಯ್ದೆ ರದ್ದಿಗೆ ಆಗ್ರಹಿಸಿ ಫೆಡರೇಷನ್ ಆಫ್ ಕರ್ನಾಟಕ ಲಾರಿ ಮಾಲೀಕರ ಸಂಘ ಜನವರಿ 16ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಬಂದ್ ಗೆ ಕರೆ ಕೊಟ್ಟಿದೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಕಡೆಯಿಂದ ಅಯೋಧ್ಯೆಗೆ 11 ವಿಶೇಷ ರೈಲು

ಯಾಕೆ ವಿರೋಧ?

ಹಿಟ್ ಅ್ಯಂಡ್ ರನ್ ಪ್ರಕರಣಗಳಿಗೆ  ಭಾರತೀಯ ನ್ಯಾಯ ಸಂಹಿತೆಯಡಿ ರೂಲ್ಸ್‌  ಜಾರಿ. ಈ ಹಿಂದೆ ಐಪಿಸಿ ಸೆಕ್ಷನ್ ಅಡಿ 2 ಯಾರಾದ್ರೂ ಸಾವನ್ನಪ್ಪಿದ್ರೆ 2 ವರ್ಷ ಜೈಲು ಶಿಕ್ಷೆ ಇತ್ತು. ಇದೀಗ ಹೊಸ ಕಾನೂನಿನಡಿ ತಪ್ಪಿತಸ್ಥ ಚಾಲಕರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಸೇರಿದಂತೆ  7 ಲಕ್ಷದವರೆಗೆ ದಂಡದ ಪ್ರಸ್ತಾಪ. ಅಪಘಾತದ ಬಳಿಕ ಓಡಿ ಹೋಗದೇ ಘಟನಾ ಸ್ಥಳದಲ್ಲೇ ಇದ್ದರೂ ಕೂಡಾ 5 ವರ್ಷ ಜೈಲು ಶಿಕ್ಷೆ. ಇದ್ರಿಂದ  ಲಾರಿ, ಟ್ರಕ್ ಚಾಲಕರು ವಿರೋಧ ವ್ಯಕ್ತಪಡಿಸಿದ್ದಾರೆ. ಲಾರಿ ಮಾಲೀಕರನ್ನಾಗಲೀ ಅಥವಾ ಈ ಉದ್ಯಮದಲ್ಲಿ ಇರುವ ಯಾರನ್ನೂ ಸಂಪರ್ಕಿಸದೇ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಅಂತಾ ಆಕ್ರೋಶ ಹೊರ ಹಾಕಿದ್ದಾರೆ.

ಅಸೋಸಿಯೇಷನ್ ನಲ್ಲಿ 6 ಲಕ್ಷ ಜನ ಓನರ್ ಗಳಿದ್ದು, 9 ಲಕ್ಷ ವಾಹನಗಳು ರಾಜ್ಯಾದ್ಯಂತ ಇವೆ. 15 ಲಕ್ಷ ಜನ ಡ್ರೈವರ್ ಗಳಿದ್ದಾರೆ.

ಬಂದ್​ ದಿನ ಏನಿರಲ್ಲ?

ಬಂದ್ ದಿನ‌ ಸುಮಾರು 9 ರಿಂದ 10 ಲಕ್ಷ ವಾಹನ ಸಂಚಾರ ಬಂದ್ ಆಗಲಿದೆ.  ಮರಳು , ಸಿಮೆಂಟ್ ಸಪ್ಲೈ, ಇಂಡಸ್ಟ್ರಿ ಮೆಟಿರಿಯಲ್  ಬಂದ್ ಆಗಲಿದೆ.  ನೀರು, ಹಾಲು, ಪೆಟ್ರೋಲಿಯಂ, ತರಕಾರಿ ನೀರು ಮೆಡಿಸನ್ ಸರಬರಾಜು ಇರಲಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?