AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?

ಕೇಂದ್ರದ ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ.

ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on: Jan 17, 2024 | 9:04 AM

Share

ಬೆಂಗಳೂರು, ಜ.17: ಹಿಟ್ ಆ್ಯಂಡ್ ರನ್ ಕಾನೂನು(Hit and Run Case), ನಯಾ ರೂಲ್ಸ್ ಜಾರಿಗೆ ಮುಂದಾದ ಕೇಂದ್ರ ಸರ್ಕಾರದ (Central Government) ವಿರುದ್ಧ ಸಿಡಿದೆದ್ದಿರೋ ಲಾರಿ ಓನರ್ಸ್ ಅಸೋಸಿಯೇಷನ್(Lorry owners association) ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದು ಮಧ್ಯರಾತ್ರಿಯಿಂದಲೇ ಲಾರಿ ಸಂಘಟನೆಗಳು ಮುಷ್ಕರ ಕೈಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಕೇಂದ್ರದ ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ. ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಇನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅ್ಯಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ, ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾದ ಹಿನ್ನೆಲೆ, ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ. ಅತ್ಯಗತ್ಯ ಸೇವೆಗಳನ್ನ ಹೊರತುಪಡಿಸಿ ಕೆಲ ಸೇವೆಗಳು ವಿಳಂಭವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಜನವರಿ 16ರ ಮಧ್ಯರಾತ್ರಿಯಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ; ಏನಿರುತ್ತೆ, ಏನಿರಲ್ಲ?

ಲಾರಿ ಸಂಘಟನೆಗಳ ಬೇಡಿಕೆಗಳೇನು?

  • ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತೆ ಕಲಂ 106ರ ಉಪವಿಧಿ 1ಮತ್ತು 2 ಅನ್ನು ಕೈ ಬಿಡಬೇಕು

    ಕರ್ನಾಟಕ ಸರ್ಕಾರದ ಮುಂದಿರುವ ಬೇಡಿಕೆಗಳು

  • ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲಾ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದುಹಾಕುವುದು
  • EXCESS PROJECTION ವಿಧಿಸುತ್ತಿರುವ 20 ಸಾವಿರ ದಂಡವನ್ನು ಕಡಿಮೆಗೊಳಿಸಬೇಕು
  • ಕಪ್ಪು ಪಟ್ಟಿ ಹೆಸರಿನಲ್ಲಿ ವಾಣಿಜ್ಯ ವಾಹನಗಳಿಗೆ FC ಮತ್ತು ಪರ್ಮಿಟ್ ನವೀಕರಣ ಮಾಡಿಕೊಡಲು ನಿರಾಕರಿಸುವುದನ್ನು ನಿಲ್ಲಿಸಬೇಕು
  • DSA ಕೇಸುಗಳು ಎಲ್ಲೇ ಇದ್ದರು ಸಹ ಅದನ್ನು ವಾಹನ ಮಾಲೀಕರು ತಮ್ಮ ಮೂಲ ಕಚೇರಿಯಲ್ಲಿ ಮುಗಿಸಿಕೊಳ್ಳುವ ಅವಕಾಶ ನೀಡಬೇಕು

    ಪೋಲೀಸ್ ಇಲಾಖೆಯಲ್ಲಿರುವ ಬೇಡಿಕೆಗಳು

  • ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳ ನಗರ ಪ್ರವೇಶಕ್ಕೆ ದಿನದ ಕೆಲವು ಸಮಯದಲ್ಲಿ ಮಾಡಿರುವ ನಿರ್ಬಂಧವನ್ನು ಕೈಬಿಡಬೇಕು
  • ಅಪಘಾತ ನಡೆದಾಗ ವಾಹನ ಚಾಲಕನ ಚಾಲನಾ ಪತ್ರವನ್ನು ವಶಪಡಿಸಿಕೊಳ್ಳುವುದನ್ನು ಬಿಡಬೇಕು
  • ಅಪಘಾತ ನಡೆದ ನಂತರ ವಶಪಡಿಸಿಕೊಂಡ ವಾಹನ ಮತ್ತು ಚಾಲಕನನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು
  • ಚಾಲಕನ ಚಾಲನಾ ಪರವಾನಿಗೆಯನ್ನು ಅಮಾನತ್ತಿನಲ್ಲಿಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆಯುವುದನ್ನು ನಿಲ್ಲಿಸಬೇಕು
  • ಹೊರ ರಾಜ್ಯಗಳ ವಾಹನಗಳು ನಮ್ಮ ರಾಜ್ಯದಲ್ಲಿ ಅಪಘಾತಕ್ಕೆ ಈಡಾದಾಗ, ವಾಹನ ಮತ್ತು ಚಾಲಕನ ಬಿಡುಗಡೆಗೆ ಸ್ಥಳೀಯ ಭದ್ರತೆ ಮತ್ತು ಜಾಮೀನು ಕೇಳುವುದನ್ನು ನಿಲ್ಲಿಸಬೇಕು.
  • ಬ್ರೇಕ್ ಡೌನ್ ಆಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಬದಿಯಲ್ಲಿ ನಿಂತಿದ್ದರು ವಾಹನಗಳನ್ನು ವಶಪಡಿಸಿಕೊಂಡು ಕಲಂ 283 ರಡಿಯಲ್ಲಿ ಕೇಸು ದಾಖಲಿಸುವುದನ್ನು ನಿಲ್ಲಿಸಬೇಕು.
  • ವಾಹನದ ಡೀಸೆಲ್ ಮತ್ತು ಬಿಡಿ ಭಾಗಗಳು ಕಳ್ಳತನವಾದಾಗ ಮಾಲೀಕರು ಠಾಣೆಗೆ ದೂರು ನೀಡಿದಾಗ FIR ದಾಖಲಿಸಬೇಕು.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು