AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಣಿ ಕಾಲೇಜ್​ ಅಂಡರ್​ ಪಾಸ್ ಬಂದ್: ಸಿಲುಕಿದ ಲಾರಿ, ಮಾರ್ಗ ಬದಲಾವಣೆ ಇಲ್ಲಿದೆ

ಮಹಾರಾಣಿ ಕಾಲೇಜ್​ ಬಳಿ ಇರುವ​ ಅಂಡರ್​ ಪಾಸ್​​ನಲ್ಲಿ ಲಾರಿಯೊಂದು ಸಿಲುಕಿದ್ದು, ಸದ್ಯ ಸಂಚಾರಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿ ಟ್ರಾಫಿಕ್ ಡೈವರ್ಶನ್​​​ ನೀಡಿದ್ದಾರೆ.

ಮಹಾರಾಣಿ ಕಾಲೇಜ್​ ಅಂಡರ್​ ಪಾಸ್ ಬಂದ್: ಸಿಲುಕಿದ ಲಾರಿ, ಮಾರ್ಗ ಬದಲಾವಣೆ ಇಲ್ಲಿದೆ
ಅಂಡರ್​​ ಪಾಸ್​​ನಲ್ಲಿ ಸಿಲುಕಿರುವ ಲಾರಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 07, 2023 | 9:01 AM

Share

ಬೆಂಗಳೂರು: ಇತ್ತಿಚಿಗೆ ನಗರದ ಕೆ.ಆರ್​.ಸರ್ಕಲ್ ಅಂಡರ್ ಪಾಸ್​ನಲ್ಲಿ (KR Circle Underpass) ಮಳೆ ನೀರಿಗೆ ಕಾರು ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿದ್ದರು. ಈ ಪ್ರಕರಣದ ಬೆನ್ನಲ್ಲೇ ನಗರದ ಮತ್ತೊಂದು ಅಂಡರ್ ಪಾಸ್​​​ನಲ್ಲಿ (Underpass) ಲಾರಿ (Lorry) ಸಿಲುಕಿದೆ. ಹೌದು ಮೈಸೂರು ಬ್ಯಾಂಕ್ (Mysore Bank) ಕಡೆಯಿಂದ ಬಂದ ಲಾರಿಯೊಂದು ಮಹಾರಾಣಿ ಕಾಲೇಜ್​ (Maharani College) ಬಳಿ ಇರುವ​ ಅಂಡರ್​ ಪಾಸ್​​ನಲ್ಲಿ ಸಿಲುಕಿಕೊಂಡಿದೆ. ಈ ಹಿನ್ನೆಲೆ ಉಪ್ಪಾರಪೇಟೆ ಸಂಚಾರಿ ಪೊಲೀಸರು ಲಾರಿ ಹೊರ ತೆಗೆಯಲು ಜೆಸಿಬಿ ತರಿಸಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಸಂಚಾರಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿ ಟ್ರಾಫಿಕ್ ಡೈವರ್ಶನ್​​​ ನೀಡಿದ್ದಾರೆ.

ಚಾಲುಕ್ಯ ಸರ್ಕಲ್​​ಗೆ ಬರಲು ಫ್ರೀಡಂ ಪಾರ್ಕ್ ಕಡೆಯಿಂದ ಬರಲು ಸಂಚಾರಿ ಪೊಲೀಸರ ಸೂಚನೆ ನೀಡಿದ್ದಾರೆ. ಅಂಡರ್ ಪಾಸ್​​ನಲ್ಲಿ ಲಾರಿ ತೆರಳಲು ಸಾಧ್ಯವಿಲ್ಲ. ಆದರೂ ಲಾರಿ ಬಂದಿರುವುದು ವಿಪರ್ಯಾಸ.

ಇದನ್ನೂ ಓದಿ: ಬೆಂಗಳೂರಿನಲ್ಲೆಷ್ಟಿವೆ ಅಂಡರ್​ಪಾಸ್​ಗಳು? ಇಲ್ಲಿದೆ ವಿವರ

ಚಿತ್ರದುರ್ಗ: ಆಕಸ್ಮಿಕ ಬೆಂಕಿಯಿಂದ ಲಾರಿ ಹೊತ್ತಿ ಉರಿದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಲಾರಿ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು

ಶಿವಾನಂದ ರೈಲ್ವೆ ಅಂಡರ್ ಪಾಸ್ ಅತ್ಯಂತ ಡೇಂಜರೆಸ್. ಕೆ‌.ಆರ್. ಸರ್ಕಲ್ ಅಂಡರ್ ಪಾಸ್, ಪ್ಯಾಲೇಸ್ ರೋಡ್ ಗಾಲ್ಫ್ ಅಂಡರ್ ಪಾಸ್, ಮಾಗಡಿ ರೋಡ್ ನ ಹೌಸಿಂಗ್ ಬೋಡ್೯ ಅಂಡರ್ ಪಾಸ್, ಟೋಲ್ ಗೇಟ್ ಅಂಡರ್ ಪಾಸ್, ನಾಯಂಡಹಳ್ಳಿ, ಅಂಡರ್ ಪಾಸ್​ಗಳು ತುಂಬಾ ಡೇಂಜರ್. ಮಳೆ ಬಂದ 10 ನಿಮಿಷಕ್ಕೆ ಈ ಅಂಡರ್ ಪಾಸ್​ಗಳು ಕೆರೆಯಂತಾಗುತ್ತವೆ. ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಇಲ್ಲದೆ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿರುವುದೇ ಇದಕ್ಕೆ ಮುಖ್ಯ ಕಾರಣ. ಹೀಗಾಗಿ ಅಂಡರ್ ಪಾಸ್​ಗಳನ್ನು ದಾಟಿ ಮನೆಗೆ ಹೋಗುವಾಗ ಎಚ್ಚರ ವಹಿಸಿ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 am, Wed, 7 June 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು