Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಣಿ ಕಾಲೇಜ್​ ಅಂಡರ್​ ಪಾಸ್ ಬಂದ್: ಸಿಲುಕಿದ ಲಾರಿ, ಮಾರ್ಗ ಬದಲಾವಣೆ ಇಲ್ಲಿದೆ

ಮಹಾರಾಣಿ ಕಾಲೇಜ್​ ಬಳಿ ಇರುವ​ ಅಂಡರ್​ ಪಾಸ್​​ನಲ್ಲಿ ಲಾರಿಯೊಂದು ಸಿಲುಕಿದ್ದು, ಸದ್ಯ ಸಂಚಾರಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿ ಟ್ರಾಫಿಕ್ ಡೈವರ್ಶನ್​​​ ನೀಡಿದ್ದಾರೆ.

ಮಹಾರಾಣಿ ಕಾಲೇಜ್​ ಅಂಡರ್​ ಪಾಸ್ ಬಂದ್: ಸಿಲುಕಿದ ಲಾರಿ, ಮಾರ್ಗ ಬದಲಾವಣೆ ಇಲ್ಲಿದೆ
ಅಂಡರ್​​ ಪಾಸ್​​ನಲ್ಲಿ ಸಿಲುಕಿರುವ ಲಾರಿ
Follow us
ವಿವೇಕ ಬಿರಾದಾರ
|

Updated on:Jun 07, 2023 | 9:01 AM

ಬೆಂಗಳೂರು: ಇತ್ತಿಚಿಗೆ ನಗರದ ಕೆ.ಆರ್​.ಸರ್ಕಲ್ ಅಂಡರ್ ಪಾಸ್​ನಲ್ಲಿ (KR Circle Underpass) ಮಳೆ ನೀರಿಗೆ ಕಾರು ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿದ್ದರು. ಈ ಪ್ರಕರಣದ ಬೆನ್ನಲ್ಲೇ ನಗರದ ಮತ್ತೊಂದು ಅಂಡರ್ ಪಾಸ್​​​ನಲ್ಲಿ (Underpass) ಲಾರಿ (Lorry) ಸಿಲುಕಿದೆ. ಹೌದು ಮೈಸೂರು ಬ್ಯಾಂಕ್ (Mysore Bank) ಕಡೆಯಿಂದ ಬಂದ ಲಾರಿಯೊಂದು ಮಹಾರಾಣಿ ಕಾಲೇಜ್​ (Maharani College) ಬಳಿ ಇರುವ​ ಅಂಡರ್​ ಪಾಸ್​​ನಲ್ಲಿ ಸಿಲುಕಿಕೊಂಡಿದೆ. ಈ ಹಿನ್ನೆಲೆ ಉಪ್ಪಾರಪೇಟೆ ಸಂಚಾರಿ ಪೊಲೀಸರು ಲಾರಿ ಹೊರ ತೆಗೆಯಲು ಜೆಸಿಬಿ ತರಿಸಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಸಂಚಾರಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿ ಟ್ರಾಫಿಕ್ ಡೈವರ್ಶನ್​​​ ನೀಡಿದ್ದಾರೆ.

ಚಾಲುಕ್ಯ ಸರ್ಕಲ್​​ಗೆ ಬರಲು ಫ್ರೀಡಂ ಪಾರ್ಕ್ ಕಡೆಯಿಂದ ಬರಲು ಸಂಚಾರಿ ಪೊಲೀಸರ ಸೂಚನೆ ನೀಡಿದ್ದಾರೆ. ಅಂಡರ್ ಪಾಸ್​​ನಲ್ಲಿ ಲಾರಿ ತೆರಳಲು ಸಾಧ್ಯವಿಲ್ಲ. ಆದರೂ ಲಾರಿ ಬಂದಿರುವುದು ವಿಪರ್ಯಾಸ.

ಇದನ್ನೂ ಓದಿ: ಬೆಂಗಳೂರಿನಲ್ಲೆಷ್ಟಿವೆ ಅಂಡರ್​ಪಾಸ್​ಗಳು? ಇಲ್ಲಿದೆ ವಿವರ

ಚಿತ್ರದುರ್ಗ: ಆಕಸ್ಮಿಕ ಬೆಂಕಿಯಿಂದ ಲಾರಿ ಹೊತ್ತಿ ಉರಿದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಲಾರಿ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು

ಶಿವಾನಂದ ರೈಲ್ವೆ ಅಂಡರ್ ಪಾಸ್ ಅತ್ಯಂತ ಡೇಂಜರೆಸ್. ಕೆ‌.ಆರ್. ಸರ್ಕಲ್ ಅಂಡರ್ ಪಾಸ್, ಪ್ಯಾಲೇಸ್ ರೋಡ್ ಗಾಲ್ಫ್ ಅಂಡರ್ ಪಾಸ್, ಮಾಗಡಿ ರೋಡ್ ನ ಹೌಸಿಂಗ್ ಬೋಡ್೯ ಅಂಡರ್ ಪಾಸ್, ಟೋಲ್ ಗೇಟ್ ಅಂಡರ್ ಪಾಸ್, ನಾಯಂಡಹಳ್ಳಿ, ಅಂಡರ್ ಪಾಸ್​ಗಳು ತುಂಬಾ ಡೇಂಜರ್. ಮಳೆ ಬಂದ 10 ನಿಮಿಷಕ್ಕೆ ಈ ಅಂಡರ್ ಪಾಸ್​ಗಳು ಕೆರೆಯಂತಾಗುತ್ತವೆ. ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಇಲ್ಲದೆ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿರುವುದೇ ಇದಕ್ಕೆ ಮುಖ್ಯ ಕಾರಣ. ಹೀಗಾಗಿ ಅಂಡರ್ ಪಾಸ್​ಗಳನ್ನು ದಾಟಿ ಮನೆಗೆ ಹೋಗುವಾಗ ಎಚ್ಚರ ವಹಿಸಿ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 am, Wed, 7 June 23

ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
ಅಮೆರಿಕದ ಏರ್​ಪೋರ್ಟ್​ನಲ್ಲಿ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು
ಹರಪನಹಳ್ಳಿ: ಒಂದೇ ಫಾರಂನಲ್ಲಿನ ಮೂರು ಸಾವಿರ ಕೋಳಿಗಳ ಸಾವು
Video: ಜಗನ್​ಮೋಹನ್​​ ರೆಡ್ಡಿಯವರ ಭವ್ಯ ಬಂಗಲೆಯ ಒಳ-ಹೊರ ನೋಟ
Video: ಜಗನ್​ಮೋಹನ್​​ ರೆಡ್ಡಿಯವರ ಭವ್ಯ ಬಂಗಲೆಯ ಒಳ-ಹೊರ ನೋಟ