AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಣಿ ಕಾಲೇಜ್​ ಅಂಡರ್​ ಪಾಸ್ ಬಂದ್: ಸಿಲುಕಿದ ಲಾರಿ, ಮಾರ್ಗ ಬದಲಾವಣೆ ಇಲ್ಲಿದೆ

ಮಹಾರಾಣಿ ಕಾಲೇಜ್​ ಬಳಿ ಇರುವ​ ಅಂಡರ್​ ಪಾಸ್​​ನಲ್ಲಿ ಲಾರಿಯೊಂದು ಸಿಲುಕಿದ್ದು, ಸದ್ಯ ಸಂಚಾರಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿ ಟ್ರಾಫಿಕ್ ಡೈವರ್ಶನ್​​​ ನೀಡಿದ್ದಾರೆ.

ಮಹಾರಾಣಿ ಕಾಲೇಜ್​ ಅಂಡರ್​ ಪಾಸ್ ಬಂದ್: ಸಿಲುಕಿದ ಲಾರಿ, ಮಾರ್ಗ ಬದಲಾವಣೆ ಇಲ್ಲಿದೆ
ಅಂಡರ್​​ ಪಾಸ್​​ನಲ್ಲಿ ಸಿಲುಕಿರುವ ಲಾರಿ
ವಿವೇಕ ಬಿರಾದಾರ
|

Updated on:Jun 07, 2023 | 9:01 AM

Share

ಬೆಂಗಳೂರು: ಇತ್ತಿಚಿಗೆ ನಗರದ ಕೆ.ಆರ್​.ಸರ್ಕಲ್ ಅಂಡರ್ ಪಾಸ್​ನಲ್ಲಿ (KR Circle Underpass) ಮಳೆ ನೀರಿಗೆ ಕಾರು ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಸಾವನ್ನಪ್ಪಿದ್ದರು. ಈ ಪ್ರಕರಣದ ಬೆನ್ನಲ್ಲೇ ನಗರದ ಮತ್ತೊಂದು ಅಂಡರ್ ಪಾಸ್​​​ನಲ್ಲಿ (Underpass) ಲಾರಿ (Lorry) ಸಿಲುಕಿದೆ. ಹೌದು ಮೈಸೂರು ಬ್ಯಾಂಕ್ (Mysore Bank) ಕಡೆಯಿಂದ ಬಂದ ಲಾರಿಯೊಂದು ಮಹಾರಾಣಿ ಕಾಲೇಜ್​ (Maharani College) ಬಳಿ ಇರುವ​ ಅಂಡರ್​ ಪಾಸ್​​ನಲ್ಲಿ ಸಿಲುಕಿಕೊಂಡಿದೆ. ಈ ಹಿನ್ನೆಲೆ ಉಪ್ಪಾರಪೇಟೆ ಸಂಚಾರಿ ಪೊಲೀಸರು ಲಾರಿ ಹೊರ ತೆಗೆಯಲು ಜೆಸಿಬಿ ತರಿಸಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಸಂಚಾರಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿ ಟ್ರಾಫಿಕ್ ಡೈವರ್ಶನ್​​​ ನೀಡಿದ್ದಾರೆ.

ಚಾಲುಕ್ಯ ಸರ್ಕಲ್​​ಗೆ ಬರಲು ಫ್ರೀಡಂ ಪಾರ್ಕ್ ಕಡೆಯಿಂದ ಬರಲು ಸಂಚಾರಿ ಪೊಲೀಸರ ಸೂಚನೆ ನೀಡಿದ್ದಾರೆ. ಅಂಡರ್ ಪಾಸ್​​ನಲ್ಲಿ ಲಾರಿ ತೆರಳಲು ಸಾಧ್ಯವಿಲ್ಲ. ಆದರೂ ಲಾರಿ ಬಂದಿರುವುದು ವಿಪರ್ಯಾಸ.

ಇದನ್ನೂ ಓದಿ: ಬೆಂಗಳೂರಿನಲ್ಲೆಷ್ಟಿವೆ ಅಂಡರ್​ಪಾಸ್​ಗಳು? ಇಲ್ಲಿದೆ ವಿವರ

ಚಿತ್ರದುರ್ಗ: ಆಕಸ್ಮಿಕ ಬೆಂಕಿಯಿಂದ ಲಾರಿ ಹೊತ್ತಿ ಉರಿದ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಲಾರಿ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರಿನಲ್ಲಿವೆ ಯಮರೂಪಿ ಅಂಡರ್ ಪಾಸ್​ಗಳು

ಶಿವಾನಂದ ರೈಲ್ವೆ ಅಂಡರ್ ಪಾಸ್ ಅತ್ಯಂತ ಡೇಂಜರೆಸ್. ಕೆ‌.ಆರ್. ಸರ್ಕಲ್ ಅಂಡರ್ ಪಾಸ್, ಪ್ಯಾಲೇಸ್ ರೋಡ್ ಗಾಲ್ಫ್ ಅಂಡರ್ ಪಾಸ್, ಮಾಗಡಿ ರೋಡ್ ನ ಹೌಸಿಂಗ್ ಬೋಡ್೯ ಅಂಡರ್ ಪಾಸ್, ಟೋಲ್ ಗೇಟ್ ಅಂಡರ್ ಪಾಸ್, ನಾಯಂಡಹಳ್ಳಿ, ಅಂಡರ್ ಪಾಸ್​ಗಳು ತುಂಬಾ ಡೇಂಜರ್. ಮಳೆ ಬಂದ 10 ನಿಮಿಷಕ್ಕೆ ಈ ಅಂಡರ್ ಪಾಸ್​ಗಳು ಕೆರೆಯಂತಾಗುತ್ತವೆ. ಮಳೆ ನೀರು ಹರಿದು ಹೋಗುವ ವ್ಯವಸ್ಥೆ ಇಲ್ಲದೆ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿರುವುದೇ ಇದಕ್ಕೆ ಮುಖ್ಯ ಕಾರಣ. ಹೀಗಾಗಿ ಅಂಡರ್ ಪಾಸ್​ಗಳನ್ನು ದಾಟಿ ಮನೆಗೆ ಹೋಗುವಾಗ ಎಚ್ಚರ ವಹಿಸಿ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 am, Wed, 7 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ