AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡಿಜಿಪಿ ಬಾಯಿ ಬಿಟ್ಟರೆ ಎರಡೂ ಪಕ್ಷದವರು ಒಳಗೆ ಹೋಗ್ತಾರೆ: ಭಾಸ್ಕರ್ ರಾವ್

ಪಿಎಸ್​ಐ ನೇಮಕಾತಿ ಹಗರಣದ ಬಗ್ಗೆ ಎಡಿಜಿಪಿ ಬಾಯಿ ಬಿಟ್ಟರೆ ಎರಡೂ ಪಕ್ಷದವರು ಒಳಗೆ ಹೋಗಬೇಕಾಗುತ್ತದೆ ಎಂದು ಸ್ವಯಂ ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷ (AAP) ಸೇರಿರುವ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು

ಎಡಿಜಿಪಿ ಬಾಯಿ ಬಿಟ್ಟರೆ ಎರಡೂ ಪಕ್ಷದವರು ಒಳಗೆ ಹೋಗ್ತಾರೆ: ಭಾಸ್ಕರ್ ರಾವ್
ಆಪ್ ಧುರೀಣ ಭಾಸ್ಕರ್ ರಾವ್
TV9 Web
| Edited By: |

Updated on:May 06, 2022 | 2:54 PM

Share

ಬೆಂಗಳೂರು: ಪಿಎಸ್​ಐ ನೇಮಕಾತಿ ಹಗರಣದ ಬಗ್ಗೆ ಎಡಿಜಿಪಿ ಬಾಯಿ ಬಿಟ್ಟರೆ ಎರಡೂ ಪಕ್ಷದವರು ಒಳಗೆ ಹೋಗಬೇಕಾಗುತ್ತದೆ ಎಂದು ಸ್ವಯಂ ನಿವೃತ್ತಿ ಪಡೆದು ಆಮ್ ಆದ್ಮಿ ಪಕ್ಷ (AAP) ಸೇರಿರುವ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು. ಹಗರಣದಲ್ಲಿ ಪ್ರಭಾವಿ ಸಚಿವರ ಹೆಸರು ಕೇಳಿ ಬರುತ್ತಿದೆ. ಹಗರಣ ನಡೆದಿದೆ ಎಂದು ಯಾರೊಬ್ಬರೂ ಧ್ವನಿ ಎತ್ತುತ್ತಿಲ್ಲ. ಎಡಿಜಿಪಿ ಬಾಯಿ ಬಿಟ್ಟರೆ ಎರಡೂ ಪಕ್ಷದವರು ಒಳಗೆ ಹೋಗುತ್ತಾರೆ. ಅವರು ಬಾಯಿ ಬಿಡಲು ಬಿಡುವುದಿಲ್ಲ. ಈ ತನಿಖಾ ಸಂಸ್ಥೆಗಳು ಸರ್ಕಾರದ ಕೆಳಗೆ ಬರುತ್ತವೆ. ಸಂತೋಷ್ ಪ್ರಕರಣದಲ್ಲಿ ಸರ್ಕಾರ ವೈಫಲ್ಯ ತೋರಿದೆ. ಅದೇ ರೀತಿ ಈ ಪ್ರಕರಣ ಮಾಡಬೇಡಿ. ಪಿಎಸ್​ಐ ನೇಮಕಾತಿ ಹಗರಣದಿಂದಾಗಿ 50 ಸಾವಿರ ಕುಟುಂಬಗಳಿಗೆ ಅನ್ಯಾಯವಾಗಿದೆ. ನ್ಯಾಯಾಲಯಗಳ ನಿಗಾದಲ್ಲಿ ತನಿಖೆ ನಡೆಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಿಎಸ್ಐ ಹಗರಣದಲ್ಲಿ ಎರಡು ದೊಡ್ಡ ರಾಜಕೀಯ ಪಕ್ಷಗಳು ಹಾಗೂ ದೊಡ್ಡ ನಾಯಕರ ಹೆಸರುಗಳು ಕೇಳಿ ಬರುತ್ತಿದೆ. ನಾವು ಮಾಡಿದ್ದೇವೆ, ನೀವು ಮಾಡಿಲ್ವಾ ಎಂದು ಸ್ವತಃ ಮುಖ್ಯಮಂತ್ರಿ ಕೇಳುತ್ತಿದ್ದಾರೆ. ಪ್ರತಿಭಟನೆ ನಡೆಸುವವರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಯುತ್ತಿದೆ. ಸಚಿವರೊಬ್ಬರು ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ. ಈ ಸರ್ಕಾರಕ್ಕೆ ನಾಯಕತ್ವವೂ ಇಲ್ಲ, ನಿಯತ್ತೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎಡಿಜಿಪಿಯನ್ನು ಬಂಧಿಸಿ ಇತರ ದೊಡ್ಡ ಪ್ರಭಾವಿಗಳನ್ನು ಕೈಬಿಡಲಾಗಿದೆ. ರಾಜಕೀಯ‌ ನಾಯಕರು ಬಕಪಕ್ಷಿಗಳ ರೀತಿ ವರ್ತಿಸುತ್ತಿದ್ದಾರೆ. ಈ ಘೋರ ಪ್ರಕರಣದ ತನಿಖೆ ಆದಷ್ಟೂ ಬೇಗ ಮುಗಿಸಬೇಕೆಂಬ ಆದೇಶವಿದೆಯಂತೆ. ಸರಿಯಾದ ರೀತಿಯಲ್ಲಿ ತನಿಖೆ ಮಾಡದಿದ್ದರೆ ಜನರು ಕ್ಯಾಕರಿಸಿ ಉಗಿಯುತ್ತಾರೆ. ಮಾನ ಮರ್ಯಾದೆ ಎನ್ನುವುದು ಇದ್ದರೆ ಸರಿಯಾದ ರೀತಿಯಲ್ಲಿ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಸಿಐಡಿ ಎನ್ನುವುದು ಮೇಲಿನಿಂದ ಇಳಿದಿಲ್ಲ. ಅದೂ ಸಹ ಸರ್ಕಾರದ ಅಧೀನದಲ್ಲಿಯೇ ಕೆಲಸ ಮಾಡುತ್ತದೆ. ಯಾವ ಪ್ರಕರಣದಲ್ಲಿಯೂ ನಿರ್ದಿಷ್ಟವಾಗಿ ಸಿಐಡಿ ಚಾರ್ಜ್​ಶೀಟ್ ಸಲ್ಲಿಸಿಲ್ಲ. ಸರ್ಕಾರದ ಅಭಯ ಹಸ್ತದಿಂದಲೇ ಇಂಥ ಅಕ್ರಮ ನಡೆಯುತ್ತದೆ. ಮಾಧ್ಯಮಗಳ ಒತ್ತಡ ಕಡಿಮೆ ಮಾಡಲು ಸಿಐಡಿಗೆ ಕೊಡುವ ನಾಟಕ ಮಾಡುತ್ತಾರೆ ಎಂದು ದೂರಿದರು.

ಇದನ್ನೂ ಓದಿ: PSI Recruitment Scam: ಡಿವೈಎಸ್​ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಆನಂದ್​ ಸಿಐಡಿ ವಶ

ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಅಕ್ರಮ: ಬಂಧಿತ ಸಿಪಿಐ ಆನಂದ್ PSI ಪರೀಕ್ಷೆ ಬಳಿಕ ಬರೋಬ್ಬರಿ 22 ಎಕರೆ ಜಮೀನು ಖರೀದಿ ಮಾಡಿದ್ದ

Published On - 2:54 pm, Fri, 6 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್