AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಜೊತೆಗಿದ್ದ ಜೋಡಿಯೇ ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಚಿತ್ರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ರು! ಮುಂದೇನಾಯ್ತು?

ಆರೋಪಿಗಳಾದ ಉಷಾ ಮತ್ತು ಸುರೇಶ್ ಸಹ ಪ್ರೇಮಿಗಳು. ಅಲ್ಲದೆ ನೊಂದ ಮಹಿಳೆಯ ಹತ್ತಿರದ ಸಂಬಂಧಿ ಸಹ. ಆದ್ರೆ ಸಂಬಂಧಿಯಾಗಿದ್ದೇ ಇಂತಹ ಕೃತ್ಯಕ್ಕೆ ಇಳಿದು ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ಹಣಕ್ಕಾಗಿ ಜೊತೆಗಿದ್ದ ಜೋಡಿಯೇ ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಚಿತ್ರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ರು! ಮುಂದೇನಾಯ್ತು?
ಉಷಾ ಮತ್ತು ಸುರೇಶ್ ಬಾಬು
TV9 Web
| Edited By: |

Updated on: Jul 18, 2022 | 2:43 PM

Share

ಬಾಗಲೂರು: ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಸೆರೆ ಹಿಡಿದು ಬೆದರಿಸಿದ್ದ ಇಬ್ಬರು ಆರೋಪಿಗಳನ್ನು ಬಾಗಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಷಾ ಮತ್ತು ಸುರೇಶ್ ಬಾಬು ಬಂಧಿತ ಆರೋಪಿಗಳು. ಸದ್ಯ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಮತ್ತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಯಲಹಂಕ ಬಳಿಯ ಖಾಸಗಿ ಹೋಟೆಲ್ ಗೆ ಹೋಗಿದ್ದ ಇಬ್ಬರು ಪ್ರೇಮಿಗಳು, ಒಂದೇ ರೂಮ್ ನಲ್ಲಿ ಎರಡು ಬಾರಿ ಭೇಟಿ ಆಗಿದ್ರು. ಈ ವೇಳೆ ಯಾರಿಗೂ ಗೊತ್ತಾಗದ ರೀತಿ ಆರೋಪಿಗಳು ಕ್ಯಾಮರಾ ಇಟ್ಟು ವಿಡಿಯೋ ಚಿತ್ರಿಕರಿಸಿದ್ದರು. ಆರೋಪಿಗಳಾದ ಉಷಾ ಮತ್ತು ಸುರೇಶ್ ಸಹ ಪ್ರೇಮಿಗಳು. ಅಲ್ಲದೆ ನೊಂದ ಮಹಿಳೆಯ ಹತ್ತಿರದ ಸಂಬಂಧಿ ಸಹ. ಆದ್ರೆ ಸಂಬಂಧಿಯಾಗಿದ್ದೇ ಇಂತಹ ಕೃತ್ಯಕ್ಕೆ ಇಳಿದು ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ಆರೋಪಿಗಳು ಯಾರಿಗೂ ಇಳಿಯದಂತೆ ರೂಮ್ನಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಮಾಡಿ ಬಳಿಕ ಕೆಲ ದಿನಗಳ ನಂತರ ನೊಂದ ಮಹಿಳೆಗೆ ವಾಟ್ಸಪ್ ಮೂಲಕ ವಿಡಿಯೋ ಕಳಿಸಿದ್ದಾರೆ. ವಿಡಿಯೋ ನೋಡಿ ಮಹಿಳೆ ಶಾಕ್ ಆಗಿದ್ದಾರೆ. ಬಳಿಕ ಅದೇ ನಂಬರ್ ನಿಂದ ಇಪತ್ತೈದು ಲಕ್ಷ ಹಣ ಕೊಡಿ ಇಲ್ಲಾವಾದ್ರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಬಂದಿದೆ. ನೊಂದ ಮಹಿಳೆ ಹಣ ನೀಡಲು ತಡಮಾಡಿದಾಗ ಆರೋಪಿ ಉಷಾ ಹೊಸ ನಾಟಕ ಶುರು ಮಾಡಿದ್ದಾರೆ. ತನ್ನ ಮೊಬೈಲ್ ಗೂ ಯಾರೊ ನಿಮ್ಮ ವಿಡಿಯೋ ಕಳಿಸಿದ್ದಾರೆ ಎಂದು ಮತ್ತಷ್ಟು ಬೆದರಿಸಲು ಮುಂದಾಗಿದ್ದಾರೆ. ಜೊತೆಗೆ ಸಿಡಿ ಮಾಡಿ ಮನೆಯವರು ಹಾಗೂ ಕುಟುಂಬದ ಎಲ್ಲರಿಗೂ ಕಳಿಸುವುದಾಗಿ ಹೆದರಿಸಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಬಾಗಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ