AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ

ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ. "ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ" ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ ಜಾಗೃತಿ ಮೂಡಿಸಿದೆ.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
ವಿವೇಕ ಬಿರಾದಾರ
|

Updated on: Sep 11, 2024 | 3:00 PM

Share

ಬೆಂಗಳೂರು, ಸೆಪ್ಟೆಂಬರ್​ 11: ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್​ ಧರಿಸಿ ಅಂತ ಸಂಚಾರಿ ಪೊಲೀಸರು (Traffic Police) ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದರೂ ಕೂಡ ಇನ್ನೂ ಕೆಲವರು ಹೆಲ್ಮೆಟ್​ ಧರಿಸದೆ ವಾಹನ ಚಲಾಯಿಸಿ ಜೀವಕ್ಕೆ ಕಂಟಕ ತಂದುಕೊಳ್ಳುತ್ತಾರೆ. ಇದೀಗ ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ (Public Road Safety Campaign) ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ.

“ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ” ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ​ ಜಾಗೃತಿ ಮೂಡಿಸಿದೆ. ಪೋಲೀಸ್, ಗೇಮ್ ಡೆವಲಪರ್‌ಗಳು ಮತ್ತು ಮಾಧ್ಯಮ ಕಂಪನಿ ಸ್ಚ್‌ಬಾಂಗ್ ಸಹಯೋಗದಲ್ಲಿ “ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ”ದಲ್ಲಿ “ಮಚ್ಚಾ ಹೆಲ್ಮೆಟ್​ ಡಾ” ಹುಷಾರಾಗಿ, ಜವಾಬ್ದಾರಿಯುತವಾಗಿ ವಾಹನ ಚಲಾಯಿಸಿ ಎಂಬ ಸೂಚನಾ ಫಲಕ ಇದೆ. ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮ್​ ಅನ್ನು ಹೆಚ್ಚಾಗಿ 16 ರಿಂದ 25 ವರ್ಷ ವಯಸ್ಸಿನವರು ಆಡುವುದರಿಂದ, ಇವರನ್ನು ಗುರಿಯಾಗಿಸಿಕೊಂಡು ಈ ಜಾಹಿರಾತು ನೀಡಲಾಗಿದೆ.

ಇದನ್ನೂ ಓದಿ: ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಜಾಹಿರಾತು ಪ್ರಮುಖರಾದ ರೆನ್ಸಿಲ್ಲಾ ಫೆರ್ನಾಂಡಿಸ್ ಮಾತನಾಡಿ, “ಬೆಂಗಳೂರು ಇಂಗ್ಲಿಷ್” ನಲ್ಲೇ ಜಾಹಿರಾತು ನೀಡಲಾಗಿದೆ. ಇದು, ಯುವಕರ ಗಮನ ಸೆಳೆಯುತ್ತದೆ. ಗೇಮಿಂಗ್ ಮತ್ತು ನಿಜ ಜೀವನದ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಭಾಷೆ ಬಳಸಲಾಗಿದೆ ಎಂದರು.

ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಮಾತನಾಡಿ, “ಇದು ಸಾಮಾಜಿಕ ಸೇವಾ ಸಂದೇಶವಾಗಿದೆ. ನಾವು 16-25 ವರ್ಷದ ತರುಣರನ್ನು ಗುರಿಯಾಗಿಸಿಕೊಂಡು ಆಟದೊಳಗೆ ಜಾಗೃತಿ ಮೂಡಿಸಲು ಮುಂದಾಗಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್