AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ

ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ. "ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ" ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ ಜಾಗೃತಿ ಮೂಡಿಸಿದೆ.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
Follow us
ವಿವೇಕ ಬಿರಾದಾರ
|

Updated on: Sep 11, 2024 | 3:00 PM

ಬೆಂಗಳೂರು, ಸೆಪ್ಟೆಂಬರ್​ 11: ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್​ ಧರಿಸಿ ಅಂತ ಸಂಚಾರಿ ಪೊಲೀಸರು (Traffic Police) ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದರೂ ಕೂಡ ಇನ್ನೂ ಕೆಲವರು ಹೆಲ್ಮೆಟ್​ ಧರಿಸದೆ ವಾಹನ ಚಲಾಯಿಸಿ ಜೀವಕ್ಕೆ ಕಂಟಕ ತಂದುಕೊಳ್ಳುತ್ತಾರೆ. ಇದೀಗ ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ (Public Road Safety Campaign) ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ.

“ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ” ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ​ ಜಾಗೃತಿ ಮೂಡಿಸಿದೆ. ಪೋಲೀಸ್, ಗೇಮ್ ಡೆವಲಪರ್‌ಗಳು ಮತ್ತು ಮಾಧ್ಯಮ ಕಂಪನಿ ಸ್ಚ್‌ಬಾಂಗ್ ಸಹಯೋಗದಲ್ಲಿ “ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ”ದಲ್ಲಿ “ಮಚ್ಚಾ ಹೆಲ್ಮೆಟ್​ ಡಾ” ಹುಷಾರಾಗಿ, ಜವಾಬ್ದಾರಿಯುತವಾಗಿ ವಾಹನ ಚಲಾಯಿಸಿ ಎಂಬ ಸೂಚನಾ ಫಲಕ ಇದೆ. ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮ್​ ಅನ್ನು ಹೆಚ್ಚಾಗಿ 16 ರಿಂದ 25 ವರ್ಷ ವಯಸ್ಸಿನವರು ಆಡುವುದರಿಂದ, ಇವರನ್ನು ಗುರಿಯಾಗಿಸಿಕೊಂಡು ಈ ಜಾಹಿರಾತು ನೀಡಲಾಗಿದೆ.

ಇದನ್ನೂ ಓದಿ: ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಜಾಹಿರಾತು ಪ್ರಮುಖರಾದ ರೆನ್ಸಿಲ್ಲಾ ಫೆರ್ನಾಂಡಿಸ್ ಮಾತನಾಡಿ, “ಬೆಂಗಳೂರು ಇಂಗ್ಲಿಷ್” ನಲ್ಲೇ ಜಾಹಿರಾತು ನೀಡಲಾಗಿದೆ. ಇದು, ಯುವಕರ ಗಮನ ಸೆಳೆಯುತ್ತದೆ. ಗೇಮಿಂಗ್ ಮತ್ತು ನಿಜ ಜೀವನದ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಭಾಷೆ ಬಳಸಲಾಗಿದೆ ಎಂದರು.

ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಮಾತನಾಡಿ, “ಇದು ಸಾಮಾಜಿಕ ಸೇವಾ ಸಂದೇಶವಾಗಿದೆ. ನಾವು 16-25 ವರ್ಷದ ತರುಣರನ್ನು ಗುರಿಯಾಗಿಸಿಕೊಂಡು ಆಟದೊಳಗೆ ಜಾಗೃತಿ ಮೂಡಿಸಲು ಮುಂದಾಗಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ