AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ

ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ. "ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ" ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ ಜಾಗೃತಿ ಮೂಡಿಸಿದೆ.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Sep 11, 2024 | 3:00 PM

Share

ಬೆಂಗಳೂರು, ಸೆಪ್ಟೆಂಬರ್​ 11: ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್​ ಧರಿಸಿ ಅಂತ ಸಂಚಾರಿ ಪೊಲೀಸರು (Traffic Police) ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದರೂ ಕೂಡ ಇನ್ನೂ ಕೆಲವರು ಹೆಲ್ಮೆಟ್​ ಧರಿಸದೆ ವಾಹನ ಚಲಾಯಿಸಿ ಜೀವಕ್ಕೆ ಕಂಟಕ ತಂದುಕೊಳ್ಳುತ್ತಾರೆ. ಇದೀಗ ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ (Public Road Safety Campaign) ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ.

“ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ” ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ​ ಜಾಗೃತಿ ಮೂಡಿಸಿದೆ. ಪೋಲೀಸ್, ಗೇಮ್ ಡೆವಲಪರ್‌ಗಳು ಮತ್ತು ಮಾಧ್ಯಮ ಕಂಪನಿ ಸ್ಚ್‌ಬಾಂಗ್ ಸಹಯೋಗದಲ್ಲಿ “ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ”ದಲ್ಲಿ “ಮಚ್ಚಾ ಹೆಲ್ಮೆಟ್​ ಡಾ” ಹುಷಾರಾಗಿ, ಜವಾಬ್ದಾರಿಯುತವಾಗಿ ವಾಹನ ಚಲಾಯಿಸಿ ಎಂಬ ಸೂಚನಾ ಫಲಕ ಇದೆ. ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮ್​ ಅನ್ನು ಹೆಚ್ಚಾಗಿ 16 ರಿಂದ 25 ವರ್ಷ ವಯಸ್ಸಿನವರು ಆಡುವುದರಿಂದ, ಇವರನ್ನು ಗುರಿಯಾಗಿಸಿಕೊಂಡು ಈ ಜಾಹಿರಾತು ನೀಡಲಾಗಿದೆ.

ಇದನ್ನೂ ಓದಿ: ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಜಾಹಿರಾತು ಪ್ರಮುಖರಾದ ರೆನ್ಸಿಲ್ಲಾ ಫೆರ್ನಾಂಡಿಸ್ ಮಾತನಾಡಿ, “ಬೆಂಗಳೂರು ಇಂಗ್ಲಿಷ್” ನಲ್ಲೇ ಜಾಹಿರಾತು ನೀಡಲಾಗಿದೆ. ಇದು, ಯುವಕರ ಗಮನ ಸೆಳೆಯುತ್ತದೆ. ಗೇಮಿಂಗ್ ಮತ್ತು ನಿಜ ಜೀವನದ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಭಾಷೆ ಬಳಸಲಾಗಿದೆ ಎಂದರು.

ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಮಾತನಾಡಿ, “ಇದು ಸಾಮಾಜಿಕ ಸೇವಾ ಸಂದೇಶವಾಗಿದೆ. ನಾವು 16-25 ವರ್ಷದ ತರುಣರನ್ನು ಗುರಿಯಾಗಿಸಿಕೊಂಡು ಆಟದೊಳಗೆ ಜಾಗೃತಿ ಮೂಡಿಸಲು ಮುಂದಾಗಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ