AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ

ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ. "ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ" ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ ಜಾಗೃತಿ ಮೂಡಿಸಿದೆ.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Sep 11, 2024 | 3:00 PM

Share

ಬೆಂಗಳೂರು, ಸೆಪ್ಟೆಂಬರ್​ 11: ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್​ ಧರಿಸಿ ಅಂತ ಸಂಚಾರಿ ಪೊಲೀಸರು (Traffic Police) ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದರೂ ಕೂಡ ಇನ್ನೂ ಕೆಲವರು ಹೆಲ್ಮೆಟ್​ ಧರಿಸದೆ ವಾಹನ ಚಲಾಯಿಸಿ ಜೀವಕ್ಕೆ ಕಂಟಕ ತಂದುಕೊಳ್ಳುತ್ತಾರೆ. ಇದೀಗ ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ (Public Road Safety Campaign) ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ.

“ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ” ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ​ ಜಾಗೃತಿ ಮೂಡಿಸಿದೆ. ಪೋಲೀಸ್, ಗೇಮ್ ಡೆವಲಪರ್‌ಗಳು ಮತ್ತು ಮಾಧ್ಯಮ ಕಂಪನಿ ಸ್ಚ್‌ಬಾಂಗ್ ಸಹಯೋಗದಲ್ಲಿ “ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ”ದಲ್ಲಿ “ಮಚ್ಚಾ ಹೆಲ್ಮೆಟ್​ ಡಾ” ಹುಷಾರಾಗಿ, ಜವಾಬ್ದಾರಿಯುತವಾಗಿ ವಾಹನ ಚಲಾಯಿಸಿ ಎಂಬ ಸೂಚನಾ ಫಲಕ ಇದೆ. ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮ್​ ಅನ್ನು ಹೆಚ್ಚಾಗಿ 16 ರಿಂದ 25 ವರ್ಷ ವಯಸ್ಸಿನವರು ಆಡುವುದರಿಂದ, ಇವರನ್ನು ಗುರಿಯಾಗಿಸಿಕೊಂಡು ಈ ಜಾಹಿರಾತು ನೀಡಲಾಗಿದೆ.

ಇದನ್ನೂ ಓದಿ: ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಜಾಹಿರಾತು ಪ್ರಮುಖರಾದ ರೆನ್ಸಿಲ್ಲಾ ಫೆರ್ನಾಂಡಿಸ್ ಮಾತನಾಡಿ, “ಬೆಂಗಳೂರು ಇಂಗ್ಲಿಷ್” ನಲ್ಲೇ ಜಾಹಿರಾತು ನೀಡಲಾಗಿದೆ. ಇದು, ಯುವಕರ ಗಮನ ಸೆಳೆಯುತ್ತದೆ. ಗೇಮಿಂಗ್ ಮತ್ತು ನಿಜ ಜೀವನದ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಭಾಷೆ ಬಳಸಲಾಗಿದೆ ಎಂದರು.

ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಮಾತನಾಡಿ, “ಇದು ಸಾಮಾಜಿಕ ಸೇವಾ ಸಂದೇಶವಾಗಿದೆ. ನಾವು 16-25 ವರ್ಷದ ತರುಣರನ್ನು ಗುರಿಯಾಗಿಸಿಕೊಂಡು ಆಟದೊಳಗೆ ಜಾಗೃತಿ ಮೂಡಿಸಲು ಮುಂದಾಗಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ