AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ

ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ. "ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ" ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ ಜಾಗೃತಿ ಮೂಡಿಸಿದೆ.

ಮಚ್ಚಾ ಹೆಲ್ಮೆಟ್​ ಡಾ: ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮಿಂಗ್​ನಲ್ಲಿ ಹೆಲ್ಮೆಟ್​ ಜಾಗೃತಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Sep 11, 2024 | 3:00 PM

Share

ಬೆಂಗಳೂರು, ಸೆಪ್ಟೆಂಬರ್​ 11: ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್​ ಧರಿಸಿ ಅಂತ ಸಂಚಾರಿ ಪೊಲೀಸರು (Traffic Police) ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದರೂ ಕೂಡ ಇನ್ನೂ ಕೆಲವರು ಹೆಲ್ಮೆಟ್​ ಧರಿಸದೆ ವಾಹನ ಚಲಾಯಿಸಿ ಜೀವಕ್ಕೆ ಕಂಟಕ ತಂದುಕೊಳ್ಳುತ್ತಾರೆ. ಇದೀಗ ಸಾರ್ವಜನಿಕ ರಸ್ತೆ ಸುರಕ್ಷತಾ ಅಭಿಯಾನದ (Public Road Safety Campaign) ಭಾಗವಾಗಿ ಸಂಚಾರಿ ಪೊಲೀಸ್​ ವಿಭಾಗ ವಿಭಿನ್ನವಾಗಿ ಜಾಗೃತಿ ಮೂಡಿಸಲು ಮುಂದಾಗಿದೆ.

“ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ” ಎಂಬ ಮೊಬೈಲ್​​ ಗೇಮ್​​​ನಲ್ಲಿ ಹೆಲ್ಮೆಟ್​ ಧರಿಸಿ​ ಜಾಗೃತಿ ಮೂಡಿಸಿದೆ. ಪೋಲೀಸ್, ಗೇಮ್ ಡೆವಲಪರ್‌ಗಳು ಮತ್ತು ಮಾಧ್ಯಮ ಕಂಪನಿ ಸ್ಚ್‌ಬಾಂಗ್ ಸಹಯೋಗದಲ್ಲಿ “ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ”ದಲ್ಲಿ “ಮಚ್ಚಾ ಹೆಲ್ಮೆಟ್​ ಡಾ” ಹುಷಾರಾಗಿ, ಜವಾಬ್ದಾರಿಯುತವಾಗಿ ವಾಹನ ಚಲಾಯಿಸಿ ಎಂಬ ಸೂಚನಾ ಫಲಕ ಇದೆ. ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಗೇಮ್​ ಅನ್ನು ಹೆಚ್ಚಾಗಿ 16 ರಿಂದ 25 ವರ್ಷ ವಯಸ್ಸಿನವರು ಆಡುವುದರಿಂದ, ಇವರನ್ನು ಗುರಿಯಾಗಿಸಿಕೊಂಡು ಈ ಜಾಹಿರಾತು ನೀಡಲಾಗಿದೆ.

ಇದನ್ನೂ ಓದಿ: ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಜಾಹಿರಾತು ಪ್ರಮುಖರಾದ ರೆನ್ಸಿಲ್ಲಾ ಫೆರ್ನಾಂಡಿಸ್ ಮಾತನಾಡಿ, “ಬೆಂಗಳೂರು ಇಂಗ್ಲಿಷ್” ನಲ್ಲೇ ಜಾಹಿರಾತು ನೀಡಲಾಗಿದೆ. ಇದು, ಯುವಕರ ಗಮನ ಸೆಳೆಯುತ್ತದೆ. ಗೇಮಿಂಗ್ ಮತ್ತು ನಿಜ ಜೀವನದ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಭಾಷೆ ಬಳಸಲಾಗಿದೆ ಎಂದರು.

ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಮಾತನಾಡಿ, “ಇದು ಸಾಮಾಜಿಕ ಸೇವಾ ಸಂದೇಶವಾಗಿದೆ. ನಾವು 16-25 ವರ್ಷದ ತರುಣರನ್ನು ಗುರಿಯಾಗಿಸಿಕೊಂಡು ಆಟದೊಳಗೆ ಜಾಗೃತಿ ಮೂಡಿಸಲು ಮುಂದಾಗಿದ್ದೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ