AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಕೇಸ್ ನಡುವೆಯೂ ಕೋರ್ಟ್‌ ಮೊರೆ ಹೋದ ಮಾಡಾಳ್ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್‌

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹಾಗೂ ಪುತ್ರ ಪ್ರಶಾಂತ್ ಲೋಕಾಯುಕ್ತ ಕೇಸ್ ನಡುವೆಯೂ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಲೋಕಾಯುಕ್ತ ಕೇಸ್ ನಡುವೆಯೂ ಕೋರ್ಟ್‌ ಮೊರೆ ಹೋದ ಮಾಡಾಳ್ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್‌
ಮಾಡಾಳ್ ವಿರೂಪಾಕ್ಷಪ್ಪ, ಪ್ರಶಾಂತ್‌Image Credit source: coastaldigest.com
ಗಂಗಾಧರ​ ಬ. ಸಾಬೋಜಿ
|

Updated on:Mar 04, 2023 | 6:22 PM

Share

ಬೆಂಗಳೂರು: ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ (Madalu Veerupakshappa) ಹಾಗೂ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟಿ ಕೋಟಿ ಹಣವನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸದ್ಯ ಲೋಕಾಯುಕ್ತ ಕೇಸ್ ನಡುವೆಯೂ ಮಾಡಾಳ್‌ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್‌ನಿಂದ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಜೊತೆಗೆ ಮಾಧ್ಯಮಗಳ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸದಂತೆ ನಿರ್ಬಂಧ ಹೇರುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿನ ಸಿವಿಲ್ ಕೋರ್ಟ್ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿದೆ. ಲಂಚ ಸ್ವೀಕಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷ ಸೇರಿದಂತೆ ಮತ್ತಿತರರ ವಿರುದ್ಧ ಎಫ್​ಐಆರ್ (FIR) ದಾಖಲಿಸಿದ್ದಾರೆ. ಶ್ರೇಯಸ್ ಕಶ್ಯಪ್​ ನೀಡಿದ್ದ ದೂರಿನ ಅನ್ವಯ ದಾಖಲಾದ ಎಫ್​ಐಆರ್​ನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎ1 (ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2 (2ನೇ ಆರೋಪಿ), ಕೆಎಸ್​ಡಿಎಲ್​ ಅಕೌಂಟೆಂಟ್​ ಸುರೇಂದ್ರ ಎ3, ಮಾಡಾಳ್​ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾನೆ. ಆಧಾರಿಸಿ ಈ ಎಫ್​ಐಆರ್ ದಾಖಲಿಸಲಾಗಿದೆ.

ಮಾಡಾಳ್​​ ನಿವಾಸದಲ್ಲಿ ಸಿಕ್ಕಿತು ಕೆಜಿಗಟ್ಟಲೆ ಆಭರಣ, ಲಕ್ಷ ಲಕ್ಷ ನಗದು

ಮಾಡಾಳ್ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರ ದಾಳಿ ನಿನ್ನೆ (ಮಾ.3) ಮುಕ್ತಾಯವಾಗಿದ್ದು, ಶಾಸಕರ ಮನೆಯಲ್ಲಿ ಬರೋಬ್ಬರಿ 2,800 ಗ್ರಾಂ ಚಿನ್ನಾಭರಣ, 20 ಕೆ.ಜಿ ಬೆಳ್ಳಿ ಆಭರಣಗಳು, 16.5 ಲಕ್ಷ ರೂಪಾಯಿ ನಗದು ಹಾಗೂ ಅಪಾರ ಪ್ರಮಾಣದ ಆಸ್ತಿ ದಾಖಲೆಗಳು ಪತ್ತೆಯಾಗಿವೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ಸತತ 10 ಗಂಟೆ ಕಾಲ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: KSDL: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ 800 ಕೋಟಿ ಅವ್ಯವಹಾರ ಆರೋಪ

ನಗದು, ಚಿನ್ನ, ಬೆಳ್ಳಿ, ಆಸ್ತಿ ಪತ್ರಗಳ ಪಟ್ಟಿ ಮಾಡಿ ಶಾಸಕ ಮಾಡಾಳ್ ಪತ್ನಿ ಲೀಲಾವತಿಯವರಿಂದ ಅಧಿಕಾರಿಗಳು ಸಹಿ ಪಡೆದಿದ್ದಾರೆ. ಇದಕ್ಕೂ ಮೊದಲು ಚನ್ನಗಿರಿ ತಾಲೂಕಿ‌ನ ಮಾವಿನಹೊಳೆಯಲ್ಲಿನ ಮಾಡಾಳ್ ಕುಟುಂಬದ ಕ್ರಶರ್ ಕಚೇರಿ ಹಾಗೂ ಮಾವಿನಕಟ್ಟಿ ಬಳಿಯ ಮಾಡಾಳ್ ಕುಟುಂಬದ ತೋಟದ ಮತ್ತು ಖೇಣಿ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದರು.

ಇದನ್ನೂ ಓದಿ: Lokayukta Raid: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಬಗೆದಷ್ಟು ಹಣದ ಕಂತೆಗಳು!

ಕಚ್ಚಾ ಸಾಮಾಗ್ರಿ ಖರೀದಿಸಿದ ಆರೋಪ

ಕೆಎಸ್​ಡಿಎಲ್ ನಿಯಮ ಗಾಳಿಗೆ ತೂರಿ 800 ಕೋಟಿ ರೂಪಾಯಿಗೂ ಅಧಿಕ ವೆಚ್ಚದ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಿದ ಆರೋಪ ಸಂಬಂಧ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ KSDL ನೌಕರರ ಒಕ್ಕೂಟವು ಫೆಬ್ರವರಿ 21ರಂದೇ ಲೋಕಾಯುಕ್ತ ಕಚೇರಿಗೆ ದೂರು ನೀಡಿದೆ. ಟೆಂಡರ್​ದಾರರು ಸಾಮಾಗ್ರಿ ದರ ಶೇಕಡಾ 2ರಿಂದ 3ರಷ್ಟು ಹೆಚ್ಚಳಕ್ಕೆ ಅವಕಾಶವಿದೆ, ಆದರೆ ಕಚ್ಚಾ ಸಾಮಗ್ರಿ ದರ ಶೇ.70, 83, 140ರಷ್ಟು ಹೆಚ್ಚಿಸಿದ್ದರು. ಹೀಗಿದ್ದರೂ ಕಚ್ಚಾ ಸಾಮಗ್ರಿ ದರ ಹೆಚ್ಚಳದ ಬಗ್ಗೆ ನೆಗೋಸಿಯೇಷನ್​ ಕಮಿಟಿ, ಫೈನಾನ್ಸ್ ಕಮಿಟಿ ಕ್ರಮ ವಹಿಸಿಲ್ಲವೆಂದು ಲೋಕಾಯುಕ್ತರಿಗೆ ದೂರು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:22 pm, Sat, 4 March 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು