AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಆಗಮಿಸಿದ ಮಧ್ಯಪ್ರದೇಶ ಸಿಎಂ, ರಾಜ್ಯಪಾಲರನ್ನ ಭೇಟಿಯಾಗಿ ಕುಶಲೋಪರಿ ವಿಚಾರಿಸಿದ ಮೋಹನ್ ಯಾದವ್

ಮಧ್ಯಪ್ರದೇಶ ಮುಖ್ಯಂತ್ರಿ ಡಾ. ಮೋಹನ್ ಯಾದವ್ ಇಂದು (ಆಗಸ್ಟ್​ 07) ಬೆಂಗಳೂರಿಗೆ ಆಗಮಿಸಿದ್ದು, ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ. ಪ್ರಸಕ್ತ ರಾಜ್ಯ ರಾಜಕಾರಣದ ನಡೆಯುತ್ತಿರುವ ವಿದ್ಯಮಾನಗಳ ಮಧ್ಯ ಈ ಭೇಟಿ ಕುತೂಹಲ ಮೂಡಿಸಿದೆ.

ಬೆಂಗಳೂರಿಗೆ ಆಗಮಿಸಿದ ಮಧ್ಯಪ್ರದೇಶ ಸಿಎಂ, ರಾಜ್ಯಪಾಲರನ್ನ ಭೇಟಿಯಾಗಿ ಕುಶಲೋಪರಿ ವಿಚಾರಿಸಿದ ಮೋಹನ್ ಯಾದವ್
ಕಿರಣ್​ ಹನಿಯಡ್ಕ
| Edited By: |

Updated on:Aug 07, 2024 | 9:33 PM

Share

ಬೆಂಗಳೂರು, (ಆಗಸ್ಟ್ 07): ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ನಾಳೆ (ಆಗಸ್ಟ್​ 08) ಬೆಂಗಳೂರಿನಲ್ಲಿ ಮೂರನೇ ಸಂವಾದಾತ್ಮಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ ಅವರು ಇಂದು (ಆಗಸ್ಟ್ 07) ಬೆಂಗಳೂರಿಗೆ ಆಗಮಿಸಿದ್ದು, ಮಧ್ಯಪ್ರದೇಶದಲ್ಲಿ ಹೂಡಿಕೆ, ನಾವೀನ್ಯತೆ ಮತ್ತು ಸುಸ್ಥಿರ ಅಭಿವೃದ್ಧಿ ಉತ್ತೇಜಿಸಲು ನಾಳೆ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಸರ್ಕಾರದ ದೃಷ್ಟಿಕೋನ ಮತ್ತು ನಾವೀನ್ಯತೆಗಳನ್ನು ಎತ್ತಿ ತೋರಿಸುವ ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ.

ನಾಳಿನ ಸಭೆಯಲ್ಲಿ ಸರ್ಕಾರದ ದೃಷ್ಟಿಕೋನ ಮತ್ತು ನಾವೀನ್ಯತೆಗಳನ್ನು ಎತ್ತಿ ತೋರಿಸುವ ಕೈಗಾರಿಕೋದ್ಯಮಿಗಳನ್ನು ಮಧ್ಯಪ್ರದೇಶ ಸಿಎಂ ಡಾ. ಮೋಹನ್ ಯಾದವ್ ಭೇಟಿ ಮಾಡಿ ಹೂಡಿಕೆ ಸಂಬಂಧ ಮಹತ್ವದ ಚರ್ಚೆ ಮಾಡಲಿದ್ದಾರೆ. ಇನ್ನು ಇದೇ ಸಭೆಯಲ್ಲಿ ಮಧ್ಯಪ್ರದೇಶದಲ್ಲಿ ಹೂಡಿಕೆ ಮಾಡಲು ಇಚ್ಛಿಸುವ ಕೈಗಾರಿಕೋದ್ಯಮಿಗಳೊಂದಿಗೆ ಮೋಹನ್ ಯಾದವ್ ಅವರು ಮಾತುಕತೆ ನಡೆಸಿ ವಿವಿಧ ವಲಯಗಳಲ್ಲಿ ತಿಳಿವಳಿಕೆ ಒಪ್ಪಂದಗಳಿಗೆ ಸಹಿ ಹಾಕಲಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ರಾಜ್ಯಪಾಲರ ಶೋಕಾಸ್ ನೋಟಿಸ್​ಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ

ಇನ್ನು ಮಧ್ಯಪ್ರದೇಶದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ನಾಳೆ (ಆಗಸ್ಟ್​ 08) ಮೂರನೇ ಸಂವಾದಾತ್ಮಕ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ಮಧ್ಯಪ್ರದೇಶ ಸಿಎಂ ಡಾ.ಮೋಹನ್ ಯಾದವ್, ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ. ಇಂದು(ಬುಧವಾರ) ಸಂಜೆ ರಾಜಭವನದಲ್ಲಿ ಸೌಹಾರ್ದಯುತವಾಗಿ ಗವರ್ನರ್ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.

ಇನ್ನು ಈ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ನೀಡಿರುವ ವಿಚಾರವಾಗಿ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯ ಮಧ್ಯಪ್ರದೇಶ ಸಿಎಂ ಯಾದವ್ ಅವರು ರಾಜ್ಯಪಾಲ ಗೆಹ್ಲೋಟ್ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

Published On - 9:31 pm, Wed, 7 August 24

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ