ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣ: 24 ಗಂಟೆಯೊಳಗೆ ರೌಡಿಶೀಟರ್ ಸೇರಿ 6 ಮಂದಿ ಬಂಧನ

ಬೆಂಗಳೂರಿನ ಮಡಿವಾಳ ಅಂಡರ್‌ಪಾಸ್‌ ಬಳಿ ಶನಿವಾರ ರಾತ್ರಿ ನಡೆದ ಸುಹೇಲ್ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಘಟನೆ ನಡೆದ 24 ಗಂಟೆಯೊಳಗೆ ರೌಡಿಶೀಟರ್ ಆದಿಲ್ ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಕೊಲೆ ಮಾಡಿದ ಬಳಿಕ ಬಿಡದಿಗೆ ತೆರಳಿದ್ದರು ಎನ್ನಲಾಗಿದ್ದು, ಅಲ್ಲಿಂದ ಲಾರಿ ಮೂಲಕ ಮುಂಬೈಗೆ ಪರಾರಿಯಾಗಲು ಪ್ಲಾನ್ ಮಾಡಿದ್ದರು ಎಂಬುದು ತಿಳಿದುಬಂದಿದೆ.

ಬೆಂಗಳೂರಿನ ನಡು ರಸ್ತೆಯಲ್ಲೇ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣ: 24 ಗಂಟೆಯೊಳಗೆ ರೌಡಿಶೀಟರ್ ಸೇರಿ 6 ಮಂದಿ ಬಂಧನ
ಮಡಿವಾಳ ಕೊಲೆ ಪ್ರಕರಣ: 24 ಗಂಟೆಯೊಳಗೆ ರೌಡಿಶೀಟರ್ ಸೇರಿ 6 ಮಂದಿ ಬಂಧನ
Image Credit source: tv9
Edited By:

Updated on: Aug 24, 2026 | 9:56 AM

ಬೆಂಗಳೂರು, ಆಗಸ್ಟ್ 24: ಬೆಂಗಳೂರಿನ (Bengaluru) ಮಡಿವಾಳದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ ಸುಹೇಲ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿವಾಳ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ರೌಡಿಶೀಟರ್ ಆದಿಲ್ ಸೇರಿದಂತೆ ಆರು ಮಂದಿಯನ್ನು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದ್ದು, ಹತ್ಯೆಯ ಹಿಂದಿನ ನಿಖರ ಕಾರಣ ಹಾಗೂ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ಮುಂದುವರಿದಿದೆ. ಮಡಿವಾಳ ಅಂಡರ್‌ಪಾಸ್‌ ಸಮೀಪ ಶನಿವಾರ ರಾತ್ರಿ ಸುಹೇಲ್‌ನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿತ್ತು. ಈ ಕೃತ್ಯದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಬೆನ್ನಲ್ಲೇ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು.

ಶಬ್ಬೀರ್ ಹತ್ಯೆಗೆ ಪ್ರತೀಕಾರದ ಶಂಕೆ

ಜನವರಿಯಲ್ಲಿ ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಬ್ಬೀರ್ ಎಂಬಾತನ ಹತ್ಯೆಯಾಗಿತ್ತು. ಆ ಪ್ರಕರಣದಲ್ಲಿ ಸುಹೇಲ್‌ನ ಸಹೋದರರು ಶಾಮೀಲಾಗಿದ್ದರು ಎನ್ನಲಾಗಿದ್ದು, ಶಬ್ಬೀರ್‌ನ ಆಪ್ತನಾಗಿದ್ದ ಆದಿಲ್ ಈ ವಿಚಾರದಲ್ಲಿ ಸುಹೇಲ್ ಕುಟುಂಬದ ವಿರುದ್ಧ ದ್ವೇಷ ಹೊಂದಿದ್ದ ಎನ್ನಲಾಗಿದೆ. ಶಬ್ಬೀರ್ ಹತ್ಯೆಗೆ ಪ್ರತೀಕಾರವಾಗಿ ಸುಹೇಲ್‌ನನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂಬ ಅನುವಾನ ಇದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ, ಆದಿಲ್ ಹಾಗೂ ಸುಹೇಲ್ ನಡುವೆ ಈ ಹಿಂದಿನಿಂದಲೂ ವೈಮನಸ್ಸು ಇತ್ತು ಎನ್ನಲಾಗಿದ್ದು, ಇಬ್ಬರ ಗುಂಪುಗಳ ನಡುವಿನ ಪ್ರದೇಶದ ಪ್ರಾಬಲ್ಯದ ಸಂಘರ್ಷವೂ ಪ್ರಕರಣಕ್ಕೆ ಕಾರಣವಾಗಿರಬಹುದೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಸುಹೇಲ್ ಕೂಡ ಆದಿಲ್ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತನ್ನ ಆಪ್ತರ ಬಳಿ ಹೇಳಿಕೊಂಡಿದ್ದ ಎನ್ನಲಾಗಿದೆ. ಮತ್ತೊಂದೆಡೆ, ತನ್ನನ್ನು ಗುರಿಯಾಗಿಸುವ ಮುನ್ನವೇ ಎದುರಾಳಿಯನ್ನು ಹೊಡೆಯುವ ಬಗ್ಗೆ ಆದಿಲ್ ಹೇಳಿಕೊಂಡಿದ್ದ ಎನ್ನುವ ಮಾಹಿತಿಯೂ ತನಿಖೆಯಲ್ಲಿ ಹೊರಬಂದಿದೆ.

ಮುಂಬೈಗೆ ಪರಾರಿಯಾಗಲು ಪ್ಲ್ಯಾನ್?

ಸುಹೇಲ್ ಹತ್ಯೆಯ ಬಳಿಕ ಆರೋಪಿಗಳು ಬಿಡದಿಗೆ ತೆರಳಿದ್ದರು ಎನ್ನಲಾಗಿದ್ದು, ಅಲ್ಲಿಂದ ಲಾರಿ ಮೂಲಕ ಮುಂಬೈಗೆ ಪರಾರಿಯಾಗಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ಅದಕ್ಕೂ ಮುನ್ನವೇ ಪೊಲೀಸರು ಕಾರ್ಯಾಚರಣೆ ನಡೆಸಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ನಡು ರಸ್ತೆಯಲ್ಲಿಯೆ ವ್ಯಕ್ತಿಯ ಭೀಕರ ಹತ್ಯೆ: ಪ್ರತೀಕಾರಕ್ಕಾಗಿ ನಡೀತಾ ಕೊಲೆ?

ಮಂಗಮ್ಮನಪಾಳ್ಯ ಪ್ರದೇಶದಲ್ಲಿ ಪ್ರಾಬಲ್ಯ ಸಾಧಿಸುವ ವಿಚಾರವಾಗಿ ಸುಹೇಲ್ ಮತ್ತು ಆದಿಲ್ ಗುಂಪುಗಳ ನಡುವೆ ಸಂಘರ್ಷವಿತ್ತು ಎನ್ನಲಾಗಿದ್ದು, ಹಳೆಯ ದ್ವೇಷವೂ ಕೊಲೆಗೆ ಪ್ರಮುಖ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us