AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲೊಬ್ಬ ರಾಬಿನ್ ಹುಡ್: ಉಳ್ಳವರ ಮನೆಗೆ ಕನ್ನ ಹಾಕಿ ದಾನ ಧರ್ಮ ಮಾಡುತ್ತಿದ್ದ ಕಳ್ಳನ ಬಂಧನ

ಜಾನ್ ಮೆಲ್ವಿನ್ ಎಂಬ ಬಂಧಿತ ಆರೋಪಿ ಐಷಾರಾಮಿ ಜೀವನಕ್ಕಾಗಿ ಶ್ರೀಮಂತರ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ. ಬಳಿಕ ಆಸೆ ತೀರಿ ಉಳಿದ ಹಣವನ್ನು ದಾನ ಧರ್ಮ ಮಾಡ್ತಿದ್ದ.

ಬೆಂಗಳೂರಿನಲ್ಲೊಬ್ಬ ರಾಬಿನ್ ಹುಡ್: ಉಳ್ಳವರ ಮನೆಗೆ ಕನ್ನ ಹಾಕಿ ದಾನ ಧರ್ಮ ಮಾಡುತ್ತಿದ್ದ ಕಳ್ಳನ ಬಂಧನ
ಜಾನ್ ಮೆಲ್ವಿನ್
TV9 Web
| Edited By: |

Updated on:Oct 20, 2022 | 8:21 AM

Share

ಬೆಂಗಳೂರು: ರಾಬಿನ್ ಹುಡ್ ಕಥೆಗಳಲ್ಲಿ ಬರುವಂತೆ ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳನಿದ್ದಾನೆ. ಈತ ಕಂಡವರ ಮನೆಗೆ ಕನ್ನ ಹಾಕಿ ತನ್ನ ಆಸೆಗಳನ್ನು ಪೂರೈಸಿಕೊಂಡು ಬಳಿಕ ಉಳಿದದನ್ನು ಧಾರ್ಮಿಕ ಕೇಂದ್ರಗಳಿಗೆ ದಾನ ಮಾಡ್ತಿದ್ದ. ಸದ್ಯ ಮಡಿವಾಳ ಠಾಣಾ ಪೊಲೀಸರು ಖದೀಮನನ್ನು ಬಂಧಿಸಿದ್ದಾರೆ.ಜಾನ್ ಮೆಲ್ವಿನ್ ಎಂಬ ಬಂಧಿತ ಆರೋಪಿ ಐಷಾರಾಮಿ ಜೀವನಕ್ಕಾಗಿ ಶ್ರೀಮಂತರ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ. ಬಳಿಕ ಆಸೆ ತೀರಿ ಉಳಿದ ಹಣವನ್ನು ದಾನ ಧರ್ಮ ಮಾಡ್ತಿದ್ದ.

ಚರ್ಚ್, ದೇವಾಲಯಗಳ ಹುಂಡಿಗೆ ಹಣ ಹಾಕುವುದು ಹಾಗೂ ದಾನ ಮಾಡುವ ಕಾಯಕ ಮಾಡುತ್ತಿದ್ದ. ನೋಡಿದವರು ಆತ ದಾನ-ಧರ್ಮದ ವ್ಯಕ್ತಿ. ನೂವು ವರ್ಷ ಚನ್ನಾಗಿ ಬಾಳಲಿ ಎಂದು ಹಾರೈಸುತ್ತಿದ್ದರು. ಆದ್ರೆ ಈತ ಕಂಡವರ ದುಡ್ಡಿನಿಂದಲೇ ಶೋಕಿ ಜೀವನ ನಡೆಸುತ್ತಿದ್ದ. ಆದ್ರೆ ಈಗ ಬರೋಬ್ಬರಿ ಐವತ್ತಕ್ಕೂ ಅಧಿಕ‌ ಪ್ರಕರಣಗಳ ಆರೋಪಿ ಜಾನ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಡಿವಾಳ ಠಾಣಾ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಬೆಂಗಳೂರಲ್ಲಿ ಭಾರೀ ಮಳೆ: ಮೆಟ್ರೋ ತಡೆಗೋಡೆ ಕುಸಿತ, 6 ಕಾರು, 2 ಬೈಕ್ ಜಖಂ

ಪೀಣ್ಯಾ, ವಿಜಯನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ ಸೇರಿದಂತೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಆರೋಪಿ ಜಾನ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಜಾನ್ ಕದ್ದ ಸ್ವಲ್ಪ ಹಣದಲ್ಲಿ ಐಷಾರಾಮಿ ಜೀವನ, ಮೋಜು ಮಸ್ತಿ ಮಾಡುತ್ತಿದ್ದ. ಇನ್ನುಳಿದ ಹಣವನ್ನ ದಾನ ಮಾಡಿ ಕಳೆಯುತ್ತಿದ್ದ. ನಗರದ ಅತೀ ಹಳೆಯ ಮನೆಗಳ್ಳರಲ್ಲಿ ಮೆಲ್ವಿನ್ ಕೂಡಾ ಒಬ್ಬ. ಪ್ರತೀ ಬಾರಿ‌ ಬಂಧನವದಾಗಲೂ 10-15 ದಿನಗಳಲ್ಲೇ ಜಾಮೀನು ಪಡೆಯುತ್ತಿದ್ದ.

ದೊಣ್ಣೆಯಿಂದ ಹೊಡೆದು ಪತಿಯನ್ನು ಹತ್ಯೆಗೈದ ಪತ್ನಿ

ಹಾಸನ‌ ಜಿಲ್ಲೆ ಅರಕಲಗೂಡು ತಾಲೂಕಿನ ನೇರಲಹಳ್ಳಿಯಲ್ಲಿ ಪತಿ ಕೃಷ್ಣೇಗೌಡ(50) ಬರ್ಬರ ಹತ್ಯೆಯಾಗಿದೆ. ಪತಿ ಕೃಷ್ಣೇಗೌಡನನ್ನು ಪತ್ನಿ ಲೀಲಾವತಿ ಕೊಲೆ ಮಾಡಿದ್ದಾರೆ. ನಿತ್ಯ ಕುಡಿದು ಬಂದು ಹಲ್ಲೆ ನಡೆಸುತ್ತಿದ್ದ ಪತಿ ಕೃಷ್ಣೇಗೌಡ, ಸೋಮವಾರ ರಾತ್ರಿಯೂ ಗಲಾಟೆ ತೆಗೆದಿದ್ದ. ಈ ವೇಳೆ ದೊಣ್ಣೆಯಿಂದ ಹೊಡೆದು ಪತಿಯ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಿ ಮನೆ ಹಿಂದೆ ಗುಂಡಿ ತೆಗೆದು ಶವ ಹೂತಿದ್ದಾರೆ. ಬಳಿಕ ಘಟನೆಯೇ ನಡೆದಿಲ್ಲ ಎಂಬಂತೆ ಸುಮ್ಮನಾಗಿದ್ದಾರೆ.

ಮನೆಯಲ್ಲಿ ಲೀಲಾವತಿ ಒಬ್ಬರೇ ಇದ್ದಾರೆ, ಕೃಷ್ಣೇಗೌಡನಿಲ್ಲ ಎಂಬ ಬಗ್ಗೆ ಗ್ರಾಮಸ್ಥರಿಗೆ ಅನುಮಾನ ಹೆಚ್ಚಾಗಿ ಕೃಷ್ಣೇಗೌಡ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಜನರ ಅನುಮಾನದ ಮೇಲೆ ಪೊಲೀಸರು ಲೀಲಾವತಿಯನ್ನು ಕರೆತಂದು ವಿಚಾರಣೆ ಮಾಡಿದಾಗ ಹತ್ಯೆ ಮಾಡಿರುವ ಸತ್ಯ ಬಯಲಾಗಿದೆ. ಮಹಿಳೆಯನ್ನು ವಶಕ್ಕೆ ಪಡೆದಿರುವ ಪೊಲೀಸರು ಇಂದು ಮೃತದೇಹ ಹೊರ ತೆಗೆಸಿ ಮರಣೋತ್ತರ ಪರೀಕ್ಷೆಗೆ ರವಾನಿಸಲಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:29 am, Thu, 20 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ