AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲೊಬ್ಬ ರಾಬಿನ್ ಹುಡ್: ಉಳ್ಳವರ ಮನೆಗೆ ಕನ್ನ ಹಾಕಿ ದಾನ ಧರ್ಮ ಮಾಡುತ್ತಿದ್ದ ಕಳ್ಳನ ಬಂಧನ

ಜಾನ್ ಮೆಲ್ವಿನ್ ಎಂಬ ಬಂಧಿತ ಆರೋಪಿ ಐಷಾರಾಮಿ ಜೀವನಕ್ಕಾಗಿ ಶ್ರೀಮಂತರ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ. ಬಳಿಕ ಆಸೆ ತೀರಿ ಉಳಿದ ಹಣವನ್ನು ದಾನ ಧರ್ಮ ಮಾಡ್ತಿದ್ದ.

ಬೆಂಗಳೂರಿನಲ್ಲೊಬ್ಬ ರಾಬಿನ್ ಹುಡ್: ಉಳ್ಳವರ ಮನೆಗೆ ಕನ್ನ ಹಾಕಿ ದಾನ ಧರ್ಮ ಮಾಡುತ್ತಿದ್ದ ಕಳ್ಳನ ಬಂಧನ
ಜಾನ್ ಮೆಲ್ವಿನ್
Follow us
TV9 Web
| Updated By: ಆಯೇಷಾ ಬಾನು

Updated on:Oct 20, 2022 | 8:21 AM

ಬೆಂಗಳೂರು: ರಾಬಿನ್ ಹುಡ್ ಕಥೆಗಳಲ್ಲಿ ಬರುವಂತೆ ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳನಿದ್ದಾನೆ. ಈತ ಕಂಡವರ ಮನೆಗೆ ಕನ್ನ ಹಾಕಿ ತನ್ನ ಆಸೆಗಳನ್ನು ಪೂರೈಸಿಕೊಂಡು ಬಳಿಕ ಉಳಿದದನ್ನು ಧಾರ್ಮಿಕ ಕೇಂದ್ರಗಳಿಗೆ ದಾನ ಮಾಡ್ತಿದ್ದ. ಸದ್ಯ ಮಡಿವಾಳ ಠಾಣಾ ಪೊಲೀಸರು ಖದೀಮನನ್ನು ಬಂಧಿಸಿದ್ದಾರೆ.ಜಾನ್ ಮೆಲ್ವಿನ್ ಎಂಬ ಬಂಧಿತ ಆರೋಪಿ ಐಷಾರಾಮಿ ಜೀವನಕ್ಕಾಗಿ ಶ್ರೀಮಂತರ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ. ಬಳಿಕ ಆಸೆ ತೀರಿ ಉಳಿದ ಹಣವನ್ನು ದಾನ ಧರ್ಮ ಮಾಡ್ತಿದ್ದ.

ಚರ್ಚ್, ದೇವಾಲಯಗಳ ಹುಂಡಿಗೆ ಹಣ ಹಾಕುವುದು ಹಾಗೂ ದಾನ ಮಾಡುವ ಕಾಯಕ ಮಾಡುತ್ತಿದ್ದ. ನೋಡಿದವರು ಆತ ದಾನ-ಧರ್ಮದ ವ್ಯಕ್ತಿ. ನೂವು ವರ್ಷ ಚನ್ನಾಗಿ ಬಾಳಲಿ ಎಂದು ಹಾರೈಸುತ್ತಿದ್ದರು. ಆದ್ರೆ ಈತ ಕಂಡವರ ದುಡ್ಡಿನಿಂದಲೇ ಶೋಕಿ ಜೀವನ ನಡೆಸುತ್ತಿದ್ದ. ಆದ್ರೆ ಈಗ ಬರೋಬ್ಬರಿ ಐವತ್ತಕ್ಕೂ ಅಧಿಕ‌ ಪ್ರಕರಣಗಳ ಆರೋಪಿ ಜಾನ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಡಿವಾಳ ಠಾಣಾ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ:  ಬೆಂಗಳೂರಲ್ಲಿ ಭಾರೀ ಮಳೆ: ಮೆಟ್ರೋ ತಡೆಗೋಡೆ ಕುಸಿತ, 6 ಕಾರು, 2 ಬೈಕ್ ಜಖಂ

ಪೀಣ್ಯಾ, ವಿಜಯನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ ಸೇರಿದಂತೆ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಆರೋಪಿ ಜಾನ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಜಾನ್ ಕದ್ದ ಸ್ವಲ್ಪ ಹಣದಲ್ಲಿ ಐಷಾರಾಮಿ ಜೀವನ, ಮೋಜು ಮಸ್ತಿ ಮಾಡುತ್ತಿದ್ದ. ಇನ್ನುಳಿದ ಹಣವನ್ನ ದಾನ ಮಾಡಿ ಕಳೆಯುತ್ತಿದ್ದ. ನಗರದ ಅತೀ ಹಳೆಯ ಮನೆಗಳ್ಳರಲ್ಲಿ ಮೆಲ್ವಿನ್ ಕೂಡಾ ಒಬ್ಬ. ಪ್ರತೀ ಬಾರಿ‌ ಬಂಧನವದಾಗಲೂ 10-15 ದಿನಗಳಲ್ಲೇ ಜಾಮೀನು ಪಡೆಯುತ್ತಿದ್ದ.

ದೊಣ್ಣೆಯಿಂದ ಹೊಡೆದು ಪತಿಯನ್ನು ಹತ್ಯೆಗೈದ ಪತ್ನಿ

ಹಾಸನ‌ ಜಿಲ್ಲೆ ಅರಕಲಗೂಡು ತಾಲೂಕಿನ ನೇರಲಹಳ್ಳಿಯಲ್ಲಿ ಪತಿ ಕೃಷ್ಣೇಗೌಡ(50) ಬರ್ಬರ ಹತ್ಯೆಯಾಗಿದೆ. ಪತಿ ಕೃಷ್ಣೇಗೌಡನನ್ನು ಪತ್ನಿ ಲೀಲಾವತಿ ಕೊಲೆ ಮಾಡಿದ್ದಾರೆ. ನಿತ್ಯ ಕುಡಿದು ಬಂದು ಹಲ್ಲೆ ನಡೆಸುತ್ತಿದ್ದ ಪತಿ ಕೃಷ್ಣೇಗೌಡ, ಸೋಮವಾರ ರಾತ್ರಿಯೂ ಗಲಾಟೆ ತೆಗೆದಿದ್ದ. ಈ ವೇಳೆ ದೊಣ್ಣೆಯಿಂದ ಹೊಡೆದು ಪತಿಯ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಿ ಮನೆ ಹಿಂದೆ ಗುಂಡಿ ತೆಗೆದು ಶವ ಹೂತಿದ್ದಾರೆ. ಬಳಿಕ ಘಟನೆಯೇ ನಡೆದಿಲ್ಲ ಎಂಬಂತೆ ಸುಮ್ಮನಾಗಿದ್ದಾರೆ.

ಮನೆಯಲ್ಲಿ ಲೀಲಾವತಿ ಒಬ್ಬರೇ ಇದ್ದಾರೆ, ಕೃಷ್ಣೇಗೌಡನಿಲ್ಲ ಎಂಬ ಬಗ್ಗೆ ಗ್ರಾಮಸ್ಥರಿಗೆ ಅನುಮಾನ ಹೆಚ್ಚಾಗಿ ಕೃಷ್ಣೇಗೌಡ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಜನರ ಅನುಮಾನದ ಮೇಲೆ ಪೊಲೀಸರು ಲೀಲಾವತಿಯನ್ನು ಕರೆತಂದು ವಿಚಾರಣೆ ಮಾಡಿದಾಗ ಹತ್ಯೆ ಮಾಡಿರುವ ಸತ್ಯ ಬಯಲಾಗಿದೆ. ಮಹಿಳೆಯನ್ನು ವಶಕ್ಕೆ ಪಡೆದಿರುವ ಪೊಲೀಸರು ಇಂದು ಮೃತದೇಹ ಹೊರ ತೆಗೆಸಿ ಮರಣೋತ್ತರ ಪರೀಕ್ಷೆಗೆ ರವಾನಿಸಲಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:29 am, Thu, 20 October 22

Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??