AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿಗೆ ಹೋಗಿ ಬಂದರೂ ಬಿಡದ ಚಾಳಿ, ಟಿಪ್ ಟಾಪ್ ಆಗಿ ಮದ್ವೆ ಮನೆಗೆ ಹೋಗಿ ಏನ್​ ಮಾಡ್ತಿದ್ದ ಗೊತ್ತಾ?

ಮದುವೆ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಫ್ ಆಗಿದ್ದ ಕಳ್ಳನನ್ನು ಇದೀಗ ಮಾಗಡಿ ರಸ್ತೆ ಪೊಲೀಸರು(Magadi Road Police)ಬಂಧಿಸಿದ್ದಾರೆ. ಆತನಿಂದ 1.80 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.

ಜೈಲಿಗೆ ಹೋಗಿ ಬಂದರೂ ಬಿಡದ ಚಾಳಿ, ಟಿಪ್ ಟಾಪ್ ಆಗಿ ಮದ್ವೆ ಮನೆಗೆ ಹೋಗಿ ಏನ್​ ಮಾಡ್ತಿದ್ದ ಗೊತ್ತಾ?
ಬಂಧಿತ ಅರೋಪಿ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 24, 2024 | 5:09 PM

Share

ಬೆಂಗಳೂರು, ಜ.24: ಮದುವೆ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಫ್ ಆಗಿದ್ದ ಕಳ್ಳನನ್ನು ಇದೀಗ ಮಾಗಡಿ ರಸ್ತೆ ಪೊಲೀಸರು(Magadi Road Police)ಬಂಧಿಸಿದ್ದಾರೆ. ನಿಖಿಲ್​ ಬಂಧಿತ ಆರೋಪಿ. ಆತನಿಂದ 1.80 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚಿಗಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಂದಿದ್ದ ಆಸಾಮಿ, ತನ್ನ ಚಾಳಿ ಬಿಡದೇ ಮುಂದುವರೆಸಿದ್ದ. ಅದರಂತೆ ಮದುವೆ ಮನೆಗೆ ಟಿಪ್ ಟಾಪ್ ಆಗಿ, ಯಾರಿಗೂ ಅನುಮಾನ ಬಾರದಂತೆ ಬೆಲೆ ಬಾಳುವ ಉಡುಗೆ ಜೊತೆಗೆ ನಗು ನಗುತ್ತಲೇ ಎಂಟ್ರಿ ಕೊಡುತ್ತಿದ್ದ.

ವಿಶ್ ಮಾಡುವ ನೆಪದಲ್ಲಿ ವಧು ಅಥವಾ ವರರ ರೂಮ್​ಗೆ ಎಂಟ್ರಿ

ಮದುವೆ ಮನೆಯಲ್ಲಿ ವಧು ಅಥವಾ ವರನ ಕಡೆಯವರು ಎಂದು ಹೇಳಿಕೊಂಡು ವಧು-ವರರ ಡ್ರೆಸಿಂಗ್ ರೂಮ್​ಗೆ ಎಂಟ್ರಿ ಕೊಡುತ್ತಿದ್ದ. ಬಳಿಕ ಎಲ್ಲರೂ ಮದುವೆ ಬ್ಯುಸಿಯಲ್ಲಿ ಇರುವುದನ್ನ ಗಮನಿಸಿ ಕಳ್ಳತನ ಮಾಡುತ್ತಿದ್ದ. ಅದರಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಫ್ ಆಗಿದ್ದ ಕುರಿತು ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ತನಿಖೆ ನಡೆಸಿ ಆರೋಪಿಯನ್ನು ಮಾಲು ಸಹಿತ ಬಂಧಿಸಿದ್ದಾರೆ.

ಇದನ್ನೂ ಓದಿ:Viral Video: ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಖತರ್ನಾಕ್ ಕಳ್ಳನಿಗೆ ಪ್ರಯಾಣಿಕರು ನೀಡಿದ ಶಿಕ್ಷೆ ಏನು ಗೊತ್ತಾ?

ಕುರಿ ಸಂತೆಯಲ್ಲಿ ಕಳ್ಳತನಕ್ಕೆ ಯತ್ನ; ಖದೀಮರನ್ನ ಬಟ್ಟೆ‌ ಬಿಚ್ಚಿ ಥಳಿಸಿದ ಸ್ಥಳೀಯರು

ಕೋಲಾರ: ಕುರಿ ಸಂತೆಯಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸಿದ ಇಬ್ಬರು ಕುರಿ ಕಳ್ಳರನ್ನು ಸ್ಥಳೀಯರೇ ಹಿಡಿದು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ರೋಜರಪಲ್ಲಿ ಕ್ರಾಸ್ ಬಳಿ ನಡೆದಿದೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂದು ಕುರಿ ಸಂತೆಯಲ್ಲಿ ಕುರಿ ಕಳ್ಳತನಕ್ಕೆ ಯತ್ನಿಸುವ ವೇಳೆ ಬೆಂಗಳೂರು ಮೂಲದ ಮುಜಾಮಿಲ್ ಹಾಗೂ ಶಬ್ಬೀರ್ ಸಿಕ್ಕಿಬಿದ್ದಿದ್ದರು. ಇದೀಗ ಕಳ್ಳರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ