Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲುಲು ಮಾಲ್​ನಲ್ಲಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವ್ಯಕ್ತಿಯ ಗುರುತು ಪತ್ತೆ

ಬೆಂಗಳೂರಿನ ಲುಲು ಮಾಲ್​​ನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಇದೀಗ ವಿಡಿಯೋ ಆಧರಿಸಿ ಪೊಲೀಸರು ಆ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ.

ಲುಲು ಮಾಲ್​ನಲ್ಲಿ ಯುವತಿಯೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದ ವ್ಯಕ್ತಿಯ ಗುರುತು ಪತ್ತೆ
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on: Nov 01, 2023 | 10:36 AM

ಬೆಂಗಳೂರು, (ನವೆಂಬರ್ 01): ಬೆಂಗಳೂರಿನ ಲುಲು ಮಾಲ್​​ನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಇದೀಗ ವಿಡಿಯೋ ಆಧರಿಸಿ ಪೊಲೀಸರು ಆ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದಾರೆ. ಹೌದು…ಮೊನ್ನೇ ಲುಲು ಮಾಲ್​ನಲ್ಲಿ ಯುವತಿಗೆ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಅಸಹ್ಯವಾಗಿ ವರ್ತಿಸಿದ್ದ ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (6೦) ಎಂದು ಗುರುತು ಪತ್ತೆಯಾಗಿದೆ. ಆದ್ರೆ, ಅಶ್ವಥ್ ನಾರಾಯಣ್ ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾನೆ.

ಆರೋಪಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ನಿವೃತ್ತನಾಗಿದ್ದಾನೆ ಎಂದು ತಿಳಿದುಬಂದಿದೆ. ಕಳೆದ ಎಂಟು ತಿಂಗಳ ಹಿಂದೆ ನಿವೃತ್ತನಾಗಿದ್ದ ಅಶ್ವಥ್ ನಾರಾಯಣ್, ಸದ್ಯ ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಮಾಗಡಿ ರೋಡ್ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಲುಲು ಮಾಲ್‌ನಲ್ಲಿ ಯುವತಿ ಜತೆ ಅಶ್ಲೀಲ ವರ್ತನೆ: ವ್ಯಕ್ತಿ ವಿರುದ್ಧ ದೂರು ದಾಖಲು

ಮೂರು ದಿನಗಳ ಹಿಂದೆ ಲುಲು ಮಾಲ್ ನಲ್ಲಿ ಯವತಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಅಸಹ್ಯವಾಗಿ ಆಕೆಯ ದೇಹವನ್ನು ಮುಟ್ಟಿದ್ದ. ಇದನ್ನು ಯಶವಂತ್‌ ಎನ್ನುವಾತ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ. ಈ ವಿಡಿಯೋ ಆಧಾರದ ಮೇಲೆ ಲುಲು ಮಾಲ್​ ಆಡಳಿತ ಮಂಡಲಿ ಮಾಗಡಿ ರೋಡ್ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಈ ದೂರಿನ ಆಧಾರದ ಮೇಲೆ ಪೊಲೀಸರು, ಕಾರ್ಯಚರಣೆ ನಡೆಸಿ ಆರೋಪಿಯ ಗುರುತು ಪತ್ತೆ ಮಾಡಿದ್ದಾರೆ. ಆದ್ರೆ, ಆರೋಪಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮನಗೆ ಬೀಗ ಹಾಕಿ ಪರಾರಿಯಾಗಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು