AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ದೇಹ ಹೊರಕ್ಕೆ: ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭ

Namma Metro : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಬರುವಾಗ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಪರ್ಪಲ್​ ಲೈನ್​ನ  ಮಾಗಡಿ ರಸ್ತೆಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಸಂಚಾರ ಪುನಾರಂಭವಾಗಿದೆ.

ಮೃತ ದೇಹ ಹೊರಕ್ಕೆ: ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭ
ನಮ್ಮ ಮೆಟ್ರೋ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 21, 2024 | 4:33 PM

ಬೆಂಗಳೂರು, (ಮಾರ್ಚ್ 21): ನಮ್ಮ ಮೆಟ್ರೋ (Namma Metro) ರೈಲಿನ ಟ್ರ್ಯಾಕ್‌ಗೆ ಜಿಗಿದು ಯುವಕನೋರ್ವ ಆತ್ಮಹತ್ಯೆ (Self harming) ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಂದು (ಮಾರ್ಚ್ .21) ಮಧ್ಯಾಹ್ನ 2:10ರ ಸುಮಾರಿಗೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ (Athiguppe Metro) ರೈಲು ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಪರಿಣಾಮ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಸುಮಾರು ಎಂಟು ಅಡಿ ದೂರದಲ್ಲಿ ಯುವಕನ ದೇಹವನ್ನು ರೈಲು ಎಳೆದೊಯ್ದಿದೆ. ಇದರಿಂದ ಯುವಕನ ದೇಹ ಎರಡು ತುಂಡಾಗಿದೆ. ಮುಂಬೈ ಮೂಲದ ಧ್ರುವ್ ಟಕ್ಕರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಪರ್ಪಲ್​ ಲೈನ್​ನ  ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭವಾಗಿದೆ.

ಸ್ಥಗಿತಗೊಂಡಿದ್ದ ಮೆಟ್ರೋ ಪುನಾರಂಭ

ಪ್ರಕರಣ ಸಂಬಂಧ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿತ್ತು. ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇತ್ತು. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದರು. ಇನ್ನು ವಿಷಯ ತಿಳಿಯದ ಪ್ರಯಾಣಿಕರು ಅತ್ತಿಗುಪ್ಪೆ  ಮೆಟ್ರೋ ನಿಲ್ದಾಣಕ್ಕೆ ಬರುತ್ತಿದ್ದು, ಅಂತವರನ್ನು ಮೆಟ್ರೋ ಸಿಬ್ಬಂದಿ ಬಸ್​ ಮೂಲಕ ತೆರಳುವಂತೆ ಹೇಳಿ ಕಳುಹಿಸುತ್ತಿದ್ದರು. ಇದೀಗ ಮೃತ ದೇಹವನ್ನು ಹಳಿಯಿಂದ ಹೊರ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಸ್ಥಗಿತಗೊಂಡಿದ್ದ ಮಾಗಡಿ ರಸ್ತೆ TO ಚಲ್ಲಘಟ್ಟ ಮೆಟ್ರೋ ಸಂಚಾರ ಪುನಾರಂಭವಾಗಿದೆ.

ಇದನ್ನೂ ಓದಿ: ಬೆಂಗಳೂರು: ಮೆಟ್ರೋ ಬರುವಾಗ ಹಳಿಗೆ ಹಾರಿ ಯುವಕ ಆತ್ಮಹತ್ಯೆ; ರೈಲು ಸಂಚಾರ ಸ್ಥಗಿತ

ಈ ರೀತಿ ಮೆಟ್ರೋ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವುದು ಇದೇ ಮೊದಲ ಪ್ರಕರಣವಾಗಿದೆ. ಈ ಹಿಂದೆ ಹಳಿ ಮೇಲೆ ಜಿಗಿದ ಪ್ರಕರಣಗಳು ನಡೆದಿದ್ದವು. ಆದ್ರೆ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ,

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ