AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಕಾನ್ಸ್​ಟೇಬಲ್​ಗಳ ಅಮಾನತು

ಕರ್ತವ್ಯದ ವೇಳೆ ಮಲಗಿದ್ದ ಮಹದೇವಪುರ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್​ಟೇಬಲ್​ಗಳನ್ನು ಅಮಾನತುಗೊಳಿಸಿ ವೈಟ್​​ಫೀಲ್ಡ್​ ಡಿಸಿಪಿ ಎಸ್​.ಗಿರೀಶ್ ಆದೇಶ ಹೊರಡಿಸಿದ್ದಾರೆ.

Bengaluru News: ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಕಾನ್ಸ್​ಟೇಬಲ್​ಗಳ ಅಮಾನತು
ಮಹದೇವಪುರ ಪೊಲೀಸ್ ಠಾಣೆ
Follow us
TV9 Web
| Updated By: ಆಯೇಷಾ ಬಾನು

Updated on: Jul 12, 2023 | 7:41 AM

ಬೆಂಗಳೂರು: ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಕಾನ್ಸ್​ಟೇಬಲ್​ಗಳ ಅಮಾನತುಗೊಳಿಸಿ(Constables Suspend) ವೈಟ್​​ಫೀಲ್ಡ್​ ಡಿಸಿಪಿ ಎಸ್​.ಗಿರೀಶ್ ಆದೇಶ ಹೊರಡಿಸಿದ್ದಾರೆ. ಮಹದೇವಪುರ ಪೊಲೀಸ್ ಠಾಣೆ ಕಾನ್ಸ್​ಟೇಬಲ್ ಈರಪ್ಪ ಉಂಡು, ಹೆಡ್​ ಕಾನ್ಸ್​ಟೇಬಲ್​ ಎ.ಎನ್.ಜಯರಾಮ್ ಅಮಾನತುಗೊಂಡವರು(Mahadevapura Police Station). ಡಿಸಿಪಿ ಗಸ್ತು ವೇಳೆ ನಿದ್ರೆಯಲ್ಲಿದ್ದ ಮಹದೇವಪುರ ಠಾಣೆಯ ಇಬ್ಬರು ಪೇದೆಗಳನ್ನು ಅಮಾನತು ಮಾಡಲಾಗಿದೆ.

ಕಾನ್ಸ್​ಟೇಬಲ್ ಈರಪ್ಪ ಉಂಡು, ಹೆಡ್​ ಕಾನ್ಸ್​ಟೇಬಲ್​ ಎ.ಎನ್.ಜಯರಾಮ್ ರಾತ್ರಿ ಪಾಳಿಯಲ್ಲಿದ್ದರು. ಕರ್ತವ್ಯದ ವೇಳೆ ಕಣ್ಣಿಗೆ ನಿದ್ರೆ ತಾಕಿ ನಿದ್ದೆ ಮಾಡಿದ್ದಾರೆ. ಇದೇ ವೇಳೆ ರಾತ್ರಿ ಗಸ್ತಿನಲ್ಲಿದ್ದ ಸಿಎಆರ್ ಡಿಸಿಪಿ ಠಾಣೆಗೆ ಭೇಟಿ ನೀಡಿದ್ದಾರೆ. ಆಗ ಇಬ್ಬರು ಪೇದೆಗಳು ನಿದ್ರಿಸುತ್ತಿರುವುದನ್ನು ಕಂಡು ವೈಟ್​​​ಫೀಲ್ಡ್​​​ ಡಿಸಿಪಿಗೆ ವರದಿ ನೀಡಿದ್ದಾರೆ. ನಗರ ಸಶಸ್ತ್ರ ಪಡೆ ಡಿಸಿಪಿ ವರದಿ ಆಧರಿಸಿ ಕಾನ್ಸ್​ಟೇಬಲ್​ಗಳ ಅಮಾನತುಗೊಳಿಸಿ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಅಣ್ಣನ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 30 ವರ್ಷ ಜೈಲು

ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಚಾಕು ತೋರಿಸಿ ಸುಲಿಗೆ ಮಾಡ್ತಿದ್ದ, ಬೈಕ್ ನಲ್ಲಿ ಬರ್ತಾ ಮೊಬೈಲ್ ಚಿನ್ನದ ಸರ ಕ್ಷಣಮಾತ್ರದಲ್ಲಿ ಎಗರಿಸಿಬಿಡ್ತಿದ್ದ ಯಾಸರ್ ಅಲಿಯಾಸ್ ಘೋರ್ ಎಂಬ ಖದೀಮನ ಮೇಲೆ ಪೊಲೀಸ್ ತುಪಾಕಿ ಘರ್ಜಿಸಿದೆ.

ಬೆಳಗ್ಗೆ 3 ಗಂಟೆಗೆ ಎದ್ದು ಡ್ರಗ್ಸ್ ತಗೊಂಡು ಫೀಲ್ಡಿಗೆ ಇಳಿದ್ರೆ ಮುಗೀತು. ಸಂಜೆ 6 ಗಂಟೆವರೆಗು ರಾಬರಿ ಮಾಡ್ತಿದ್ದ. ಒಂದು ವೇಳೆ ಹಣ ಕೊಡಲಿಲ್ಲ ಅಂದರೆ ಚಾಕು ತೋರಿಸಿ ಹೆದರಿಸ್ತಿದ್ದ. ಹೀಗೆ ಇತ್ತೀಚೆಗೆ ವೈಯಾಲಿಕಾವಲ್ ನಲ್ಲಿ ನಡೆದುಕೊಂಡು ಹೋಗ್ತಿದ್ದ ಮಹಿಳೆಯ ಮೊಬೈಲ್ ಫೋನ್ ಎಗರಿಸಿದ್ದ. ಇಷ್ಟೇ ಅಲ್ಲ ಹಾಲಿನ ವ್ಯಾಪಾರಿಗೆ ಚಾಕು ತೋರಿಸಿ 13 ಸಾವಿರ ಹಣ ಸುಲಿಗೆ ಮಾಡಿದ್ದ. ಹೀಗೆ ವಿವಿಧ ಠಾಣೆಗಳಲ್ಲಿ ಮೊಬೈಲ್ ಕಳ್ಳತನ, ರಾಬರಿ, ಸುಲಿಗೆನಂತಹ 6 ಕ್ಕೂ ಹೆಚ್ಚು ಪ್ರಕರಣಗಳು ಇವನ ಮೇಲೆ ದಾಖಲಾಗಿದ್ವು. ಯಾವಾಗ ಈತನ ಉಪಟಳ‌ ಹೆಚ್ಚಾಯ್ತೋ ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಆರೋಪಿ ಪತ್ತೆಗೆ ವಿಶೇಷ ತಂಡವೊಂದನ್ನ ರಚನೆ ಮಾಡಿದ್ರು. ಹೀಗೆ ಆರೋಪಿ ಯಾಸರ್ ಬೇಟೆಗೆ ಮುಂದಾಗಿದ್ದ ಶೇಷಾದ್ರಿ ಪುರಂ ಪೊಲೀಸರಿಗೆ ಕಾನೂನು ಸಂಘರ್ಷಕ್ಕೆ ಒಳಗಾಗಿದ್ದ ಆತನ ಸಹಚರ ಪತ್ತೆಯಾಗಿದ್ದ.

ಆತನ ಮಾಹಿತಿ ಮೇರೆಗೆ ಯಾಸರ್ ಅರಮನೆ ಮೈದಾನದಲ್ಲಿ ಅಡಗಿದ್ದಾನೆ ಅನ್ನೋದು ಗೊತ್ತಾಗಿತ್ತು. ಅಷ್ಟೇ ಅಲ್ಲ ಫೀಲ್ಡಿಗೆ ಇಳಿದು ರಾಬರಿಗೆ ತಯಾರಾಗಿದ್ದ. ಅಷ್ಟೊತ್ತಿಗೆ ಪೊಲೀಸರು ಆರೋಪಿಯನ್ನ ಸುತ್ತುವರೆದಿದ್ದರು. ಅಲ್ಲೂ ಬಾಲ ಬಿಚ್ಚಿದ ಆಸಾಮಿ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ‌ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಶೇಷಾದ್ರಿ ಪುರಂ ಠಾಣೆ ಇನ್ಸ್ ಪೆಕ್ಟರ್ ಹೇಮಂತ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ಕೊಟ್ರು ಮಾತು ಕೇಳದಿದ್ದಾಗ ಬಲಗಾಲಿಗೆ ಗುಂಡು ಹಾರಿಸಿ ಆರೋಪಿಯನ್ನ ಬಂಧಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್