AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಪೊಲೀಸ್ ಇಲಾಖೆಯ ಸಬ್​ ಡಿವಿಷನ್​ನಲ್ಲಿ ಮಹತ್ವದ ಬದಲಾವಣೆ; ಠಾಣೆಗಳನ್ನು ಹೆಚ್ಚಿಸಿ ಸರ್ಕಾರ ಆದೇಶ

ಪಶ್ಚಿಮ ಸಂಚಾರ ಉಪವಿಭಾಗದ ಜತೆಗೆ ವಿಜಯನಗರ ಉಪವಿಭಾಗ ಸೇರ್ಪಡೆ ಮಾಡಲಾಗಿದೆ. ಬೆಂಗಳೂರು ಪೂರ್ವ ವಿಭಾಗದ ಆಗ್ನೇಯ ಸಬ್​ಡಿವಿಷನ್​ ಕೂಡ ವಿಂಗಡಣೆ ಮಾಡಲಾಗಿದೆ.

ರಾಜ್ಯ ಪೊಲೀಸ್ ಇಲಾಖೆಯ ಸಬ್​ ಡಿವಿಷನ್​ನಲ್ಲಿ ಮಹತ್ವದ ಬದಲಾವಣೆ; ಠಾಣೆಗಳನ್ನು ಹೆಚ್ಚಿಸಿ ಸರ್ಕಾರ ಆದೇಶ
ಕರ್ನಾಟಕ ರಾಜ್ಯ ಪೊಲೀಸ್​
TV9 Web
| Edited By: ಆಯೇಷಾ ಬಾನು|

Updated on:Dec 27, 2022 | 7:07 AM

Share

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್​ ಡಿವಿಷನ್​ನಲ್ಲಿ(State Police Department Sub Division) ಮಹತ್ವದ ಬದಲಾವಣೆ ಮಾಡಲಾಗಿದೆ. ಸಂಚಾರ, ಕಾನೂನು ಸುವ್ಯವಸ್ಥೆ ಠಾಣೆಗಳ ಸಬ್ ಡಿವಿಷನ್​ಗಳನ್ನು ಹೆಚ್ಚಳ ಮಾಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕರು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಸದ್ಯ ಈಗ ಸಬ್​ ಡಿವಿಷನ್​ನಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಪಶ್ಚಿಮ ಸಂಚಾರ ಸಬ್​ ಡಿವಿಷನ್ ಮಾರ್ಪಡಿಸಿ ಆದೇಶ ನೀಡಿದೆ. ಪಶ್ಚಿಮ ಸಂಚಾರ ಉಪವಿಭಾಗದ ಜತೆಗೆ ವಿಜಯನಗರ ಉಪವಿಭಾಗ ಸೇರ್ಪಡೆ ಮಾಡಲಾಗಿದೆ. ಬೆಂಗಳೂರು ಪೂರ್ವ ವಿಭಾಗದ ಆಗ್ನೇಯ ಸಬ್​ಡಿವಿಷನ್​ ಕೂಡ ವಿಂಗಡಣೆ ಮಾಡಲಾಗಿದೆ. ಆಗ್ನೇಯ ಸಬ್​ ಡಿವಿಷನ್​ ಜತೆಗೆ ಆಡುಗೋಡಿ ಸಬ್​ ಡಿವಿಷನ್​ ರಚಿಸಲಾಗಿದೆ. ಹೊಸದಾಗಿ ಹೆಚ್​ಎಸ್​ಆರ್​ ಲೇಔಟ್​ ಸಬ್​ ಡಿವಿಷನ್​ ಸೇರ್ಪಡೆ ಮಾಡಲಾಗಿದೆ. ಉತ್ತರ ವಿಭಾಗದ ಯಶವಂತಪುರ ಸಬ್ ಡಿವಿಷನ್​ ವಿಂಗಡಿಸಿ ಯಶವಂತಪುರ, ಪೀಣ್ಯ ಸಬ್​ ಡಿವಿಷನ್​ಗಳಾಗಿ ಮಾರ್ಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಜಡೆ ಜಡೆ ಜಗಳ: ನಡು ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿನಿಯರ ಬಡೆದಾಟ; ವಿಡಿಯೋ ವೈರಲ್​

ಪಶ್ಚಿಮ ವಿಭಾಗದ ಕೆಂಗೇರಿ ಗೇಟ್, ವಿಜಯನಗರ ಸಬ್​ಡಿವಿಷನ್​ ಮಾರ್ಪಾಡು ಮಾಡಲಾಗಿದೆ. ಹೊಸದಾಗಿ ಕೆಂಗೇರಿ ಸಬ್​ಡಿವಿಷನ್​ ಸೇರ್ಪಡೆ ಮಾಡಲಾಗಿದೆ. ಮೈಸೂರಿನ ನರಸಿಂಹರಾಜ, ಕೃಷ್ಣರಾಜ ಸಬ್ ಡಿವಿಷನ್​ನಲ್ಲೂ ಮಾರ್ಪಾಡು ಮಾಡಲಾಗಿದೆ. ಹೊಸದಾಗಿ ವಿಜಯನಗರ ಸಬ್​ ಡಿವಿಷನ್​ ಸೇರ್ಪಡೆ ಮಾಡಿ ಆದೇಶಿಸಲಾಗಿದೆ. ಇನ್ನು ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸಬ್​ ಡಿವಿಷನ್​ನಲ್ಲೂ ಬದಲಾವಣೆ ಮಾಡಲಾಗಿದೆ. ಶಿವಮೊಗ್ಗ ಸಬ್ ಡಿವಿಷನ್ ಎ, ಬಿ ಸಬ್​ ಡಿವಿಷನ್​ ಆಗಿ ಮಾರ್ಪಾಡು ಮಾಡಲಾಗಿದೆ. ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ಸಬ್ ಡಿವಿಷನ್​ನಲ್ಲೂ ಬದಲಾವಣೆ ಮಾಡಲಾಗಿದ್ದು ಜಿಲ್ಲೆಯಲ್ಲಿ ಹೊಸದಾಗಿ ಚನ್ನರಾಯಪಟ್ಟಣ ಸಬ್​ ಡಿವಿಷನ್​ ಸೇರಿಸಲಾಗಿದೆ. ವಿಜಯಪುರ ಜಿಲ್ಲೆ 3 ಸಬ್​ ಡಿವಿಷನ್​ಗಳಿಂದ 4 ಸಬ್​ ಡಿವಿಷನ್​ಗೆ ಏರಿಸಲಾಗಿದೆ. ಹೊಸದಾಗಿ ವಿಜಯಪುರ ಗ್ರಾಮಾಂತರ ಸಬ್​ ಡಿವಿಷನ್​ ಸೇರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಬ್​ ಡಿವಿಷನ್​ ಕೂಡ ಮಾರ್ಪಟ್ಟಿದ್ದು ಹೊಸದಾಗಿ ಬೆಳ್ತಂಗಡಿ ಸಬ್ ಡಿವಿಷನ್​ ಸೇರ್ಪಡೆ ಮಾಡಲಾಗಿದೆ. ಸಬ್​ ಡಿವಿಷನ್​ಗಳ ಪೊಲೀಸ್​ ಠಾಣೆಗಳನ್ನು ಅದಲು ಬದಲು ಮಾಡಿ ಸರ್ಕಾರ ಆದೇಶಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:07 am, Tue, 27 December 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್