AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಪೊಲೀಸ್ ಇಲಾಖೆಯ ಸಬ್​ ಡಿವಿಷನ್​ನಲ್ಲಿ ಮಹತ್ವದ ಬದಲಾವಣೆ; ಠಾಣೆಗಳನ್ನು ಹೆಚ್ಚಿಸಿ ಸರ್ಕಾರ ಆದೇಶ

ಪಶ್ಚಿಮ ಸಂಚಾರ ಉಪವಿಭಾಗದ ಜತೆಗೆ ವಿಜಯನಗರ ಉಪವಿಭಾಗ ಸೇರ್ಪಡೆ ಮಾಡಲಾಗಿದೆ. ಬೆಂಗಳೂರು ಪೂರ್ವ ವಿಭಾಗದ ಆಗ್ನೇಯ ಸಬ್​ಡಿವಿಷನ್​ ಕೂಡ ವಿಂಗಡಣೆ ಮಾಡಲಾಗಿದೆ.

ರಾಜ್ಯ ಪೊಲೀಸ್ ಇಲಾಖೆಯ ಸಬ್​ ಡಿವಿಷನ್​ನಲ್ಲಿ ಮಹತ್ವದ ಬದಲಾವಣೆ; ಠಾಣೆಗಳನ್ನು ಹೆಚ್ಚಿಸಿ ಸರ್ಕಾರ ಆದೇಶ
ಕರ್ನಾಟಕ ರಾಜ್ಯ ಪೊಲೀಸ್​
TV9 Web
| Edited By: |

Updated on:Dec 27, 2022 | 7:07 AM

Share

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್​ ಡಿವಿಷನ್​ನಲ್ಲಿ(State Police Department Sub Division) ಮಹತ್ವದ ಬದಲಾವಣೆ ಮಾಡಲಾಗಿದೆ. ಸಂಚಾರ, ಕಾನೂನು ಸುವ್ಯವಸ್ಥೆ ಠಾಣೆಗಳ ಸಬ್ ಡಿವಿಷನ್​ಗಳನ್ನು ಹೆಚ್ಚಳ ಮಾಡಲಾಗಿದೆ. ಪೊಲೀಸ್ ಮಹಾ ನಿರ್ದೇಶಕರು ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಸದ್ಯ ಈಗ ಸಬ್​ ಡಿವಿಷನ್​ನಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ಪಶ್ಚಿಮ ಸಂಚಾರ ಸಬ್​ ಡಿವಿಷನ್ ಮಾರ್ಪಡಿಸಿ ಆದೇಶ ನೀಡಿದೆ. ಪಶ್ಚಿಮ ಸಂಚಾರ ಉಪವಿಭಾಗದ ಜತೆಗೆ ವಿಜಯನಗರ ಉಪವಿಭಾಗ ಸೇರ್ಪಡೆ ಮಾಡಲಾಗಿದೆ. ಬೆಂಗಳೂರು ಪೂರ್ವ ವಿಭಾಗದ ಆಗ್ನೇಯ ಸಬ್​ಡಿವಿಷನ್​ ಕೂಡ ವಿಂಗಡಣೆ ಮಾಡಲಾಗಿದೆ. ಆಗ್ನೇಯ ಸಬ್​ ಡಿವಿಷನ್​ ಜತೆಗೆ ಆಡುಗೋಡಿ ಸಬ್​ ಡಿವಿಷನ್​ ರಚಿಸಲಾಗಿದೆ. ಹೊಸದಾಗಿ ಹೆಚ್​ಎಸ್​ಆರ್​ ಲೇಔಟ್​ ಸಬ್​ ಡಿವಿಷನ್​ ಸೇರ್ಪಡೆ ಮಾಡಲಾಗಿದೆ. ಉತ್ತರ ವಿಭಾಗದ ಯಶವಂತಪುರ ಸಬ್ ಡಿವಿಷನ್​ ವಿಂಗಡಿಸಿ ಯಶವಂತಪುರ, ಪೀಣ್ಯ ಸಬ್​ ಡಿವಿಷನ್​ಗಳಾಗಿ ಮಾರ್ಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಜಡೆ ಜಡೆ ಜಗಳ: ನಡು ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿನಿಯರ ಬಡೆದಾಟ; ವಿಡಿಯೋ ವೈರಲ್​

ಪಶ್ಚಿಮ ವಿಭಾಗದ ಕೆಂಗೇರಿ ಗೇಟ್, ವಿಜಯನಗರ ಸಬ್​ಡಿವಿಷನ್​ ಮಾರ್ಪಾಡು ಮಾಡಲಾಗಿದೆ. ಹೊಸದಾಗಿ ಕೆಂಗೇರಿ ಸಬ್​ಡಿವಿಷನ್​ ಸೇರ್ಪಡೆ ಮಾಡಲಾಗಿದೆ. ಮೈಸೂರಿನ ನರಸಿಂಹರಾಜ, ಕೃಷ್ಣರಾಜ ಸಬ್ ಡಿವಿಷನ್​ನಲ್ಲೂ ಮಾರ್ಪಾಡು ಮಾಡಲಾಗಿದೆ. ಹೊಸದಾಗಿ ವಿಜಯನಗರ ಸಬ್​ ಡಿವಿಷನ್​ ಸೇರ್ಪಡೆ ಮಾಡಿ ಆದೇಶಿಸಲಾಗಿದೆ. ಇನ್ನು ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಸಬ್​ ಡಿವಿಷನ್​ನಲ್ಲೂ ಬದಲಾವಣೆ ಮಾಡಲಾಗಿದೆ. ಶಿವಮೊಗ್ಗ ಸಬ್ ಡಿವಿಷನ್ ಎ, ಬಿ ಸಬ್​ ಡಿವಿಷನ್​ ಆಗಿ ಮಾರ್ಪಾಡು ಮಾಡಲಾಗಿದೆ. ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ಸಬ್ ಡಿವಿಷನ್​ನಲ್ಲೂ ಬದಲಾವಣೆ ಮಾಡಲಾಗಿದ್ದು ಜಿಲ್ಲೆಯಲ್ಲಿ ಹೊಸದಾಗಿ ಚನ್ನರಾಯಪಟ್ಟಣ ಸಬ್​ ಡಿವಿಷನ್​ ಸೇರಿಸಲಾಗಿದೆ. ವಿಜಯಪುರ ಜಿಲ್ಲೆ 3 ಸಬ್​ ಡಿವಿಷನ್​ಗಳಿಂದ 4 ಸಬ್​ ಡಿವಿಷನ್​ಗೆ ಏರಿಸಲಾಗಿದೆ. ಹೊಸದಾಗಿ ವಿಜಯಪುರ ಗ್ರಾಮಾಂತರ ಸಬ್​ ಡಿವಿಷನ್​ ಸೇರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಬ್​ ಡಿವಿಷನ್​ ಕೂಡ ಮಾರ್ಪಟ್ಟಿದ್ದು ಹೊಸದಾಗಿ ಬೆಳ್ತಂಗಡಿ ಸಬ್ ಡಿವಿಷನ್​ ಸೇರ್ಪಡೆ ಮಾಡಲಾಗಿದೆ. ಸಬ್​ ಡಿವಿಷನ್​ಗಳ ಪೊಲೀಸ್​ ಠಾಣೆಗಳನ್ನು ಅದಲು ಬದಲು ಮಾಡಿ ಸರ್ಕಾರ ಆದೇಶಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:07 am, Tue, 27 December 22

ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ