AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಗಿಲು ಬೆನ್ನಲ್ಲೇ ನಾಗವಾರ ಬಳಿ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ: 30ಕ್ಕೂ ಹೆಚ್ಚು ಮನೆ, ಶೆಡ್, ಗ್ಯಾರೇಜ್ ಧ್ವಂಸ

ಬೆಂಗಳೂರಿನ ಕೋಗಿಲು ಲೇಔಟ್​​ನಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಬೆನ್ನಲ್ಲೇ ಮತ್ತೊಂದು ಸುತ್ತಿನ ಕಾರ್ಯಾಚರಣೆಯನ್ನು ಸರ್ಕಾರ ಕೈಗೆತ್ತಿಕೊಂಡಿದೆ. ನಾಗವಾರ ಬಳಿಯ ಸಾರಾಯಿ ಪಾಳ್ಯದಲ್ಲಿ ಕೂಡ ಬಿಡಿಎಗೆ ಸೇರಿದ ಭೂಮಿಯನ್ನು ಮರುಸ್ವಾಧೀನ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಸಿಬಿಗಳು ಗರ್ಜಿಸಿವೆ. ಹೀಗಾಗಿ ಬಿಡಿಎ ಜಾಗ ಒತ್ತುವರಿ ಮಾಡಿಕೊಂಡವರೀಗ ಬೀದಿಪಾಲಾಗಿದ್ದಾರೆ.

ಕೋಗಿಲು ಬೆನ್ನಲ್ಲೇ ನಾಗವಾರ ಬಳಿ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ: 30ಕ್ಕೂ ಹೆಚ್ಚು ಮನೆ, ಶೆಡ್, ಗ್ಯಾರೇಜ್ ಧ್ವಂಸ
ಸಾರಾಯಿ ಪಾಳ್ಯದಲ್ಲಿ ಬಿಡಿಎಗೆ ಸೇರಿದ ಜಾಗ ಮರುಸ್ವಾಧೀನ
Ganapathi Sharma
|

Updated on: Jan 09, 2026 | 7:33 AM

Share

ಬೆಂಗಳೂರು, ಜನವರಿ 9: ಕೋಗಿಲು ಲೇಔಟ್​ನಲ್ಲಿ (Kogilu Layout) ಸರ್ಕಾರದ ಭೂಮಿ ಒತ್ತುವರಿ ಮಾಡಿದ್ದವರಿಗೆ ಬಿಗ್ ಶಾಕ್ ನೀಡಿದ ಬೆನ್ನಲ್ಲೇ ನಾಗವಾರದಲ್ಲೂ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ನಾಗವಾರದ ಥಣಿಸಂದ್ರ ಬಳಿಯ ಸಾರಾಯಿ ಪಾಳ್ಯದಲ್ಲಿ ಬಿಡಿಎಗೆ (BDA) ಸೇರಿದ ಸರ್ವೆ ಸಂಬರ್ 28 ರ 2 ಎಕರೆ ಜಾಗವನ್ನು ಮರುಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಜಾಗದಲ್ಲಿದ್ದ 30ಕ್ಕೂ ಹೆಚ್ಚು ಮನೆ, ಶೆಡ್ ಹಾಗೂ ಗ್ಯಾರೇಜ್​ಗಳನ್ನು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಿ ಕೆಡವಲಾಗಿದೆ.

ಇನ್ನು ಬಿಡಿಎ ಒತ್ತುವರಿ ತೆರವು ಕಾರ್ಯಾಚರಣೆ ವಿರುದ್ಧ ಸ್ಥಳೀಯ ನಿವಾಸಿಗಳು ಭಾರೀ ಆಕ್ರೋಶ ಹೊರಹಾಕಿದ್ದಾರೆ. ಸುಮಾರು 20 ವರ್ಷಗಳಿಂದ ಇಲ್ಲೇ ವಾಸ ಮಾಡುತ್ತಿರುವುದಾಗಿ ಹೇಳುತ್ತಿರುವ ನಿರಾಶ್ರಿತರು ಅಗತ್ಯ ದಾಖಲೆಗಳನ್ನ ಹೊಂದಿದ್ದರೂ, ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡದೇ ಅಮಾನವೀಯತೆ ತೋರಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಆದರೆ, ನಿಯಮಾನುಸಾರ ಮತ್ತು ಕೋರ್ಟ್ ಆದೇಶನಕ್ಕನುಗುಣವಾಗಿಯೇ ಕಾರ್ಯಾಚರಣೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಗರ್ಜಿಸಿದ ಜೆಸಿಬಿ: ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ

ಮೇಲ್ನೋಟಕ್ಕೆ ಕೋಗಿಲು ಲೇಔಟ್ ರೀತಿಯಲ್ಲಿಯೇ ಸರ್ಕಾರಿ ಜಾಗವನ್ನು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಲಾಗಿರುವ ಆರೋಪಗಳೂ ಇವೆ. ಆದರೆ ಇದು ಸರ್ಕಾರಿ ಜಾಗ ಎಂಬುದು ಗೊತ್ತಿದ್ದರೂ ಒಂದಷ್ಟು ಮಂದಿಗೆ ಇ ಖಾತಾ, ರಿಜಿಸ್ಟ್ರೇಷನ್ ಪತ್ರಗಳನ್ನು ಮಾಡಿಕೊಟ್ಟವರು ಯಾರು? ಇಷ್ಟು ಮನೆಗಳು ತಲೆ ಎತ್ತುವ ತನಕ ಅಧಿಕಾರಿಗಳು ಏನು ಮಾಡುತ್ತಿದ್ದರು ಎಂಬ ವಿಚಾರವೂ ಗೊತ್ತಾಗಬೇಕಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್