AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಗೆ ಭರ್ಜರಿ ಸರ್ಜರಿ: ಐವರು ಕಾರ್ಯಾಧ್ಯಕ್ಷರನ್ನ ಬದಲಾಯಿಸಿ ಹೊಸ ಮುಖಗಳಿಗೆ ಮಣೆ ಹಾಕಲು ಎಐಸಿಸಿ ಪ್ಲಾನ್

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಾನಾ ಪ್ರಯೋಗಗಳಿಗೆ ಮುಂದಾಗಿದೆ. ಸದ್ಯ ಐವರು ಕಾರ್ಯಾಧ್ಯಕ್ಷರನ್ನ ಬದಲಾಯಿಸಲು ಕಾಂಗ್ರೆಸ್ ಚಿಂತನೆ ನಡೆಸಿದ್ದು ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಚಂದ್ರಪ್ಪ, ಈಶ್ವರ್ ಖಂಡ್ರೆಗೆ ರಿಲೀವ್ ಸಿಗಲಿದೆ.

ಲೋಕಸಭೆ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಗೆ ಭರ್ಜರಿ ಸರ್ಜರಿ: ಐವರು ಕಾರ್ಯಾಧ್ಯಕ್ಷರನ್ನ ಬದಲಾಯಿಸಿ ಹೊಸ ಮುಖಗಳಿಗೆ ಮಣೆ ಹಾಕಲು ಎಐಸಿಸಿ ಪ್ಲಾನ್
ಸಿದ್ದರಾಮಯ್ಯ-ಡಿಕೆ ಶಿವಕುಮಾರ್
TV9 Web
| Edited By: |

Updated on:Oct 14, 2023 | 8:56 AM

Share

ಬೆಂಗಳೂರು, ಅ.14: ಲೋಕಸಭಾ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಕಾಂಗ್ರೆಸ್​​ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಜೊತೆಗೆ ಆಪರೇಷನ್​ ಕಾಂಗ್ರೆಸ್​​ಗೂ ಕೈ ಹಾಕಿರುವ ರಾಜ್ಯ ನಾಯಕರು ಹಲವು ಜೆಡಿಎಸ್​​-ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನದಲ್ಲಿದ್ದಾರೆ (Karnataka Congress). ಇನ್ನು ಮತ್ತೊಂದೆಡೆ ರಾಜ್ಯ ಕಾಂಗ್ರೆಸ್​ಗೆ ಶೀಘ್ರದಲ್ಲೇ ಭರ್ಜರಿ ಸರ್ಜರಿ ಆಗಲಿದೆ. ಐವರು ಕಾರ್ಯಾಧ್ಯಕ್ಷರನ್ನ ಬದಲಾಯಿಸಲು ಕಾಂಗ್ರೆಸ್ ಚಿಂತನೆ ನಡೆಸಿದ್ದು ಲೊಕಸಭೆಗೂ ಮುನ್ನ ಹೊಸ ಮುಖಗಳಿಗೆ ಮಣೆ ಹಾಕಲು ಎಐಸಿಸಿ ಪ್ಲಾನ್ ಮಾಡಿದೆ. ಜಾತಿ ಸಮೀಕರಣಕ್ಕೆ ಮಣೆ ಹಾಕಲಾಗುತ್ತಿದೆ.

ಹೌದು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಾನಾ ಪ್ರಯೋಗಗಳಿಗೆ ಮುಂದಾಗಿದೆ. ಸದ್ಯ ಐವರು ಕಾರ್ಯಾಧ್ಯಕ್ಷರನ್ನ ಬದಲಾಯಿಸಲು ಕಾಂಗ್ರೆಸ್ ಚಿಂತನೆ ನಡೆಸಿದ್ದು ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಚಂದ್ರಪ್ಪ, ಈಶ್ವರ್ ಖಂಡ್ರೆಗೆ ರಿಲೀವ್ ಸಿಗಲಿದೆ. ಇನ್ನು ಎಐಸಿಸಿ, ರಾಜ್ಯ ಘಟಕದಿಂದಲೂ ಪರ್ಯಾಯ ಹೆಸರು ಕೇಳಿದೆ. ರಾಜ್ಯ ಕಾಂಗ್ರೆಸ್ ಘಟಕ ಜಾತಿ ಸಮೀಕರಣಕ್ಕೆ ಮಣೆ ಹಾಕುತ್ತಿದೆ. ಕೆಪಿಸಿಸಿ ಹೊಸ ಕಾರ್ಯಧ್ಯಕ್ಷರ ಸ್ಥಾನಕ್ಕೆ ನಾಲ್ವರ ಹೆಸರು ಶಿಫಾರಸ್ಸು ಮಾಡಿದೆ. ಜಿ.ಸಿ.ಚಂದ್ರಶೇಖರ್, ಅಂಜಲಿ ನಿಂಬಾಳ್ಕರ್, ವಿನಯ್ ಕುಲಕರ್ಣಿ, ವಸಂತ ಕುಮಾರ್, ವಿನಯ್ ಕುಮಾರ್ ಸೊರಕೆ ಹೆಸರು ಕಳಿಸಿದೆ.

ಜಾತಿ ಸಮೀಕರಣಕ್ಕೆ ಮಣೆ

ಇನ್ನು ಒಕ್ಕಲಿಗ ಸಮುದಾಯದಿಂದ ಜಿ.ಸಿ.ಚಂದ್ರಶೇಖರ್, ಮಹಿಳಾ ಕೋಟದಡಿ ಅಂಜಲಿ ನಿಂಬಾಳ್ಕರ್, ಲಿಂಗಾಯಿತ ಕೋಟದಡಿ ವಿನಯ್ ಕುಲಕರ್ಣಿ, ಈಡಿಗ ಸಮುದಾಯದಿಂದ ವಿನಯ್ ಕುಮಾರ್ ಸೊರಕೆ, ದಲಿತ ಎಡಗೈ ಸಮುದಾಯದಿಂದ ವಸಂತ್ ಕುಮಾರ್ ಹೆಸರನ್ನು ಕೆಪಿಸಿಸಿ ಶಿಫಾರಸ್ಸು ಮಾಡಿದೆ. ಹಾಘೂ ಮುಸ್ಲಿಂ ಸಮುದಾಯದಿಂದ ಸಲಿಂ ಅಹಮದ್ ಕಾರ್ಯಧ್ಯಕ್ಷರಾಗಿ ಮುಂದುವರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Breaking Kannada News Live: ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಮುಂದುವರಿದ ಐಟಿ ದಾಳಿ

ಕೆಲ ದಿನಗಳ ಹಿಂದೆ ಲೋಕ ಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಸಚಿವ ಚಲುವರಾಯಸ್ವಾಮಿ ಪತ್ನಿ ನಿಲ್ಲಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಮಂಡ್ಯ ಕಾಂಗ್ರೆಸ್ ರವಿಕುಮಾರ್ ಗೌಡ, ಮತ್ತೊಂದು ಮಹಿಳಾ ಅಭ್ಯರ್ಥಿಯ ಹೆಸರನ್ನು ಮುಂದಿಟ್ಟಿದ್ದಾರೆ. ಶಾಸಕ ರವಿಕುಮಾರ್ ಗೌಡ ಅವರು, ಮಾಜಿ ಸಿಎಂ ಎಸ್​​ಎಂ ಕೃಷ್ಣ ಪುತ್ರಿ ಶಾಂಭವಿ ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ. ಎಸ್‌ಎಂ ಕೃಷ್ಣ ಪುತ್ರಿ ಶಾಂಭವಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ರವಿಕುಮಾರ್ ಗೌಡ ಆಗ್ರಹಿಸಿದ್ದಾರೆ. ನಾವು ಎಂಪಿ ಚುನಾವಣೆ ಗೆಲ್ಲಬೇಕಿದೆ. ಎಸ್​ಎಂಕೆ ಪುತ್ರಿ ಶಾಂಭವಿ ಅಥವಾ ಚಲುವರಾಯಸ್ವಾಮಿ ಪತ್ನಿ ಧನಲಕ್ಷ್ಮಿ ಅವರಿಗೆ ಟಿಕೆಟ್ ನೀಡಲಿ ಎಂದಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:37 am, Sat, 14 October 23

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?