AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಸಾಧ್ಯತೆ

ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆಯೇ ಪೊಲೀಸ್ ಇಲಾಖೆಯಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಎರಡ್ಮೂರು ವರ್ಷದಿಂದ ಒಂದೇ ಕಡೆ ತಳವೂರಿರುವ ಹಿರಿಯ, ಕಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಕಾಂಗ್ರೆಸ್ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 16, 2023 | 4:49 PM

ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆಯೇ ಪೊಲೀಸ್ ಇಲಾಖೆಯಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಎರಡ್ಮೂರು ವರ್ಷದಿಂದ ಒಂದೇ ಕಡೆ ತಳವೂರಿರುವ ಹಿರಿಯ, ಕಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಜತೆಗೆ, ಪಕ್ಷಗಳನ್ನು ನೆಚ್ಚಿಕೊಂಡಿದ್ದ ಅಧಿಕಾರಿಗಳಿಗೆ ಬೆಂಗಳೂರು ನಗರದಿಂದ ಬೇರೆಡೆಗೆ ವರ್ಗಾವಣೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಉನ್ನತ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಗಳ ಜೊತೆಗೆ ಕೆಳ ಹಂತದ ಅಧಿಕಾರಿಗಳಿಗೂ ವರ್ಗಾವಣೆ ಬಿಸಿ ತಟ್ಟಲಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಐದು ವರ್ಷಗಳ ಆಗು ಹೋಗುಗಳನ್ನು ಗಮನಿಸಿರುವ ಕಾಂಗ್ರೆಸ್ ನಾಯಕರು, ಅದಕ್ಕನುಗುಣವಾಗಿ ವರ್ಗಾವಣೆ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಲಾಗುತ್ತಿದೆ.

ಅನೇಕ ಬಾರಿ ಕೆಲವು ಅಧಿಕಾರಿಗಳು ಕಾಂಗ್ರೆಸ್ ನಾಯಕರನ್ನು ಎದರುಹಾಕಿಕೊಂಡಿದ್ದರು. ಪ್ರತಿಭಟನೆ ವೇಳೆ ಕೂಡ ಪೊಲೀಸ್ ಹಿರಿಯ ಅಧಿಕಾರಿಗಳ ವಿರುದ್ಧ ಕೆಲವು ಮಂದಿ ಕಾಂಗ್ರೆಸ್ ನಾಯಕರು ಅಸಮಧಾನಗೊಂಡಿದ್ದರು. ‘ನೀ ಯಾವ ಪಕ್ಷಕ್ಕೆ ಕೆಲಸ ಮಾಡ್ತೀಯ ಎಂಬುದು ಗೊತ್ತಿದೆ’ ಎಂದು ಕಾಂಗ್ರೆಸ್ ನಾಯಕರು ಧಮಕಿ ಹಾಕಿದ್ದು ಕೂಡ ವರದಿಯಾಗಿತ್ತು. ಸದ್ಯ ಆ ಅಧಿಕಾರಿ ಕೂಡ ಉನ್ನತ ಹುದ್ದೆಯಲ್ಲಿದ್ದಾರೆ.

ಬಹುತೇಕರ ಬದಲಾವಣೆ ಖಚಿತ

ಇನ್​​ಸ್ಪೆಕ್ಟರ್, ಎಸಿಪಿ, ಡಿಸಿಪಿ, ಹೆಚ್ಚುವರಿ ಪೊಲೀಸ್ ಆಯುಕ್ತ, ಜಂಟಿ ಪೊಲೀಸ್ ಆಯುಕ್ತ, ನಗರ ಪೊಲೀಸ್ ಆಯುಕ್ತ ಹೀಗೆ ಹಲವರ ಬದಲಾವಣೆ ಖಚಿತ ಎನ್ನಲಾಗುತ್ತಿದೆ. ಆಯಾ ವಿಭಾಗದ ಶಾಸಕ, ಸಚಿವರಿಂದ ರೆಕಮೆಂಡ್ ಮಾಡಿಸಿ ಬಂದ ಅಧಿಕಾರಿಗಳು ಕೂಡ ನಗರದಲ್ಲಿದ್ದಾರೆ. ಇವರನ್ನೂ ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಸದ್ಯ ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರನ್ನೂ ಚರ್ಗಾವಣೆ ಮಾಡುವ ಬಗ್ಗೆ ಚರ್ಚೆ ಮುಂದುವರೆದಿದೆ.

ಇದನ್ನೂ ಓದಿ: ಡಿಸಿಎಂ ಹುದ್ದೆ ಸೃಷ್ಟಿಸಿದರೆ ಕಾನೂನು ಹೋರಾಟ; ಕಾಂಗ್ರೆಸ್​ಗೆ ಎಚ್ಚರಿಕೆ ನೀಡಿದ ಆರ್​ಟಿಐ ಕಾರ್ಯಕರ್ತ ಹೇಳಿದ್ದೇನು?

ಹಿರಿತನದ ಆಧಾರದಲ್ಲಿ ದಯಾನಂದ್ ಅವರು ನಗರ ಪೊಲೀಸ್ ಆಯುಕ್ತರಾಗಬೇಕಿದೆ. ಪ್ರತಾಪ್ ರೆಡ್ಡಿ ನೇಮಕವಾಗುವ ಮುನ್ನವೇ ದಯಾನಂದ್ ಹೆಸರು ಕೇಳಿ ಬಂದಿತ್ತು. ಆದರೆ ನಂತರ ಪ್ರತಾಪ್ ರೆಡ್ಡಿ ಅವರನ್ನು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.

ಸರ್ಕಾರ ರಚನೆಯಾದ ಬಳಿಕ ಮೊದಲ ಕೆಲಸವೇ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಎಂದು ಮೂಲಗಳು ತಿಳಿಸಿವೆ. ಇದೇ ತಿಂಗಳ ಒಳಗೆ ಮೇಜರ್ ಸರ್ಜರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
ಯಮಧರ್ಮನಾಗಿ ಪ್ರತ್ಯಕ್ಷವಾದ ರಾಯಚೂರಿನ ಆರ್​ಸಿಬಿ ಅಭಿಮಾನಿ! ವಿಡಿಯೋ ವೈರಲ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್
VIDEO: ಹಾದೀಲಿ ಬೀದಿಲಿ, ನಡು ರೋಡಲ್ಲಿ... ಕುಣಿದು ಕುಪ್ಪಳಿಸಿದ RCB ಫ್ಯಾನ್