AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ: ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ

ಮಠಾಧೀಶರ ಸಮಾವೇಶ: ಉತ್ತರಪ್ರದೇಶದಂತೆ, ರಾಜ್ಯದಲ್ಲೂ ಯೋಗಿಗಳನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ ಹೇಳಿಕೆ ನೀಡಿದ್ದಾರೆ.

ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ: ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Jul 25, 2021 | 1:03 PM

Share

ಬೆಂಗಳೂರು: ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ ಎಂದು ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮಾವೇಶದಲ್ಲಿ ಹೇಳಿಕೆ ನೀಡಿರುವ ಶ್ರೀಗಳು, ಧರ್ಮವನ್ನ ಕಾಪಾಡಲು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಮಾಡಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಯೋಗಿಗಳನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ. 

“ರಾಜ್ಯದಲ್ಲಿ ಹಲವಾರು ಜಾತಿ ವ್ಯವಸ್ಥೆ ಇದೆ. ಆ ಜಾತಿಯಲ್ಲಿ ಮಠಾಧೀಶರು ಕೂಡ ಇದ್ದಾರೆ. ಯಾವುದೇ ಧರ್ಮವೇ ಇರಲಿ, ಅವರು ಧರ್ಮವನ್ನ ಉಳಿಸಿಕೊಂಡು ಹೋಗುತ್ತಾರೆ. ಧರ್ಮವನ್ನ ಕಾಪಾಡಲು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಮಾಡಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಯೋಗ್ಯ ಗುರುಗಳನ್ನು ಆಯ್ಕೆ ಮಾಡಲಿ” ಎಂದು ಅವರು ಸಲಹೆ  ನೀಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದ ವೈಟ್ ಪೆಟಲ್ಸ್​​ನಲ್ಲಿ ವಿವಿಧ ಸಮುದಾಯದ ಮಠಾಧೀಶರ ಸಮಾವೇಶ ನಡೆಯುತ್ತಿದ್ದು, ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಶೀರ್ಷಿಕೆ ಅಡಿಯಲ್ಲಿ ಮಹಾ ಸಮಾವೇಶಕ್ಕೆ ಚಾಲನೆ ನೀಡಲಾಗಿದೆ. ತುಮಕೂರು ಜಿಲ್ಲೆ ತಿಪಟೂರಿನ ಷಡಕ್ಷರಿ ರುದ್ರಮುನಿ ಸ್ವಾಮೀಜಿ, ಗದಗ ಜಿಲ್ಲೆ ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ಪುಷ್ಪಗಿರಿ ಸಂಸ್ಥಾನಮಠದ ಶ್ರೀ ಸೋಮಶೇಖರ ಸ್ವಾಮೀಜಿ, ಬೆಂಗಳೂರಿನ ಸರ್ಪಭೂಷಣ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಚಿಕ್ಕತೊಟ್ಟಿಲಕೆರೆ ಅಟವಿ ಶಿವಲಿಂಗ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.

ಸಮಾವೇಶಕ್ಕೆ ಸುಮಾರು ಒಂದು ಸಾವಿರ ಮಠಾಧೀಶರು ಸೇರುತ್ತಾರೆಂದು ದಿಂಘಾಲೇಶ್ವರ ಸ್ವಾಮೀಜಿಗಳು ಹೇಳಿಕೆ ನೀಡಿದ್ದರು. ಆದರೆ ನಿರೀಕ್ಷಿತ ಮಟ್ಟದಲ್ಲಿ ಸ್ವಾಮೀಜಿಗಳು ಬರದೇ, ಸುಮಾರು ೨೦೦ ಸ್ವಾಮೀಜಿಗಳು ಮಾತ್ರ ಆಗಮಿಸಿದ್ದಾರೆ.

ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಅನಿಶ್ಚಿತತೆ; ಡಿ.ಕೆ.ಶಿವಕುಮಾರ್

ಇದನ್ನೂ ಓದಿ: 6 ತಿಂಗಳಾದರೂ ಸಿಎಂ ಬಿಎಸ್‌ ಯಡಿಯೂರಪ್ಪರನ್ನು ಮುಂದುವರಿಸಿ, ಮಠಾಧೀಶರ ಮಾತಿಗೆ ಬೆಲೆ ಕೊಡಿ -ನಿಡುಮಾಮಿಡಿ ಸ್ವಾಮೀಜಿ ಮನವಿ

ಇದನ್ನೂ ಓದಿ: ದಿಢೀರ್ ಬೆಂಗಳೂರಿನತ್ತ ತೆರಳಿದ ಪ್ರಲ್ಹಾದ್ ಜೋಶಿ; ಕುತೂಹಲ ಮೂಡಿಸಿದ ಜೋಶಿ ನಡೆ

(Make a Yogi CM in Karnataka like Uttar Pradesh says Rudramuni Shivacharya Sri)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!