AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಬೆತ್ತಲೆ ಪ್ರತಿಭಟನೆಗೆ ಖರ್ಗೆ ಸಮರ್ಥನೆ: ದೇಶದ ಹಿತಕ್ಕಾಗಿ ಪ್ರೊಟೆಸ್ಟ್​​​​ ಎಂದ AICC ಅಧ್ಯಕ್ಷ

AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ನ ಅರೆಬೆತ್ತಲೆ ಪ್ರತಿಭಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಸಹಜ, ದೇಶದ ಹಿತಕ್ಕಾಗಿ ಇದು ಅಗತ್ಯ ಎಂದಿದ್ದಾರೆ. ಕಾರ್ಯಕರ್ತರ ಬಂಧನ ಖಂಡಿಸಿದ ಖರ್ಗೆ, ಬಿಜೆಪಿಯ ಹಿಂದಿನ ಪ್ರತಿಭಟನೆಗಳನ್ನೂ ಉಲ್ಲೇಖಿಸಿ ಕೌಂಟರ್​​ ಕೊಟ್ಟಿದ್ದಾರೆ. ಕೆಲವು ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ಖರ್ಗೆಯವರ ಈ ನಿಲುವು ಕೆಲವರ ಹುಬ್ಬೇರಿಸಿದೆ.

ಅರೆಬೆತ್ತಲೆ ಪ್ರತಿಭಟನೆಗೆ ಖರ್ಗೆ ಸಮರ್ಥನೆ: ದೇಶದ ಹಿತಕ್ಕಾಗಿ ಪ್ರೊಟೆಸ್ಟ್​​​​ ಎಂದ AICC ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆImage Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on:Feb 24, 2026 | 12:49 PM

Share

ಬೆಂಗಳೂರು, ಫೆಬ್ರವರಿ 24: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಯೂತ್​ ಕಾಂಗ್ರೆಸ್​ ಮುಖಂಡರ ಬಂಧನವನ್ನು ಖಂಡಿಸುತ್ತೇನೆ ಎಂದಿರುವ ಖರ್ಗೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ ಹಿತಕ್ಕಾಗಿ ಇಂತಹ ಪ್ರೊಟೆಸ್ಟ್​​ಗಳು ಆಗುತ್ತವೆ ಎಂದು ಹೇಳಿದ್ದಾರೆ. ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ನಡೆಯನ್ನು ಕೆಲ ಕಾಂಗ್ರೆಸ್​​ ನಾಯಕರೇ ಖಂಡಿಸಿರುವ ನಡುವೆ ಮಲ್ಲಿಕಾರ್ಜುನ ಖರ್ಗೆ ಈ ಹೇಳಿಕೆ ಹುಬ್ಬೇರುವಂತೆ ಮಾಡಿದೆ.

ಖರ್ಗೆ ಕಿಡಿ

ಕಾಮನ್ ವೆಲ್ತ್ ಗೇಮ್​​ ವೇಳೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿರಲಿಲ್ವಾ? ಯೂತ್​​ ಕಾಂಗ್ರೆಸ್​​ನವರು ಗಮನ ಸೆಳೆಯುವ ನಿಟ್ಟಿನಲ್ಲಿ ಪ್ರೊಟೆಸ್ಟ್​​ ನಡೆಸಿದ್ದಾರೆ. ಯೂತ್​ ಕಾಂಗ್ರೆಸ್​ ಪ್ರತಿಭಟನೆ ಬಗ್ಗೆ ಮೋದಿ ಮಾತನಾಡಿರುವು ಮತ್ತು ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಖಂಡಿಸೋದಾಗಿ ಖರ್ಗೆ ಹೇಳಿದ್ದಾರೆ. ಅಲ್ಲದೆ, ಅಮೆರಿಕ ಅಧ್ಯಕ್ಷ ಟ್ರಂಪ್​ ಹೇಳಿದ್ದನ್ನು ಪ್ರಧಾನಿ ಮೋದಿ ಕೇಳುತ್ತಿದ್ದು, ಅವರು ಸರೆಂಡರ್ ಆಗಿದ್ದಾರೆ ಅಂತಲೂ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಜಗತ್ತಿನ ಮುಂದೆ ಬೆತ್ತಲಾದ ಕಾಂಗ್ರೆಸ್; ಎಐ ಸಮಿಟ್​ನಲ್ಲಿ ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಹಲವರ ಅಸಮಾಧಾನ

ಶಿಸ್ತಿನ ಪಾಠ ಮಾಡಿದ್ದ ‘ಕೈ’ ನಾಯಕಿ

ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ವರ್ತನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿ ವಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದ ನಡುವೆ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಸ್ವಪಕ್ಷ ಕಾರ್ಯಕರ್ತರ ನಡೆಯನ್ನು ಖಂಡಿಸಿದ್ದರು. ಕಾರ್ಯಕರ್ತರಿಗೆ ಶಿಸ್ತಿನ ಪಾಠ ಮಾಡಿದ್ದ ಅವರು, ಅಂತಾರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಶಿಸ್ತು ಮತ್ತು ಸಭ್ಯತೆ ಅತ್ಯಂತ ಮುಖ್ಯ ಎಂದು ಹೇಳಿದ್ದಿದ್ದು ದೊಡ್ಡ ಸುದ್ದಿಯಾಗಿತ್ತು.

ಅಂದು ನಡೆದಿದ್ದೇನು?

ಭಾರತ್ ಮಂಟಪಂನಲ್ಲಿ ನಡೆದ ಎಐ ಶೃಂಗಸಭೆಯ ಸಂದರ್ಭ ಯುವ ಕಾಂಗ್ರೆಸ್ಸಿನ 10 ಮಂದಿ ನಾಯಕರು ಏಕಾಏಕಿ ತಾವು ತೊಟ್ಟಿದ್ದ ಶರ್ಟನ್ನು ಕಳಚಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.  ‘ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ’ ಎಂಬ ಸ್ಲೋಗನ್ ಹೊಂದಿರುವ ಟಿ-ಶರ್ಟ್‌ಗಳನ್ನು ಕೈಯಲ್ಲಿ ಹಿಡಿದು ಬೀಸುವ ಮೂಲಕ, ಜನರ ಗಮನ ಸೆಳೆಯುವ ಯತ್ನ ನಡೆದಿತ್ತು. ನೇಪಾಳದ ಜೆನ್‌ ಝಿ ಪ್ರತಿಭಟನೆಯಿಂದ ಪ್ರೇರಿತರಾದ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಗಲಭೆ ಸೃಷ್ಟಿಸಲು ಪಿತೂರಿ ನಡೆಸಿದ್ದರು ಎಂಬ ವಿಚಾರ ಪೊಲೀಸ್ ತನಿಖೆ ವೇಳೆ ಬಯಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:40 pm, Tue, 24 February 26

Follow Us