AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿಯನ್ನು ‘ಸುಪ್ರೀಂ’ ಕೋರ್ಟ್‌ ಎತ್ತಿ ಹಿಡಿದಿದ್ದು ಸ್ವಾಗತಾರ್ಹ : ಮಲ್ಲಿಕಾರ್ಜುನ ಖರ್ಗೆ

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿಯನ್ನು ಸುಪ್ರಿಂ ಕೋರ್ಟ್​ ಎತ್ತಿ ಹಿಡಿದಿರುವುದು ಸ್ವಾಗತಾರ್ಹ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ

ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿಯನ್ನು ‘ಸುಪ್ರೀಂ’ ಕೋರ್ಟ್‌ ಎತ್ತಿ ಹಿಡಿದಿದ್ದು ಸ್ವಾಗತಾರ್ಹ : ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
TV9 Web
| Edited By: |

Updated on: Nov 07, 2022 | 6:23 PM

Share

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು (Economically Weaker Sections EWS) ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಾತನಾಡಿ ಮೀಸಲಾತಿಗೆ ಸಂಸತ್‌ನಲ್ಲಿ ನಾವೆಲ್ಲಾ ಒಮ್ಮತದಿಂದ ಒಪ್ಪಿಗೆ ನೀಡಿದ್ದೆವು. ಮೀಸಲಾತಿಯನ್ನು ‘ಸುಪ್ರೀಂ’ ಕೋರ್ಟ್‌  (Supreme Court) ಎತ್ತಿ ಹಿಡಿದಿದೆ, ಸ್ವಾಗತಿಸುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು (Economically Weaker Sections EWS) ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು.

ಐವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠದಲ್ಲಿ ನಾಲ್ವರು ಮೀಸಲಾತಿ ಪರವಾಗಿ ಹಾಗೂ ಒಬ್ಬರು ಭಿನ್ನಮತದ ತೀರ್ಪು ನೀಡಿದರು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ತ್ರಿವೇದಿ, ಫಾರ್ದಿವಾಲ, ಯು.ಯು.ಲಲಿತ್ ಮೀಸಲಾತಿ ಪರವಾಗಿ ತೀರ್ಪು ಕೊಟ್ಟರು. ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಭಿನ್ನಮತ ತೀರ್ಪು ನೀಡಿದರು. ಆರ್ಥಿಕ ಮಾನದಂಡಗಳನ್ನು ಆಧರಿಸಿದ ಮೀಸಲಾತಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆಯೇ? ಹೀಗೆ ಮಾಡಿದರೆ ಸಂವಿಧಾನದ 103ನೇ ತಿದ್ದುಪಡಿಯು ಸಂವಿಧಾನದ ಮೂಲ ಆಶಯದ ಉಲ್ಲಂಘನೆಯಾಗುತ್ತದೆಯೇ? ಖಾಸಗಿ ಸಂಸ್ಥೆಗಳಿಗೆ ನೇಮಕಾತಿ ಅಥವಾ ದಾಖಲಾತಿಗೆ ಸಂಬಂಧಿಸಿದ ವಿಚಾರದಲ್ಲಿ ನಿರ್ದೇಶನ ನೀಡಲು ಸರ್ಕಾರಗಳಿಗೆ ವಿಶೇಷ ಅಧಿಕಾರ ನೀಡಲು ಅವಕಾಶವಿದೆಯೇ ಎಂಬ ಅಂಶಗಳನ್ನೂ ನ್ಯಾಯಾಲಯವು ಪರಿಶೀಲನೆಗೆ ಒಳಪಡಿಸಿತು.

ಸಂವಿಧಾನದ 15 (6) ಮತ್ತು 16 (6) 103ನೇ ತಿದ್ದುಪಡಿಯ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರ ಮೀಸಲಾತಿ ನೀಡಲು ಅನುವು ಮಾಡಿಕೊಳ್ಳಲಾಯಿತು. ಪರಿಶಿಷ್ಟ ಜಾತಿ (ಎಸ್​ಸಿ), ಪರಿಶಿಷ್ಟ ವರ್ಗ (ಎಸ್​ಟಿ) ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರದ ವ್ಯಕ್ತಿಗಳ ಕುಟುಂಬದ ವಾರ್ಷಿಕ ಆದಾಯವು ₹ 8 ಲಕ್ಷಕ್ಕೂ ಕಡಿಮೆಯಿದ್ದರೆ ಈ ಕಾನೂನಿನ ಅನ್ವಯ ಮೀಸಲಾತಿ ನೀಡಲು ಅವಕಾಶ ಸಿಗುತ್ತದೆ.

ಸಂವಿಧಾನದ 103ನೇ ತಿದ್ದುಪಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಪರಿಗಣಿಸಿದ ಮತ್ತೊಂದು ಅಂಶ ಶೇ 50ರ ಮೀಸಲಾತಿ ನಿಯಮ. 1992ರ ಇಂದ್ರಾ ಸಾಹ್ನಿ ಪ್ರಕರಣದಲ್ಲಿ (ಮಂಡಲ್ ಆಯೋಗ ಪ್ರಕರಣ) 9 ಸದಸ್ಯರಿದ್ದ ನ್ಯಾಯಪೀಠವು ಮೀಸಲಾತಿಯ ಒಟ್ಟು ಪ್ರಮಾಣ ಶೇ 50 ಮೀರಬಾರದು. ವಿಶೇಷ ಸಂದರ್ಭದಲ್ಲಿ ಈ ನಿರ್ಬಂಧಕ್ಕೆ ವಿನಾಯ್ತಿಯಿದೆ ಎಂದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನಿವೃತ್ತಿಗೆ ಒಂದು ದಿನ ಮೊದಲು ಈ ಮಹತ್ವದ ತೀರ್ಪು ಬಂದಿದೆ. ಲಲಿತ್ ಅವರು ನಾಳೆ (ನ 8) ನಿವೃತ್ತರಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?