AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಕನ್ನಡ ಗೊತ್ತಿಲ್ಲ ಎಂದಿದ್ದಕ್ಕೆ ವ್ಯಕ್ತಿಯೋರ್ವನ ಜೊತೆ ಟ್ರಾಫಿಕ್​ ಪೊಲೀಸರ ಅನುಚಿತ ವರ್ತನೆ

ಕನ್ನಡದಲ್ಲಿ ಮಾತನಾಡದಿದ್ದಕ್ಕೆ ಚಾಲಕನೋರ್ವನ ಜೊತೆ ಟ್ರಾಫಿಕ್​ ಪೊಲೀಸ್​ ಒಬ್ಬರು ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ನಿನ್ನೆ (ಏ.10) ರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಘಟನೆ ನಡೆದಿದೆ.

Bengaluru: ಕನ್ನಡ ಗೊತ್ತಿಲ್ಲ ಎಂದಿದ್ದಕ್ಕೆ ವ್ಯಕ್ತಿಯೋರ್ವನ ಜೊತೆ ಟ್ರಾಫಿಕ್​ ಪೊಲೀಸರ ಅನುಚಿತ ವರ್ತನೆ
ಟ್ರಾಫಿಕ್ ಪೊಲೀಸ್ (ಎಡಚಿತ್ರ) ಕಾರು ಚಾಲಕ (ಬಲಚಿತ್ರ)​
ವಿವೇಕ ಬಿರಾದಾರ
|

Updated on: Apr 11, 2023 | 9:04 AM

Share

ಬೆಂಗಳೂರು: ಕನ್ನಡದಲ್ಲಿ (Kannada) ಮಾತನಾಡದಿದ್ದಕ್ಕೆ ಚಾಲಕನೋರ್ವನ ಜೊತೆ ಟ್ರಾಫಿಕ್​ ಪೊಲೀಸ್​ ಒಬ್ಬರು ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ನಿನ್ನೆ (ಏ.10) ರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಘಟನೆ ನಡೆದಿದೆ. ಈ ಬಗ್ಗೆ ಕಾರು ಚಾಲಕ ಇಕ್ರಮ್​ ಅನ್ಸಾರಿ ತನಗೆ ಆದ ಅನ್ಯಾಯದ ಕುರಿತು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದು, ಸಾಕಷ್ಟು ವೈರಲ್​ ಆಗುತ್ತಿದೆ. ಕಾರು​ ಪಾರ್ಕಿಂಗ್ (Car Parking)​ ವಿಚಾರಕ್ಕೆ ಟ್ರಾಫಿಕ್​ ಪೊಲೀಸ್​ ಮತ್ತು ಇಕ್ರಮ್​ ಅನ್ಸಾರಿ ನಡುವೆ ವಾಗ್ವಾದ ನಡೆದಿದೆ.

ಇಕ್ರಮ್​ ಅನ್ಸಾರಿ ಓರ್ವ ಜಿಮ್​ ತರಬೇತಿದಾರರಾಗಿದ್ದಾರೆ. ನಿನ್ನೆ ಇವರು ರಸ್ತೆ ಬದಿಯಲ್ಲಿ ಕಾರ್​ ಪಾರ್ಕಿಂಗ್​ ಮಾಡಿದ್ದಾರೆ. ಈ ವೇಳೆ ಟ್ರಾಫಿಕ್​ ಪೊಲೀಸ್​​ ಇಲ್ಲಿ ಕಾರ್​ ಪಾರ್ಕ್​ ಮಾಡಬಾರದು, ಇದು ನೋ ಪಾರ್ಕಿಂಗ್​ ಈಗ ದಂಡ ಕಟ್ಟಿ ಎಂದಿದ್ದಾರೆ. ಆಗ ಇಕ್ರಮ್​ ಅನ್ಸಾರಿ ಇಲ್ಲಿ ಎಲ್ಲೂ ನೋ ಪಾರ್ಕಿಂಗ್​ ಬೋರ್ಡ್​ ಇಲ್ಲ, ನಾನೇಕೆ ದಂಡ ಕಟ್ಟಲಿ ಎಂದು ಪ್ರಶ್ನಿಸಿದ್ದಾರೆ.

ಆಗ ಪೊಲೀಸ್ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಾರೆ. ಇದಕ್ಕೆ ಇಕ್ರಮ್​ ಅನ್ಸಾರಿ ಕನ್ನಡ ಗೊತ್ತಿಲ್ಲ ಎಂದಿದ್ದಾರೆ. ಹೀಗೆ ಇಬ್ಬರ ನಡುವೆ ವಾಗ್ವಾದ ತಾರಕಕ್ಕೇರಿದ್ದು,​ ಕಾರ್​ ಡಾಕ್ಯೂಮೆಂಟ್ಸ್​​ ತೋರಿಸು ಎಂದು ಪೊಲೀಸ್​ ಕೇಳಿದ್ದಾರೆ. ಆಗ ಇಕ್ರಮ್​ ಅನ್ಸಾರಿ ನಾನೇಕೆ ನಿಮಗೆ ತೋರಿಸಲಿ, ನೀವು ಎಸ್‌ಐ ಅಥವಾ ಉನ್ನತ ಶ್ರೇಣಿ ಅಧಿಕಾರಿಯಾ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪೊಲೀಸ್ ಇದನ್ನು ​ಕೋರ್ಟ್​​ಲ್ಲಿ ಮಾತನಾಡು ಎಂದಿದ್ದಾರೆ. ಘಟನೆಯ ಬಗ್ಗೆ ಅನ್ಸಾರಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿವರವಾದ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜೈಲಿನ ಅನುಭವ ಕೊಡುತ್ತೆ ಬೆಂಗಳೂರಿನಲ್ಲಿರುವ ಈ ರೆಸ್ಟೋರೆಂಟ್: ವಿಶೇಷ ಏನಿದೆ ಗೊತ್ತಾ?

ಅವರು ಬರೆದಿದ್ದಾರೆ, ನಾನು ಕನ್ನಡವನ್ನು ಗೌರವಿಸುತ್ತೇನೆ ಮತ್ತು ಅದರ ಮೂಲಭೂತ ಅಂಶಗಳನ್ನು ತಿಳಿದಿದ್ದೇನೆ. ಟ್ರಾಫಿಕ್ ಕಾನೂನಿನ ಪ್ರಕಾರ, ಎಸ್‌ಐ ಅಥವಾ ಉನ್ನತ ಶ್ರೇಣಿಯ ಅಧಿಕಾರಿಯು ಮಾತ್ರ ನಿಮ್ಮ ಪೇಪರ್‌ಗಳನ್ನು ಕೇಳುವ ಹಕ್ಕನ್ನು ಹೊಂದಿರುತ್ತಾರೆ. ಘಟನೆ ವೇಳೆ ಟ್ರಾಫಿಕ್​ ಪೊಲೀಸ್​ ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು ಎಂದು ಆರೋಪಿಸಿದರು.

ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಅವರು ನನಗೆ ದಂಡ ವಿಧಿಸಿದರು ಆರೋಪದ ಮೇಲೆ ನಂತರ ದಂಡ ವಿಧಿಸಲಾಯಿತು ಎಂದು ಅನ್ಸಾರಿ ಹೇಳಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ