AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಚಯ, ಮದುವೆಯಾಗುವುದಾಗಿ ನಂಬಿಸಿ ಹಣಕ್ಕೆ ಬ್ಲ್ಯಾಕ್​ಮೇಲ್: ಆರೋಪಿ ಅರೆಸ್ಟ್

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಚಯ ಆಗಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಜತೆ ಸ್ನೇಹ ಬೆಳೆಸಿದ್ದ ಆರೋಪಿ ವಿಜಯ್‌, ಮಹಿಳೆ ಜೊತೆ ಸಲುಗೆಯಿಂದ ಇದ್ದ ಸಮಯದಲ್ಲಿ ತೆಗೆದ ಕೆಲವು ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದ.

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಚಯ, ಮದುವೆಯಾಗುವುದಾಗಿ ನಂಬಿಸಿ ಹಣಕ್ಕೆ ಬ್ಲ್ಯಾಕ್​ಮೇಲ್: ಆರೋಪಿ ಅರೆಸ್ಟ್
ಆರೋಪಿ ವಿಜಯ್‌ ಕುಮಾರ್‌
TV9 Web
| Edited By: ಆಯೇಷಾ ಬಾನು|

Updated on:Jan 20, 2022 | 8:04 AM

Share

ಬೆಂಗಳೂರು: ಮಹಿಳೆ ಮದುವೆಯಾಗುವುದಾಗಿ ನಂಬಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡಿದ ಹಿನ್ನೆಲೆ ಆರೋಪಿ ವಿಜಯ್‌ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೊನಿಯಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ ಮದುವೆಯಾಗುವುದಾಗಿ ನಂಬಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದ.

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಚಯ ಆಗಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಜತೆ ಸ್ನೇಹ ಬೆಳೆಸಿದ್ದ ಆರೋಪಿ ವಿಜಯ್‌, ಮಹಿಳೆ ಜೊತೆ ಸಲುಗೆಯಿಂದ ಇದ್ದ ಸಮಯದಲ್ಲಿ ತೆಗೆದ ಕೆಲವು ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದ. ಐವತ್ತು ಸಾವಿರ ಹಣ ನೀಡಿಬೇಕು ಇಲ್ಲವಾದ್ರೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಹಣ ನೀಡದ ಹಿನ್ನೆಲೆ ಮಹಿಳೆ ಹೆಸರಲ್ಲಿ ಇನ್‌ಸ್ಟಾಗ್ರಾಂನಲ್ಲಿ 3 ಖಾತೆ ತೆರೆದಿದ್ದ. ಇಬ್ಬರೂ ಜೊತೆಯಲ್ಲಿರುವ ಫೋಟೋವನ್ನು ಮಹಿಳೆ ಕುಟುಂಬಸ್ಥರಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದ.

ಆಗ ಕುಟುಂಬಸ್ಥರ ಮುಂದೆ ಮಾನ ಹೋಯ್ತು ಅಂತ ನೊಂದ ಮಹಿಳೆ ಫೋಟೋ ಡಿಲೀಟ್ ಮಾಡಲು ಆರೋಪಿ ವಿಜಯ್‌ ಕುಮಾರ್ಗೆ ಬೇಡಿಕೊಂಡಿದ್ದಳು. ಆಗ ಆರೋಪಿ ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದ. ಮಹಿಳೆ ಫೋನ್ ಪೇ ಮೂಲಕ 50 ಸಾವಿರ ಹಣ ನೀಡಿದ್ದಳು. ಇದಾದ ನಂತರ ಆರೋಪಿ ವಿಜಯ್ ಪದೇಪದೆ ಮಹಿಳೆ ಬಳಿ ಹಣಕ್ಕೆ ಬೇಡಿಕೆ ಇಡ್ತಿದ್ದ. ಇದರಿಂದ ಬೇಸತ್ತ ಮಹಿಳೆ ಈಶಾನ್ಯ ವಿಭಾಗ CEN ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿಜಯ್ ಬಳಿ ಎರಡು ಮೊಬೈಲ್ ಫೋನ್, ಡಾಂಗಲ್ ವಶಕ್ಕೆ‌ ಪಡೆಯಲಾಗಿದೆ.

ಇದನ್ನೂ ಓದಿ: Petrol and Diesel Rate Today: ಬೆಂಗಳೂರು ಸೇರಿದಂತೆ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

Published On - 7:58 am, Thu, 20 January 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ