AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಚಯ, ಮದುವೆಯಾಗುವುದಾಗಿ ನಂಬಿಸಿ ಹಣಕ್ಕೆ ಬ್ಲ್ಯಾಕ್​ಮೇಲ್: ಆರೋಪಿ ಅರೆಸ್ಟ್

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಚಯ ಆಗಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಜತೆ ಸ್ನೇಹ ಬೆಳೆಸಿದ್ದ ಆರೋಪಿ ವಿಜಯ್‌, ಮಹಿಳೆ ಜೊತೆ ಸಲುಗೆಯಿಂದ ಇದ್ದ ಸಮಯದಲ್ಲಿ ತೆಗೆದ ಕೆಲವು ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದ.

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಚಯ, ಮದುವೆಯಾಗುವುದಾಗಿ ನಂಬಿಸಿ ಹಣಕ್ಕೆ ಬ್ಲ್ಯಾಕ್​ಮೇಲ್: ಆರೋಪಿ ಅರೆಸ್ಟ್
ಆರೋಪಿ ವಿಜಯ್‌ ಕುಮಾರ್‌
TV9 Web
| Edited By: ಆಯೇಷಾ ಬಾನು|

Updated on:Jan 20, 2022 | 8:04 AM

Share

ಬೆಂಗಳೂರು: ಮಹಿಳೆ ಮದುವೆಯಾಗುವುದಾಗಿ ನಂಬಿಸಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡಿದ ಹಿನ್ನೆಲೆ ಆರೋಪಿ ವಿಜಯ್‌ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮ್ಯಾಟ್ರಿಮೊನಿಯಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ ಮದುವೆಯಾಗುವುದಾಗಿ ನಂಬಿಸಿ ಬ್ಲ್ಯಾಕ್‌ಮೇಲ್ ಮಾಡಿದ್ದ.

ಕನ್ನಡ ಮ್ಯಾಟ್ರಿಮೊನಿಯಲ್ಲಿ ಪರಿಚಯ ಆಗಿ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಜತೆ ಸ್ನೇಹ ಬೆಳೆಸಿದ್ದ ಆರೋಪಿ ವಿಜಯ್‌, ಮಹಿಳೆ ಜೊತೆ ಸಲುಗೆಯಿಂದ ಇದ್ದ ಸಮಯದಲ್ಲಿ ತೆಗೆದ ಕೆಲವು ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದ. ಐವತ್ತು ಸಾವಿರ ಹಣ ನೀಡಿಬೇಕು ಇಲ್ಲವಾದ್ರೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಹಣ ನೀಡದ ಹಿನ್ನೆಲೆ ಮಹಿಳೆ ಹೆಸರಲ್ಲಿ ಇನ್‌ಸ್ಟಾಗ್ರಾಂನಲ್ಲಿ 3 ಖಾತೆ ತೆರೆದಿದ್ದ. ಇಬ್ಬರೂ ಜೊತೆಯಲ್ಲಿರುವ ಫೋಟೋವನ್ನು ಮಹಿಳೆ ಕುಟುಂಬಸ್ಥರಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದ.

ಆಗ ಕುಟುಂಬಸ್ಥರ ಮುಂದೆ ಮಾನ ಹೋಯ್ತು ಅಂತ ನೊಂದ ಮಹಿಳೆ ಫೋಟೋ ಡಿಲೀಟ್ ಮಾಡಲು ಆರೋಪಿ ವಿಜಯ್‌ ಕುಮಾರ್ಗೆ ಬೇಡಿಕೊಂಡಿದ್ದಳು. ಆಗ ಆರೋಪಿ ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದ. ಮಹಿಳೆ ಫೋನ್ ಪೇ ಮೂಲಕ 50 ಸಾವಿರ ಹಣ ನೀಡಿದ್ದಳು. ಇದಾದ ನಂತರ ಆರೋಪಿ ವಿಜಯ್ ಪದೇಪದೆ ಮಹಿಳೆ ಬಳಿ ಹಣಕ್ಕೆ ಬೇಡಿಕೆ ಇಡ್ತಿದ್ದ. ಇದರಿಂದ ಬೇಸತ್ತ ಮಹಿಳೆ ಈಶಾನ್ಯ ವಿಭಾಗ CEN ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವಿಜಯ್ ಬಳಿ ಎರಡು ಮೊಬೈಲ್ ಫೋನ್, ಡಾಂಗಲ್ ವಶಕ್ಕೆ‌ ಪಡೆಯಲಾಗಿದೆ.

ಇದನ್ನೂ ಓದಿ: Petrol and Diesel Rate Today: ಬೆಂಗಳೂರು ಸೇರಿದಂತೆ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

Published On - 7:58 am, Thu, 20 January 22

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ