AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ಹೆಸರು ಬಳಸಿ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಆಂಜನೇಯ ದೇಗುಲದ ಅರ್ಚಕ ಮಂಜುನಾಥ್, ತನಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗೊತ್ತು. ಅಧಿಕಾರಿಗಳು ಗೊತ್ತು ಎಂದು ಹೇಳಿ ವಂಚನೆ ಮಾಡಿದ್ದ. ಈ ಬಗ್ಗೆ ತನಿಖೆ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸುಬ್ರಮಣ್ಯಪುರ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಹೆಸರು ಬಳಸಿ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್
ವಂಚಕ ಮಂಜುನಾಥ್ ಅಲಿಯಾಸ್ ಮಹಾಬಲ ಮತ್ತು ಅವರ ತಾಯಿ
TV9 Web
| Updated By: ಆಯೇಷಾ ಬಾನು|

Updated on: Jul 27, 2021 | 10:06 AM

Share

ಬೆಂಗಳೂರು: ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ವಂಚನೆ ಮಾಡಿದ್ದ ವಂಚಕ ಮಂಜುನಾಥ್ ಅಲಿಯಾಸ್ ಮಹಾಬಲನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಮಂಜುನಾಥ್‌ಗೆ ಸಹಾಯ ಮಾಡಿದ್ದ ಪೋಷಕರನ್ನೂ ಸಹ ಬಂಧಿಸಲಾಗಿದೆ.

ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಆಂಜನೇಯ ದೇಗುಲದ ಅರ್ಚಕ ಮಂಜುನಾಥ್, ತನಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗೊತ್ತು. ಅಧಿಕಾರಿಗಳು ಗೊತ್ತು ಎಂದು ಹೇಳಿ ವಂಚನೆ ಮಾಡಿದ್ದ. ಈ ಬಗ್ಗೆ ತನಿಖೆ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸುಬ್ರಮಣ್ಯಪುರ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ವಂಚಕ ಮಂಜುನಾಥ್ ಅಲಿಯಾಸ್ ಮಹಾಬಲ, ಆತನ ತಂದೆ ಹಾಗೂ ತಾಯಿಯನ್ನು ಬಂಧಿಸಲಾಗಿದೆ.

ಪ್ರಭಾವಿಗಳ ಜೊತೆ ತೆಗೆಸಿಕೊಂಡ ಫೋಟೊ ತೋರಿಸಿ ಬಿಲ್ಡ್ ಅಪ್ ಮಾಡಿ ಸರ್ಕಾರದ ಆಶ್ರಯ ಯೋಜನೆಯಡಿ ಮನೆ ಕಟ್ಟಿಸಿಕೊಡುವುದಾಗಿ ಸುಳ್ಳು ಹೇಳಿ ಮೋಸ ಮಾಡಲಾಗುತ್ತಿತ್ತು. ಸಿಎಂ ಗೊತ್ತು, ಕುಮಾರಣ್ಣ ಗೊತ್ತು, ಐಪಿಎಸ್ ಅಲೋಕ್ ಕುಮಾರ್, ರವಿ ಚನ್ನಣ್ಣನವರ್ ಗೊತ್ತು ಅಂತ ಪುಂಗಿ ಊದಿ ಯಾಮಾರಿಸಿ ಏರಿಯಾ ಜನರಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದ. ಆರೋಪಿ ಹೆಚ್ಡಿ ಕುಮಾರಸ್ವಾಮಿ ಹೆಸರನ್ನು ಬಳಸಿ ಹೆಚ್ಚಾಗಿ ವಂಚನೆ ಮಾಡಿದ್ದ ಕಾರಣ ವಂಚನೆಗೊಳಗಾದವರು ಹೆಚ್ಡಿಕೆ ಬಳಿ ದೂರು ನೀಡಿದ್ದರು. ಹೀಗಾಗಿ ಕುಮಾರಸ್ವಾಮಿ ಈ ಬಗ್ಗೆ ತನಿಖೆ ನಡೆಸಲು ದಕ್ಷಿಣ ವಿಭಾಗ ಡಿಸಿಪಿ‌ ಹರೀಶ್ ಪಾಂಡೆಗೆ ಸೂಚಿಸಿದ್ದು ಆರೋಪಿ ಅರೆಸ್ಟ್ ಆಗಿದ್ದಾನೆ.

Priest

ರವಿ ಡಿ.ಚನ್ನಣ್ಣನವರ್ ಜೊತೆ ಫೋಟೋ ತೆಗೆಸಿಕೊಂಡ ಅರ್ಚಕ

ಇದನ್ನೂ ಓದಿ: ‘ಜಯಂತಿ ಅಮ್ಮ ಮಾಡಿದ ಸಹಾಯವನ್ನು ನಾನು ಎಂದಿಗೂ ಮರೆಯಲ್ಲ’; ನಟಿ ಪದ್ಮಜಾ ರಾವ್​

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಫೋಟೋ ತೋರಿಸಿ ವಂಚಿಸಿದ ಅರ್ಚಕ; ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ