Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಹಿಳೆ ಸ್ನಾನ ಮಾಡುವುದನ್ನು ಕಿಟಕಿ ಮೂಲಕ ಕದ್ದು ನೋಡಿದ ಯುವಕ ಅರೆಸ್ಟ್

ಮಹಿಳೆ ಕಿರುಚುತ್ತಿದ್ದಂತೆ ಯುವಕ ಎಸ್ಕೇಪ್ ಆಗಿ ತನ್ನ ಮನೆ ಸೇರಿಕೊಂಡಿದ್ದಾನೆ. ಆದ್ರೆ ಕಿರುಚುವಾಗ ಮುಖ ಗಮನಿಸಿದ್ದ ಮಹಿಳೆ ತನ್ನ ಸೋದರ ಮಾವ ಮತ್ತು ಇತರರೊಂದಿಗೆ ನಿತಿನ್ ಮನೆಗೆ ತೆರಳಿ ಆತನನ್ನು ಪ್ರಶ್ನಿಸಿದ್ದಾಳೆ.

Bengaluru News: ಮಹಿಳೆ ಸ್ನಾನ ಮಾಡುವುದನ್ನು ಕಿಟಕಿ ಮೂಲಕ ಕದ್ದು ನೋಡಿದ ಯುವಕ ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Jun 12, 2023 | 7:55 AM

ಬೆಂಗಳೂರು: ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಿದ ಎಂಬ ಆರೋಪದ ಮೇಲೆ ಪೊಲೀಸರು ಯುವಕನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ಮಹಿಳೆಯೊಬ್ಬರು ಸ್ನಾನ(Woman Bath) ಮಾಡುತ್ತಿದ್ದುದನ್ನು ನೋಡಲು ಯುವಕ ನೆರೆಮನೆಯ ಕಿಟಕಿಯಿಂದ ಇಣುಕಿ ನೋಡಿದ್ದಾನೆ ಎನ್ನಲಾಗಿದ್ದು ಮಹಿಳೆ ದಾಖಲಿಸಿದ ಕೇಸ್ ಆಧಾರದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ(Sexual Assault). ಆರೋಪಿ ಖಾಸಗಿ ಸಂಸ್ಥೆಯ ಉದ್ಯೋಗಿ ನಿತಿನ್ ಎಂದು ತಿಳಿದು ಬಂದಿದೆ.

38 ವರ್ಷದ ಗೃಹಿಣಿ ವಿನುತಾ (ಹೆಸರು ಬದಲಿಸಲಾಗಿದೆ) ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆತನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ತನ್ನ ಮನೆಕೆಲಸಗಳನ್ನು ಮುಗಿಸಿ ಮಧ್ಯಾಹ್ನ 1.35ಕ್ಕೆ ವಾಶ್‌ರೂಮ್‌ಗೆ ಹೋಗಿದ್ದೆ ಎಂದು ವಿನುತಾ ಪೊಲೀಸರಿಗೆ ತಿಳಿಸಿದ್ದಾರೆ. ನಾನು ಸ್ನಾನ ಮಾಡುವಾಗ ಕಿಟಕಿಯಿಂದ ಯಾರೋ ಇಣುಕಿ ನೋಡುತ್ತಿರುವುದನ್ನು ಗಮನಿಸಿದೆ ಆಗ ಸಹಾಯಕ್ಕಾಗಿ ಕಿರುಚಿದೆ ಎಂದು ಮಹಿಳೆ ತಿಳಿಸಿದ್ದಾರೆ.

ಇದನ್ನೂ ಓದಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಪಾದಾಚಾರಿ ಸ್ಥಳದಲ್ಲೇ ಸಾವು: ಸ್ಥಳೀಯರಿಂದ ಹೆದ್ದಾರಿ ತಡೆದು ಪ್ರತಿಭಟನೆ

ಮಹಿಳೆ ಕಿರುಚುತ್ತಿದ್ದಂತೆ ಯುವಕ ಎಸ್ಕೇಪ್ ಆಗಿ ತನ್ನ ಮನೆ ಸೇರಿಕೊಂಡಿದ್ದಾನೆ. ಆದ್ರೆ ಕಿರುಚುವಾಗ ಮುಖ ಗಮನಿಸಿದ್ದ ಮಹಿಳೆ ತನ್ನ ಸೋದರ ಮಾವ ಮತ್ತು ಇತರರೊಂದಿಗೆ ನಿತಿನ್ ಮನೆಗೆ ತೆರಳಿ ಆತನನ್ನು ಪ್ರಶ್ನಿಸಿದ್ದಾಳೆ. ಬಳಿಕ ಎಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದು ಯುವಕ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಲೈಂಗಿಕ ಕಿರುಕುಳ ಆರೋಪದ ಮೇಲೆ ಯುವಕನನ್ನು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ